AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಎಸ್​​ಸಿ ಕರ್ಮಕಾಂಡದ ಮತ್ತಷ್ಟು ಸ್ಫೋಟಕ ಸಂಗತಿ ಬಯಲು: ಅಕ್ರಮದ ಹಣದಲ್ಲಿ ಗೆಳತಿಯೊಂದಿಗೆ ಮೋಜು ಮಸ್ತಿ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಒಂದೆಡೆ ಸಿಐಡಿ ತನಿಖೆ ನಡೆಸಿದ್ದರೆ, ಮತ್ತೊಂದೆಡೆ ಇಡಿ ಸಹ ಶೋಧ ನಡೆಸಿದ್ದು, ಈ ವೇಳೆ ಮತ್ತಷ್ಟು ಕರ್ಮಕಾಂಡ ಬಯಲಿಗೆ ಬಂದಿದೆ. ಹೌದು...ಕೆಪಿಎಸ್​​ಸಿ ಅಕ್ರಮ ಹಣದಿಂದ ಬಸವರಾಜ್ ಕನ್ನಾಳೆ ಹಾಗೂ ಐಎಎಸ್ ಅಧಿಕಾರಿ ಜ್ಞಾನೇಂದ್ ಕುಮಾರ್ ಮೋಜು ಮಸ್ತಿ ಮಾಡಿರುವುದು ಬೆಳಕಿಗೆ ಬಂದಿದೆ.

ಕೆಪಿಎಸ್​​ಸಿ ಕರ್ಮಕಾಂಡದ ಮತ್ತಷ್ಟು ಸ್ಫೋಟಕ ಸಂಗತಿ ಬಯಲು: ಅಕ್ರಮದ ಹಣದಲ್ಲಿ ಗೆಳತಿಯೊಂದಿಗೆ ಮೋಜು ಮಸ್ತಿ
Gyanendra Kumar And Basavaraj Kannale
ರಮೇಶ್ ಬಿ. ಜವಳಗೇರಾ
|

Updated on:Sep 20, 2026 | 10:34 AM

Share

ಬೆಂಗಳೂರು, (ಸೆಪ್ಟೆಂಬರ್ 20): ಕೆಪಿಎಸ್ಸಿ ಪಶುವೈದ್ಯಾಧಿಕಾರಿ ನೇಮಕ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಅಕ್ರಮದ ದುಡ್ಡಲ್ಲಿ ಐಎಎಸ್ ಅಧಿಕಾರಿ ಜ್ಞಾನೇಂದ್ ಕುಮಾರ್ ಮೋಜು-ಮಸ್ತಿ ಬಯಲಾಗಿದೆ. ಮಧ್ಯವರ್ತಿ ಬಸವರಾಜ್ ಕನ್ನಾಳೆ, ಜ್ಞಾನೇಂದ್ ಕುಮಾರ್ ಮೆಚ್ಚಿಸಲು ಖರ್ಚುಗಳಿಗೆ ಸುಮಾರು 11 ಲಕ್ಷ ವೆಚ್ಚ ಭರಿಸಿದ್ದಾನೆ. ಈ ವರ್ಷ ಜ್ಞಾನೇಂದ್ ಕುಮಾರ್ಮ ತ್ತು ಗೆಳತಿ ಸುತ್ತಾಡಲು ಬಸವರಾಜ್ ಕನ್ನಾಳೆ 23 ಏರ್ ಟಿಕೆಟ್ ಕೊಡಿಸಿದ್ದು, ಜ್ಞಾನೇಂದ್ ಕುಮಾರ್ ಗೆಳತಿ ಜೊತೆಗೆ ಉತ್ತರ ಪ್ರದೇಶ ಹಾಗೂ ವಿವಿಧ ಕಡೆ ಸುತ್ತಾಡಿರುವುದು ತನಿಖೆ ವೇಳೆ ಪತ್ತೆಯಾಗಿದೆ.

ಭೀಮಾ ಜ್ಯೂವೆಲ್ಲರಿ ಗೆ ಹಣ ವರ್ಗಾಯಿಸಲು ಬಸವರಾಜ್ ಕನ್ನಾಳೆ ಸ್ನೇಹಿತರ ಹೆಸರಿನಲ್ಲಿ ಬ್ಯಾಂಕ್ ಖಾತೆಗಳನ್ನ ತೆರೆರುವುದು ಗೊತ್ತಾಗಿದೆ. ಎಲ್ಲಾ ಮಾಹಿತಿಯನ್ನು‌ ಎಸ್ಪಿಪಿ  ಕೋರ್ಟ್ ಗೆ ನೀಡಿದೆ. ಕನ್ನಾಳೆ ಭಗವತಿ ಎಂಟರ್ ಪ್ರೈಸಸ್ ಮಾಲೀಕನಾಗಿದ್ದು, ತನ್ನ ಬೀದರ್ ನಲ್ಲಿರುವ ಭಗವತಿ ಎಂಟರ್ ಪ್ರೈಸಸ್ ಮೂಲ ಟಿಕೆಟ್ ಖರೀದಿಸಿದ್ದ. ಇನ್ನೊಂದೆಡೆ ಜ್ಞಾನೇಂದ್ ಕುಮಾರ್, ಮಾರ್ಚ್ ಮತ್ತು ಜೂನ್ ನಲ್ಲಿ ಗೆಳತಿಗಾಗಿ 52 ಲಕ್ಷ ರೂಪಾಯಿ ಮೌಲ್ಯದ ಚಿನ್ನ, ಡೈಮಂಡ್‌ ಖರೀದಿ ಮಾಡಿದ್ದಾರೆ. 1.90 ಲಕ್ಷ ನಗದು ಹಾಗೂ ಸ್ನೇಹಿತೆಯ ಕ್ರೆಡಿಟ್ ಕಾರ್ಡ್ ಮೂಲಕ 1 ಲಕ್ಷ ಸೇರಿದಂತೆ ಒಟ್ಟು 2.90 ಲಕ್ಷ ಪಾವತಿಸಲಾಗಿದೆ. ಉಳಿದ ಹಣವನ್ನ ಬೀದರ್ ನ ಓಂ ಲಕ್ಷ್ಮೀ ಸೌಹಾರ್ದ ಸಹಕಾರಿ  ಸಂಘ ನಿಯಮಿತದ ಕೋ ಆಪರೇಟಿವ್ ಬ್ಯಾಂಕ್ ಮೂಲಕ ಪಾವತಿ ಮಾಡಲಾಗಿದೆ ಎಂದು ನ್ಯಾಯಾಲಯಕ್ಕೆ ಸಲ್ಲಿಸಿದ್ದ ಆಕ್ಷೇಪಣೆ ಅರ್ಜಿಯಲ್ಲಿ ತಿಳಿಸಲಾಗಿದೆ.  ಚಿನ್ನ ಖರೀದಿಸುತ್ತಿರುವ ಸಿಸಿಟಿವಿ ದೃಶ್ಯಾವಳಿಯನ್ನು ಕೋರ್ಟ್ ಗೆ ಸಲ್ಲಿಸಲಾಗಿದೆ.

ಇದನ್ನೂ ಓದಿ: ಕೆಪಿಎಸ್​​ಸಿ ಹಗರಣ: ಸಿಐಡಿ ಆಯ್ತು ಈಗ ಇಡಿ ಇಕ್ಕಳದಲ್ಲಿ ಸಿಲುಕಿದ ಐಎಎಸ್ ಅಧಿಕಾರಿ

ಪಶುವೈದ್ಯಾಧಿಕಾರಿ ಹುದ್ದೆ ಗಿಟ್ಟಿಸಿಕೊಳ್ಳಲು ವಾಮಾ ಮಾರ್ಗದಲ್ಲಿ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳು ಇದಕ್ಕಾಗಿ ನಿರ್ದಿಷ್ಟ ಬ್ಯಾಂಕ್ ಖಾತೆಗಳಿಗೆ ಆನ್ ಲೈನ್ ಮೂಲಕ ಹಣ ವರ್ಗಾಯಿಸುವಂತೆ ಕನ್ನಾಳೆ ಸೂಚಿಸಿದ್ದ. ಕನ್ನಾಳೆ ಸೂಚಿಸಿದ ಬ್ಯಾಂಕ್ ಖಾತೆಗಳಿಗೆ 11 ಮಂದಿ ಆಕಾಂಕ್ಷಿ ಅಭ್ಯರ್ಥಿಗಳಿಂದ ಹಣ ಪಾವತಿ ಸುಮಾರು 60 ರಿಂದ 70 ಲಕ್ಷ ರೂ.ಗಳನ್ನು ಪಾವತಿಸಿರುವ ವಿಷಯವೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಕನ್ನಾಳೆಯ ತವರು ಜಿಲ್ಲೆ ಬೀದರ್‌ನಲ್ಲಿ  2019ರಲ್ಲಿ ಜ್ಞಾನೇಂದ್ರ ಸಿಇಓ ಆಗಿದ್ದಾಗ ಪರಿಚಯವಾಗಿದ್ದು, ಐಎಎಸ್ ಅಧಿಕಾರಿ ಪರಿಚಯ ಬಳಿಕ ವಾಣಿಜ್ಯ ಹಿತಾಸಕ್ತಿಗಳನ್ನು ಬೆಳೆಸಿಕೊಂಡಿದ್ದ. ಬಳಿಕ ಜ್ಞಾನೇಂದ್ರ 2024ರ ಮಾರ್ಚ್ ನಿಂದ 2026ರ ಮಾರ್ಚ್ ವರೆಗೆ  ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸುತ್ತಿದ್ದ. ಈ ವೇಳೆ ಕನ್ನಾಳೆ ಜೊತೆಗೆ ಅವ್ಯವಹಾರಗಳು ಮತ್ತಷ್ಟು ಹೆಚ್ಚಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:34 am, Sun, 20 September 26

Follow Us
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ