AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆ ಕ್ಷಣದಲ್ಲಿ ಕೆಪಿಎಸ್​ಸಿ ಗ್ರೂಪ್ ಬಿ ಪರೀಕ್ಷೆ ಮುಂದೂಡಿಕೆ: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಮತ್ತೆ ಶಾಕ್

ಕೆಪಿಎಸ್​ಸಿ ನಾಳೆ ನಡೆಯಬೇಕಿದ್ದ ಕೆಪಿಎಸ್​ಸಿಯ ವಿವಿಧ ಗ್ರೂಪ್-ಬಿ ಹುದ್ದೆಗಳ ಪರೀಕ್ಷೆ ಮುಂದೂಡಲಾಗಿದೆ. ಸರ್ಕಾರದ ಆದೇಶದಿಂದ ಎಲ್ಲಾ ಪ್ರವರ್ಗಗಳಿಗೆ 1 ಬಾರಿ ಅನ್ವಯವಾಗುವಂತೆ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ. ಹಾಗಾಗಿ ಹೀಗಾಗಿ ನಾಳೆ ನಡೆಯಬೇಕಿದ್ದ ಕೆಪಿಎಸ್​ಸಿ ಗ್ರೂಪ್ ಬಿ ಪರೀಕ್ಷೆ ಮುಂದೂಡಲಾಗಿದೆ.

ಕೊನೆ ಕ್ಷಣದಲ್ಲಿ ಕೆಪಿಎಸ್​ಸಿ ಗ್ರೂಪ್ ಬಿ ಪರೀಕ್ಷೆ ಮುಂದೂಡಿಕೆ: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಮತ್ತೆ ಶಾಕ್
ಕೊನೆ ಕ್ಷಣದಲ್ಲಿ ಕೆಪಿಎಸ್​ಸಿ ಗ್ರೂಪ್ ಬಿ ಪರೀಕ್ಷೆ ಮುಂದೂಡಿಕೆ: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಮತ್ತೆ ಶಾಕ್
ಗಂಗಾಧರ​ ಬ. ಸಾಬೋಜಿ
|

Updated on:Sep 13, 2024 | 7:07 PM

Share

ಬೆಂಗಳೂರು, ಸೆಪ್ಟೆಂಬರ್​ 13: ಕೊನೆ ಕ್ಷಣದಲ್ಲಿ ಕೆಪಿಎಸ್​ಸಿ (KPSC) ಗ್ರೂಪ್ ಬಿ ಪರೀಕ್ಷೆ ಮುಂದೂಡಲಾಗಿದೆ. ಆ ಮೂಲಕ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಕೆಪಿಎಸ್​ಸಿ ಮತ್ತೆ ಶಾಕ್ ಕೊಟ್ಟಿದೆ. ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆಯನ್ನು ಸರ್ಕಾರ ನೀಡಿದೆ. ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿ ಅನ್ವಯವಾಗುವಂತೆ ವಯೋಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ. ಹೀಗಾಗಿ ನಾಳೆಯಿಂದ ನಡೆಯಬೇಕಿದ್ದ ಕೆಪಿಎಸ್ಸಿ ಗ್ರೂಪ್ ಬಿ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ.

ಸರ್ಕಾರದ ಈ ಆದೇಶದಿಂದ ಎಲ್ಲಾ ಹುದ್ದಿಗಳಿಗೂ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ. ನಾಳೆ ಕಡ್ಡಾಯ ಕನ್ನಡ ಹಾಗೂ ಭಾನುವಾರ ಸ್ಪರ್ಧಾತ್ಮಕ ಪರೀಕ್ಷೆ ಇತ್ತು. ಆದರೆ ಸರ್ಕಾರ ಈ ನಿರ್ಧಾರದಿಂದ ಪರೀಕ್ಷೆ ಮುಂದೂಡಲಾಗಿದೆ. ಹೀಗಾಗಿ ಕೆಪಿಎಸ್ಸಿ ಕೈಗೊಂಡಿರುವ ಪರೀಕ್ಷೆಯಲ್ಲಿ ಕೊನೆ ಕ್ಷಣದ ಬದಲಾವಣೆಯಿಂದ‌ ಪರೀಕ್ಷಾರ್ಥಿಗಳು ಕಂಗೆಟ್ಟಿದ್ದಾರೆ.

ಪತ್ರಿಕಾ ಪ್ರಕಟಣೆಯಲ್ಲೇನಿದೆ?

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕೆಪಿಎಸ್​ಸಿ ನಾಳೆ ನಡೆಯಬೇಕಿದ್ದ ಕೆಪಿಎಸ್​ಸಿಯ ವಿವಿಧ ಗ್ರೂಪ್-ಬಿ ಹುದ್ದೆಗಳ ಪರೀಕ್ಷೆ ಮುಂದೂಡಲಾಗಿದೆ. 14-09-2024 ಮತ್ತು 15-09-2024ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ದಿನಾಂಕ ನಿಗದಿಯಾಗಿತ್ತು. ಅಭ್ಯರ್ಥಿಗಳನ್ನು ಪರೀಕ್ಷಾ ಉಪ ಕೇಂದ್ರಗಳ ಹಂಚಿಕೆ ಕೂಡ ಮಾಡಲಾಗಿತ್ತು.

ಇದನ್ನೂ ಓದಿ: ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಮತ್ತೆ ಮುಂದೂಡಿಕೆ: ಹೊಸ ದಿನಾಂಕ ನಿಗದಿಪಡಿಸಿದ ಕೆಪಿಎಸ್​​ಸಿ

ಈ ಮಧ್ಯೆ ದಿನಾಂಕ 10-09-2024ರಂದು ಕರ್ನಾಟಕ ಸರ್ಕಾರ ತನ್ನ ನಡಾವಳಿಗಳಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಟ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿ ಆದೇಶಿಸಿದೆ.

ಇದನ್ನೂ ಓದಿ: ಕೆಎಎಸ್​​ ಪ್ರಿಲಿಮ್ಸ್​ ಪರೀಕ್ಷೆ: ಕೋಲಾರದಲ್ಲಿ ಪರೀಕ್ಷಾರ್ಥಿಗಳಿಗೆ ಊಟ, ವಸತಿ ವ್ಯವಸ್ಥೆ ಮಾಡಿಸಿದ ಡಿಸಿ

ಹಾಗಾಗಿ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಮಾರ್ಚ್​ 13 ರನ್ವಯ ಅಧಿಸೂಚಿಸಿರುವ ಎಲ್ಲಾ ಹುದ್ದೆಗಳಿಗೂ ವಯೋಮಿತಿ ಸಡಿಲಿಕೆ ಅನ್ವಯಿಸಿ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:52 pm, Fri, 13 September 24

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?