Sign In

By signing in or creating an account, you agree with Associated Broadcasting Company's Terms & Conditions and Privacy Policy.

KPTCL: ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿದ್ದ ಪ್ರಮುಖ ಆರೋಪಿ ಹುಬ್ಬಳ್ಳಿಯಲ್ಲಿ ಅರೆಸ್ಟ್

ಕೆಪಿಟಿಸಿಎಲ್​ ಕಿರಿಯ ಸಹಾಯಕರ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣ ಸಂಬಂಧ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸುವ ಮೂಲಕ ಒಟ್ಟು ಬಂಧಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

KPTCL: ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿದ್ದ ಪ್ರಮುಖ ಆರೋಪಿ ಹುಬ್ಬಳ್ಳಿಯಲ್ಲಿ ಅರೆಸ್ಟ್
ಕೆಪಿಟಿಸಿಎಲ್ ಅಕ್ರಮ ನೇಮಕಾತಿಯಲ್ಲಿ ಭಾಗಿಯಾಗಿದ್ದ ಪ್ರಮುಖ ಆರೋಪಿ ಅರೆಸ್ಟ್
Follow us
TV9 Web
| Updated By: Rakesh Nayak Manchi

Updated on:Sep 03, 2022 | 8:48 AM

ಬೆಳಗಾವಿ: ಕೆಪಿಟಿಸಿಎಲ್​ ಕಿರಿಯ ಸಹಾಯಕರ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣ ಸಂಬಂಧ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸುವ ಮೂಲಕ ಒಟ್ಟು ಬಂಧಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಪ್ರಕರಣದ ಪ್ರಮುಖ ಆರೋಪಿ ಸಂಜೀವ್ ಭಂಡಾರಿ ಎಂಬಾತನನ್ನು ಗೋಕಾಕ್​​ ಪೊಲೀರು ಹುಬ್ಬಳ್ಳಿಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ.

ಅಕ್ರಮದಲ್ಲಿ ಭಾಗಿಯಾಗಿದ್ದ ಪ್ರಮುಖ ಆರೋಪಿ ಸಂಜೀವ್ ಭಂಡಾರಿ, ಹುಬ್ಬಳ್ಳಿಯಲ್ಲಿ ತಲೆಮರೆಸಿಕೊಂಡಿದ್ದನು. ಈ ವಿಚಾರ ತಿಳಿದ ಗೋಕಾಕ್ ಠಾಣಾ ಪೊಲೀಸರು, ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸರಿಗೆ ಮಾಹಿತಿ ನೀಡಿ ನೆರವು ಕೋರಿದ್ದಾರೆ. ಅದರಂತೆ ಬೆಂಡಿಗೇರಿ ಠಾಣಾ ಪೊಲೀಸರ ಸಹಾಯದಿಂದ ಗೋಕಾಕ್ ಪೊಲೀಸರು, ಹುಬ್ಬಳ್ಳಿಯಲ್ಲಿ ಬಂಧಿಸಿದ್ದಾರೆ. ಬಂಧನ ನಂತರ ಆರೋಪಿಯನ್ನು ಪೊಲೀಸರು ಗೋಕಾಕ್​​ನ ಪ್ರಧಾನ ಸಿವಿಲ್​ ಮತ್ತು ಜೆಎಂಎಫ್​ಸಿ ಕೋರ್ಟ್​ಗೆ ಹಾಜರು ಮಾಡಿ 7 ದಿನ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಸದ್ಯ ಆರೋಪಿಯನ್ನು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಪೊಲೀಸ್ ನೇಮಕಾತಿಯ ಅಕ್ರಮದಲ್ಲೂ ಭಾಗಿ

ಬಂಧಿತ ಸಂಜೀವ್ ಭಂಡಾರಿ ಈ ಹಿಂದೆ ನಡೆದ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯಲ್ಲಿ ನಡೆದ ಅಕ್ರಮದಲ್ಲಿ ಭಾಗಿಯಾಗಿ ಜೈಲು ಸೇರಿದ್ದನು. ಅಲ್ಲದೆ ಜಾಮೀನಿನ ಮೇಲೆ ಹೊರಬಂದಿದ್ದನು. ನಂತರ ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿಯ ಅಕ್ರಮದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದನು.

ಏನಿದು ಪ್ರಕರಣ?

ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿಯ ಪರೀಕ್ಷೆ ಆ.7ರಂದು ಗೋಕಾಕ್​ನಲ್ಲಿ ನಡೆದಿತ್ತು. ಈ ಪರೀಕ್ಷೆಯಲ್ಲಿ ಸಿದ್ದಪ್ಪ ಎಂಬ ವ್ಯಕ್ತಿ ಸ್ಮಾರ್ಟ್ ವಾಚ್ ಬಳಸಿ ಪ್ರಶ್ನೆ ಪತ್ರಿಕೆಯ ಫೋಟೋ ತೆಗೆದು ಹೊರಗೆ ಕಳುಹಿಸಿದ್ದನು. ಈ ವಿಚಾರ ತಿಳಿದ ಅಭ್ಯರ್ಥಿಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿದಾಗ ಅಕ್ರಮ ಎಸಗಿರುವುದು ಖಚಿತವಾಗಿತ್ತು. ಅದರಂತೆ ಅ.22ರಂದು 9 ಮಂದಿಯನ್ನು ಬಂಧಿಸಿದ್ದ ಪೊಲೀಸರು, ಅ.24ರಂದು ಮೂವರನ್ನು ಬಂಧಿಸಿದ್ದರು. ಇದೀಗ ಶುಕ್ರವಾರ (ಸೆ.2) ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:48 am, Sat, 3 September 22

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ