AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPSC ಮಾದರಿಯಲ್ಲೇ ಕೆಪಿಎಸ್​ಸಿ ಪರೀಕ್ಷೆ: ಟಿವಿ9ಗೆ ಕೆಪಿಎಸ್​ಸಿ ಕಾರ್ಯದರ್ಶಿ ಜಿ.ಸತ್ಯವತಿ ಮಾಹಿತಿ

UPSC ಮಾದರಿಯಲ್ಲೇ ಕೆಪಿಎಸ್​ಸಿ ಪರೀಕ್ಷೆ ನಡೆಯಲಿದೆ ಎಂದು ಟಿವಿ9ಗೆ ಕೆಪಿಎಸ್​ಸಿ ಕಾರ್ಯದರ್ಶಿ ಜಿ.ಸತ್ಯವತಿ ಮಾಹಿತಿ ನೀಡಿದ್ದಾರೆ. ಇದರ ಪ್ರಕಾರ, ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಜಾಮರ್ ಅಳವಡಿಕೆ ಮಾಡಲಾಗುವುದು. ಜೊತೆಗೆ, PU ಪರೀಕ್ಷಾ ಮಂಡಳಿಯ‌ ವ್ಯವಸ್ಥೆ ಅಳವಡಿಕೆ ಮಾಡಲಾಗುವುದು.

UPSC ಮಾದರಿಯಲ್ಲೇ ಕೆಪಿಎಸ್​ಸಿ ಪರೀಕ್ಷೆ: ಟಿವಿ9ಗೆ ಕೆಪಿಎಸ್​ಸಿ ಕಾರ್ಯದರ್ಶಿ ಜಿ.ಸತ್ಯವತಿ ಮಾಹಿತಿ
KPSC ಕಚೇರಿ
KUSHAL V
| Edited By: |

Updated on:Jun 23, 2021 | 1:33 PM

Share

ಬೆಂಗಳೂರು: UPSC ಮಾದರಿಯಲ್ಲೇ ಕೆಪಿಎಸ್​ಸಿ ಪರೀಕ್ಷೆ ನಡೆಯಲಿದೆ ಎಂದು ಟಿವಿ9ಗೆ ಕೆಪಿಎಸ್​ಸಿ ಕಾರ್ಯದರ್ಶಿ ಜಿ.ಸತ್ಯವತಿ ಮಾಹಿತಿ ನೀಡಿದ್ದಾರೆ. ಇದರ ಪ್ರಕಾರ, ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಜಾಮರ್ ಅಳವಡಿಕೆ ಮಾಡಲಾಗುವುದು. ಜೊತೆಗೆ, ಪಿಯು ಪರೀಕ್ಷಾ ಮಂಡಳಿಯ‌ ವ್ಯವಸ್ಥೆ ಅಳವಡಿಕೆ ಮಾಡಲಾಗುವುದು. ಕರ್ನಾಟಕ ಸೆಕ್ಯೂರ್ಡ್ ಎಕ್ಸಾಮಿನೇಷನ್ ಸಿಸ್ಟಂ ಅಳವಡಿಕೆಯ ಜೊತೆಗೆ ಪರೀಕ್ಷಾ ಕೇಂದ್ರದೊಳಗೆ ಸ್ಮಾರ್ಟ್ ಫೋನ್, ಬ್ಲೂ ಟೂತ್, ವೈಫೈ, ಮೈಕ್ರೋಚಿಪ್, ಎಲೆಕ್ಟ್ರಾನಿಕ್ ವಸ್ತುಗಳು ಮತ್ತು ಲೋಹದ ವಸ್ತುಗಳನ್ನು ಕೊಂಡೊಯ್ಯದಂತೆ ತೀವ್ರ ನಿಗಾ ವಹಿಸಲಾಗುವುದು ಎಂದು ಸತ್ಯವತಿ ಹೇಳಿದ್ದಾರೆ.

ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಅಧಿಕಾರಿಗಳು ಪರಿಶೀಲನೆ ಸಹ ನಡೆಸಲಿದ್ದಾರೆ. ಇದಲ್ಲದೆ, ಪರೀಕ್ಷಾ ಸಾಮಗ್ರಿ ಸಾಗಿಸುವ ವಾಹನಗಳಿಗೆ GPS ಅಳವಡಿಕೆ ಮಾಡಲಾಗುವುದು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲೂ ನಿರೀಕ್ಷಕರನ್ನು ನೇಮಿಸುವ ಜೊತೆಗೆ ದಿನದ 24 ಗಂಟೆಯೂ ಶಿಫ್ಟ್ ಪ್ರಕಾರ ಕಾರ್ಯ ನಿರ್ವಹಣೆ ಮಾಡಲು ಯೋಜನೆ ರೂಪಿಸಲಾಗುವುದು ಎಂದು ಟಿವಿ9ಗೆ ಕೆಪಿಎಸ್​ಸಿ ಕಾರ್ಯದರ್ಶಿ ಜಿ.ಸತ್ಯವತಿ ಹೇಳಿದ್ದಾರೆ.

ಮುಂದೂಡಲಾಗಿದ್ದ FDA ಪರೀಕ್ಷೆ ನಾಳೆ ನಡೆಯಲಿದೆ ಇನ್ನು, ಮುಂದೂಡಲಾಗಿದ್ದ FDA ಪರೀಕ್ಷೆ ನಾಳೆ ನಡೆಯಲಿದೆ ಎಂದು ಟಿವಿ9ಗೆ ಕೆಪಿಎಸ್​ಸಿ ಕಾರ್ಯದರ್ಶಿ ಜಿ.ಸತ್ಯವತಿ ತಿಳಿಸಿದ್ದಾರೆ. ಪ್ರವೇಶ ಪತ್ರದ ಜೊತೆಗೆ ಗುರುತಿನ ಚೀಟಿ ಕಡ್ಡಾಯ ಎಂದು ಸಹ ಹೇಳಿದರು.

ನಾಳೆ ಬೆಳಗ್ಗೆ 10 ರಿಂದ 11.30ರವರೆಗೆ ಸಾಮಾನ್ಯ ಜ್ಞಾನ ಮತ್ತು ಮಧ್ಯಾಹ್ನ 2-3.30 ರವರೆಗೆ ಸಾಮಾನ್ಯ ಕನ್ನಡ/ ಇಂಗ್ಲಿಷ್ ಪರೀಕ್ಷೆ ಇರಲಿದೆ. ರಾಜ್ಯದ 1,057 ಕೇಂದ್ರಗಳಲ್ಲಿ ನಾಳೆ ಪರೀಕ್ಷೆ ನಡೆಯಲಿದೆ. 433 ಕೇಂದ್ರಗಳನ್ನ ಸೂಕ್ಷ್ಮ ಎಂದು ಗುರುತಿಸಲಾಗಿದೆ. 3.74 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಾರೆ. 1,253 ಹುದ್ದೆಗಳಿಗೆ FDA ಪರೀಕ್ಷೆ ನಡೆಯಲಿದೆ.

ಬೆಂಗಳೂರಿನಲ್ಲಿ 78 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಜನವರಿ 24 ರಂದು ನಿಗದಿಯಾಗಿದ್ದ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಮುಂದೂಡಲಾಗಿತ್ತು.

ನಾಳಿನ KPSC ಪರೀಕ್ಷೆ ಮೇಲೆ ಸಿಸಿಬಿ ಪೊಲೀಸರ ಹದ್ದಿನ ಕಣ್ಣು ಇಡಲಿದ್ದಾರೆ. ಕೆಪಿಎಸ್​ಸಿ ಜೊತೆಗೆ ಸಿಸಿಬಿ ಪೊಲೀಸರಿಂದಲೂ ಪರೀಕ್ಷಾ ಕೇಂದ್ರಗಳನ್ನು ಮಾನಿಟರ್ ಮಾಡಲಾಗುವುದು. ಇದಲ್ಲದೆ, ಪೇಪರ್ ಪ್ರಿಂಟ್ ಆಗಿ ಪರೀಕ್ಷೆ ನಡೆಯೋವರೆಗೆ ತೀವ್ರ ನಿಗಾ ವಹಿಸಲಾಗುವುದು. ಕೆಪಿಎಸ್​ಸಿಯಿಂದ ಜಿಲ್ಲಾ ಖಜಾನೆಯವರೆಗೆ ಹದ್ದಿನ ಕಣ್ಣು ಇಡಲಾಗುವುದು.

ಜಿಲ್ಲಾ ಖಜಾನೆ ಆಧಿಕಾರಿಗಳ ಜೊತೆ ಸಿಸಿಬಿ ಪೊಲೀಸರು ಸಂಪರ್ಕದಲ್ಲಿದ್ದು ಪೇಪರ್ ಖಜಾನೆ ಸೇರಿ ಎಕ್ಸಾಂ ಸೆಂಟರ್ ತಲುಪೋವರೆಗೆ ನಿಗಾ ವಹಿಸಲಾಗುವುದು. FDA ಪರೀಕ್ಷೆ ಸಂಬಂಧ ಅಧಿಕಾರಿ, ಸಿಬ್ಬಂದಿ ಮೇಲೂ ಸಹ ನಿಗಾ ಇರಿಸಲಾಗುವುದು ಎಂದು ತಿಳಿದುಬಂದಿದೆ. ಕಳೆದ ಬಾರಿಯಾದ ಎಡವಟ್ಟು ಮರುಕಳಿಸದಂತೆ ಎಚ್ಚರಿಕೆ ವಹಿಸಿದ್ದು ಸಿಬ್ಬಂದಿ ದೂರವಾಣಿ ಕರೆಗಳು, ಚಲನವಲನ ಬಗ್ಗೆಯೂ ನಿಗಾ ಇಡಲಾಗುವುದು.

ಜೊತೆಗೆ, ಈಗಾಗಲೇ ಲೀಕಾಸುರರ ಮೇಲೆ ಕಣ್ಣಿಟ್ಟಿರುವ ಪೊಲೀಸರು ವೇಣುಗೋಪಾಲ್ ನೇತೃತ್ವದ ವಿಶೇಷ ತಂಡದಿಂದ ಪರೀಕ್ಷಾ ಪ್ರಕ್ರಿಯೆ ಮೇಲೆ ನಿಗಾ ಇರಿಸಲಾಗುವುದು. ಸಿಸಿಬಿ ಎಸಿಪಿ ವೇಣುಗೋಪಾಲ್ ನೇತೃತ್ವದಲ್ಲಿ ಪರೀಕ್ಷೆ ಮೇಲೆ ಹದ್ದಿನ ಕಣ್ಣು ಇಡಲಾಗುವುದು.

Published On - 4:56 pm, Sat, 27 February 21

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ