AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPTCL ಸಹಾಯಕ ಇಂಜಿನಿಯರ್ ನೇಮಕಾತಿ ವಿಳಂಬ, ಖನ್ನಿತೆಗೆ ಒಳಗಾಗಿ ಇಬ್ಬರು ಸಾವು, ಕಚೇರಿಗೆ ಮುತ್ತಿಗೆ ಹಾಕಿದ ಹುದ್ದೆ ಆಕಾಂಕ್ಷಿಗಳು

2021-22 ರಲ್ಲಿ ಕೆಪಿಟಿಸಿಎಲ್ ಸಹಾಯಕ ಇಂಜಿನಿಯರ್ ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಯಾದರೂ ನೇಮಕಾರಿ ಪ್ರಕ್ರಿಯೆ ನಡೆದಿಲ್ಲ. ಇದರಿಂದ ಖಿನ್ನತೆಗೆ ಒಳಗಾಗಿ ಯುವಕ ಸಾವನ್ನಪ್ಪಿದ್ದು, ಇಂದು ಪರೀಕ್ಷೆ ಬರೆದ ಯುವಕ, ಯುವತಿಯರಿಂದ ಕೆಪಿಟಿಸಿಎಲ್ ಕಚೇರಿ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಲಾಯಿತು. ಅಲ್ಲದೆ, ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

KPTCL ಸಹಾಯಕ ಇಂಜಿನಿಯರ್ ನೇಮಕಾತಿ ವಿಳಂಬ, ಖನ್ನಿತೆಗೆ ಒಳಗಾಗಿ ಇಬ್ಬರು ಸಾವು, ಕಚೇರಿಗೆ ಮುತ್ತಿಗೆ ಹಾಕಿದ ಹುದ್ದೆ ಆಕಾಂಕ್ಷಿಗಳು
ಕೆಪಿಟಿಸಿಎಲ್ ಕಚೇರಿಗೆ ಮುತ್ತಿಗೆ ಹಾಕಿದ ಸಹಾಯಕ ಇಂಜಿನಿಯರ್ ಹುದ್ದೆ ಆಕಾಂಕ್ಷಿಗಳು
Follow us
Vinayak Hanamant Gurav
| Updated By: Rakesh Nayak Manchi

Updated on:Nov 20, 2023 | 4:35 PM

ಬೆಂಗಳೂರು, ನ.20: 2021-22 ರಲ್ಲಿ ಕೆಪಿಟಿಸಿಎಲ್​ (KPTCL) 1500 ಸಹಾಯಕ ಇಂಜಿನಿಯರ್ ನೇಮಕಾತಿ (Assistant Engineer Recruitment) ಪರೀಕ್ಷೆಯಲ್ಲಿ ಆಯ್ಕೆಯಾದರೂ ನೇಮಕಾರಿ ಪ್ರಕ್ರಿಯೆ ನಡೆದಿಲ್ಲ. ನೇಮಕಾತಿ ವಿಳಂಬದಿಂದಾಗಿ ಖಿನ್ನತೆಗೆ ಒಳಗಾದ ಹರ್ಷವರ್ಧನ್, ಉಮಾಪತಿ ಎಂಬ ಇಬ್ಬರು ಆಕಾಂಕ್ಷಿಗಳು ಸಾವನ್ನಪ್ಪಿದ್ದು, ಇದರಿಂದ ಕೆರಳಿದ ಪರೀಕ್ಷೆ ಬರೆದ ಯುವಕ, ಯುವತಿಯರು ಇಂದು ಕೆಪಿಟಿಸಿಎಲ್ ಕಚೇರಿ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದರು. ಅಲ್ಲದೆ, ಉಗ್ರ ಹೋರಾಟದ ಎಚ್ಚರಿಕೆಯನ್ನೂ ನೀಡಿದರು.

ಆನ್​ಲೈನ್ ಅಪ್ಲಿಕೇಶನ್ ಸಂದರ್ಭದಲ್ಲಿ ಅಭ್ಯರ್ಥಿಗಳ ಫೋಟೋ ಸಿಗ್ನೇಚರ್ ಟೆಕ್ನಿಕಲ್ ಸಮಸ್ಯೆ ಇತ್ತು. ಹೀಗಾಗಿ ನೇಮಕಾತಿ ಪ್ರಕ್ರಿಯೆ ಕೋರ್ಟ್​ನಲ್ಲಿ ಇತ್ತು. ಈಗಾಗಲೇ ಟೆಕ್ನಿಕಲ್ ಸಮಸ್ಯೆಗಳನ್ನ ಸರಿಪಡಿಸಿ ಡಿಸೆಂಬರ್ ಅಂತ್ಯದೊಳಗಡೆ ಲಿಸ್ಟ್ ಬಿಡುವಂತೆ ಕೋರ್ಟ್ ಆದೇಶ ಮಾಡಿದೆ.

ಇದನ್ನೂ ಓದಿ: ಕೆಇಎ ನೇಮಕಾತಿ ಪರೀಕ್ಷೆ ಅಕ್ರಮ: ಪ್ರಕರಣ ಕೈ ಸೇರುತ್ತಿದ್ದಂತೆ ಮೂವರನ್ನು ವಶಕ್ಕೆ ಪಡೆದ ಸಿಐಡಿ

ಕೋರ್ಟ್ ಆದೇಶ ಇದ್ದರೂ ಯಾವುದೇ ಪ್ರಕ್ರಿಯೆಗೆ ಕೆಪಿಟಿಸಿಎಲ್ ಮುಂದಾಗುತ್ತಿಲ್ಲ ಅಂತ ಕೆಪಿಟಿಸಿಎಲ್ ವಿರುದ್ಧ ನೊಂದ ಅಭ್ಯರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಕೆಪಿಟಿಸಿಎಲ್ ಎಂಡಿ ಪಂಕಜಕುಮಾರ್ ಪಾಂಡೆ ಭೇಟಿ ನೀಡಿ ಮಾತುಕತೆ ನಡೆಸಿದ್ದು, ಡಿಸಿಂಬರ್ ಅಂತ್ಯದೊಳಗೆ ಭರ್ತಿ ಪ್ರಕ್ರಿಯೆ ಮುಗಿಸುವುದಾಗಿ ಭರವಸೆ ನೀಡಿದರು.

ಸದ್ಯ, ಪ್ರತಿಭಟನಾ ನಿರತ ಅಭ್ಯರ್ಥಿಗಳು ಪ್ರತಿಭಟನೆ ಹಿಂಪಡೆದಿದ್ದಾರೆ. ಡಿಸೆಂಬರ್ ಅಂತ್ಯದೊಳಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿ 2024ರ ಫೆಬ್ರವರಿ 15 ರಂದು ಆಯ್ಕೆ ಮಾಡುವುದಾಗಿ ಭರವಸೆ ನೀಡಿದ್ದು, ಒಂದು ವೇಳೆ ಹೇಳಿದ ಹಾಗೆ ಕೆಪಿಟಿಸಿಎಲ್ ಮಾಡದಿದ್ದರೆ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:35 pm, Mon, 20 November 23

ರಾಜಾ ರಘುವಂಶಿ ಹನಿಮೂನ್​ಗೆಂದು ಮನೆಯಿಂದ ಹೊರಟ ವಿಡಿಯೋ
ರಾಜಾ ರಘುವಂಶಿ ಹನಿಮೂನ್​ಗೆಂದು ಮನೆಯಿಂದ ಹೊರಟ ವಿಡಿಯೋ
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ನಾಗಶೇಖರ್
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ನಾಗಶೇಖರ್
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ
‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ
ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ವಂಚನೆ ಮಾಡಿದ ಆರೋಪ
ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ವಂಚನೆ ಮಾಡಿದ ಆರೋಪ