AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPTCL ಎಇ, ಜೆಇ ಹುದ್ದೆಗಳ ಆಯ್ಕೆಪಟ್ಟಿ ರದ್ದು: ಮರುಪರೀಕ್ಷೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಸಿಎಲ್)ನ ಎಸಿ ಮತ್ತು ಜೆಇ ಹುದ್ದೆಗಳಿಗೆ ನಡೆದ ಪರೀಕ್ಷೆಯ ಆಯ್ಕೆ ಪಟ್ಟಿಯನ್ನು ಹೈಕೋರ್ಟ್ ರದ್ದುಗೊಳಿಸಿದೆ. 2024ರ ಫೆಬ್ರವರಿ 18ರ ಪರೀಕ್ಷೆಯಲ್ಲಿ ಭಾಗವಹಿಸಿದ ಅಭ್ಯರ್ಥಿಗಳಿಗೆ ಮರು ಪರೀಕ್ಷೆ ನಡೆಸಲು ಕೋರ್ಟ್ ಆದೇಶಿಸಿದೆ. ನೆಗೆಟಿವ್ ಮಾರ್ಕಿಂಗ್ ಬಗ್ಗೆ ಸೂಕ್ತ ಮಾಹಿತಿ ನೀಡದಿರುವುದನ್ನು ಪ್ರಶ್ನಿಸಿ ಅಭ್ಯರ್ಥಿಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ಕೋರ್ಟ್ ಪರಿಗಣಿಸಿದೆ.

KPTCL ಎಇ, ಜೆಇ ಹುದ್ದೆಗಳ ಆಯ್ಕೆಪಟ್ಟಿ ರದ್ದು: ಮರುಪರೀಕ್ಷೆಗೆ ಹೈಕೋರ್ಟ್ ಆದೇಶ
ಹೈಕೋರ್ಟ್
Ramesha M
| Edited By: |

Updated on: May 28, 2025 | 6:57 PM

Share

ಬೆಂಗಳೂರು, ಮೇ 28: 2024 ಮೇ 8ರ ಕೆಪಿಸಿಎಲ್​​​ನ (KPCL) ಎಇ, ಜೆಇ ಹುದ್ದೆಗಳ ಆಯ್ಕೆಪಟ್ಟಿ ರದ್ದುಪಡಿಸಿ ಮರುಪರೀಕ್ಷೆಗೆ ಹೈಕೋರ್ಟ್ (High Court)​​ ಬುಧವಾರ ಆದೇಶ ಹೊರಡಿಸಿದೆ. 2024 ಫೆ.18ರಂದು ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳಿಗೆ ಮರುಪರೀಕ್ಷೆ ನಡೆಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ನೆಗೆಟಿವ್ ಮಾರ್ಕಿಂಗ್ ಪ್ರಶ್ನಿಸಿ ಅಭ್ಯರ್ಥಿಗಳು ಹೈಕೋರ್ಟ್​ ಮೇಲ್ಮನವಿ ಸಲ್ಲಿಸಿದ್ದರು. ಇಂದು ವಿಚಾರಣೆ ಮಾಡಿದ ಹೈಕೋಟ್​​ ಮರುಪರೀಕ್ಷೆಗೆ ಆದೇಶಿಸಿದೆ. ಜೊತೆಗೆ ನೆಗೆಟಿವ್ ಮಾರ್ಕಿಂಗ್ ಬಗ್ಗೆ ಪೂರ್ವ ಮಾಹಿತಿ ನೀಡಲು ಸಿಜೆ ಎನ್.ವಿ.ಅಂಜಾರಿಯಾ ಮತ್ತು ನ್ಯಾ.ಕೆ.ವಿ.ಅರವಿಂದ್​​ರಿದ್ದ ಪೀಠ ಸೂಚನೆ ನೀಡಿದೆ.

ಇದನ್ನೂ ಓದಿ: ಪ್ರತಿ ತಾಲೂಕಿನಲ್ಲೂ ಕನಿಷ್ಟ ಬೆಂಬಲ‌ ಬೆಲೆಯ ಖರೀದಿ ಕೇಂದ್ರ ಸ್ಥಾಪಿಸಲು ಹೈಕೋರ್ಟ್ ಆದೇಶ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಎಇ ಮತ್ತು ಜೆಇ ಹುದ್ದೆಗಳ ನೇಮಕಾತಿಗೆ ಕೆಪಿಎಸ್‌ಸಿ 2022ರ ಫೆ. 21ರಂದು ಅಧಿಸೂಚನೆ ಹೊರಡಿಸಿತ್ತು. ಬಳಿಕ ಆಗಸ್ಟ್ 17ರಂದು ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿತ್ತು. ಹೀಗಿರುವಾಗ 2023ರ ಫೆ. 1ರಂದು, ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಮೀಸಲಿಟ್ಟ ಹುದ್ದೆಗಳನ್ನು ಭರ್ತಿ ಮಾಡುವಾಗ ಪಾಲಿಸಬೇಕಾದ ನಿಯಮಗಳ ಕುರಿತು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಆ ಸುತ್ತೋಲೆಯಂತೆ ಕೆಪಿಎಸ್‌ಸಿ ತಾತ್ಕಾಲಿಕ ಆಯ್ಕೆ ಪಟ್ಟಿ ತಯಾರಿಸಿತ್ತು.

ಇದನ್ನೂ ಓದಿ: ಚಿಕ್ಕಮಗಳೂರು: ಪ್ರೀತಿಸಿ ಮದುವೆಯಾದ ಹೆಂಡತಿಯನ್ನು ಗಂಡನೇ ಇರಿದು ಕೊಂದಿರುವ ಆರೋಪ, ಅರೋಪಿ ನಾಪತ್ತೆ

ಕೆಪಿಸಿಎಲ್​​​ನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜೆಇ, ಎಇ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕೆಪಿಎಸ್‌ಸಿ ಆಗಸ್ಟ್ 17 ರಂದೇ ಪ್ರಕಟಿಸಿತ್ತು. ಆದರೆ, ಕೆಪಿಎಸ್‌ಸಿಯ ವಿಳಂಬ ನೀತಿಯಿಂದಾಗಿ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿರಲಿಲ್ಲ. ಕೆಎಟಿ ಆದೇಶದಿಂದಾಗಿ ಅಂತಿಮ ಆಯ್ಕೆ ಪಟ್ಟಿ ಮತ್ತಷ್ಟು ವಿಳಂಬವಾಗಲಿದೆ’ ಎಂದು ಹುದ್ದೆ ಆಕಾಂಕ್ಷಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ