KPTCL ಸಹಾಯಕ ಇಂಜಿನಿಯರ್ ನೇಮಕಾತಿ ವಿಳಂಬ, ಖನ್ನಿತೆಗೆ ಒಳಗಾಗಿ ಇಬ್ಬರು ಸಾವು, ಕಚೇರಿಗೆ ಮುತ್ತಿಗೆ ಹಾಕಿದ ಹುದ್ದೆ ಆಕಾಂಕ್ಷಿಗಳು

2021-22 ರಲ್ಲಿ ಕೆಪಿಟಿಸಿಎಲ್ ಸಹಾಯಕ ಇಂಜಿನಿಯರ್ ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಯಾದರೂ ನೇಮಕಾರಿ ಪ್ರಕ್ರಿಯೆ ನಡೆದಿಲ್ಲ. ಇದರಿಂದ ಖಿನ್ನತೆಗೆ ಒಳಗಾಗಿ ಯುವಕ ಸಾವನ್ನಪ್ಪಿದ್ದು, ಇಂದು ಪರೀಕ್ಷೆ ಬರೆದ ಯುವಕ, ಯುವತಿಯರಿಂದ ಕೆಪಿಟಿಸಿಎಲ್ ಕಚೇರಿ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಲಾಯಿತು. ಅಲ್ಲದೆ, ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

KPTCL ಸಹಾಯಕ ಇಂಜಿನಿಯರ್ ನೇಮಕಾತಿ ವಿಳಂಬ, ಖನ್ನಿತೆಗೆ ಒಳಗಾಗಿ ಇಬ್ಬರು ಸಾವು, ಕಚೇರಿಗೆ ಮುತ್ತಿಗೆ ಹಾಕಿದ ಹುದ್ದೆ ಆಕಾಂಕ್ಷಿಗಳು
ಕೆಪಿಟಿಸಿಎಲ್ ಕಚೇರಿಗೆ ಮುತ್ತಿಗೆ ಹಾಕಿದ ಸಹಾಯಕ ಇಂಜಿನಿಯರ್ ಹುದ್ದೆ ಆಕಾಂಕ್ಷಿಗಳು
Follow us
| Updated By: Rakesh Nayak Manchi

Updated on:Nov 20, 2023 | 4:35 PM

ಬೆಂಗಳೂರು, ನ.20: 2021-22 ರಲ್ಲಿ ಕೆಪಿಟಿಸಿಎಲ್​ (KPTCL) 1500 ಸಹಾಯಕ ಇಂಜಿನಿಯರ್ ನೇಮಕಾತಿ (Assistant Engineer Recruitment) ಪರೀಕ್ಷೆಯಲ್ಲಿ ಆಯ್ಕೆಯಾದರೂ ನೇಮಕಾರಿ ಪ್ರಕ್ರಿಯೆ ನಡೆದಿಲ್ಲ. ನೇಮಕಾತಿ ವಿಳಂಬದಿಂದಾಗಿ ಖಿನ್ನತೆಗೆ ಒಳಗಾದ ಹರ್ಷವರ್ಧನ್, ಉಮಾಪತಿ ಎಂಬ ಇಬ್ಬರು ಆಕಾಂಕ್ಷಿಗಳು ಸಾವನ್ನಪ್ಪಿದ್ದು, ಇದರಿಂದ ಕೆರಳಿದ ಪರೀಕ್ಷೆ ಬರೆದ ಯುವಕ, ಯುವತಿಯರು ಇಂದು ಕೆಪಿಟಿಸಿಎಲ್ ಕಚೇರಿ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದರು. ಅಲ್ಲದೆ, ಉಗ್ರ ಹೋರಾಟದ ಎಚ್ಚರಿಕೆಯನ್ನೂ ನೀಡಿದರು.

ಆನ್​ಲೈನ್ ಅಪ್ಲಿಕೇಶನ್ ಸಂದರ್ಭದಲ್ಲಿ ಅಭ್ಯರ್ಥಿಗಳ ಫೋಟೋ ಸಿಗ್ನೇಚರ್ ಟೆಕ್ನಿಕಲ್ ಸಮಸ್ಯೆ ಇತ್ತು. ಹೀಗಾಗಿ ನೇಮಕಾತಿ ಪ್ರಕ್ರಿಯೆ ಕೋರ್ಟ್​ನಲ್ಲಿ ಇತ್ತು. ಈಗಾಗಲೇ ಟೆಕ್ನಿಕಲ್ ಸಮಸ್ಯೆಗಳನ್ನ ಸರಿಪಡಿಸಿ ಡಿಸೆಂಬರ್ ಅಂತ್ಯದೊಳಗಡೆ ಲಿಸ್ಟ್ ಬಿಡುವಂತೆ ಕೋರ್ಟ್ ಆದೇಶ ಮಾಡಿದೆ.

ಇದನ್ನೂ ಓದಿ: ಕೆಇಎ ನೇಮಕಾತಿ ಪರೀಕ್ಷೆ ಅಕ್ರಮ: ಪ್ರಕರಣ ಕೈ ಸೇರುತ್ತಿದ್ದಂತೆ ಮೂವರನ್ನು ವಶಕ್ಕೆ ಪಡೆದ ಸಿಐಡಿ

ಕೋರ್ಟ್ ಆದೇಶ ಇದ್ದರೂ ಯಾವುದೇ ಪ್ರಕ್ರಿಯೆಗೆ ಕೆಪಿಟಿಸಿಎಲ್ ಮುಂದಾಗುತ್ತಿಲ್ಲ ಅಂತ ಕೆಪಿಟಿಸಿಎಲ್ ವಿರುದ್ಧ ನೊಂದ ಅಭ್ಯರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಕೆಪಿಟಿಸಿಎಲ್ ಎಂಡಿ ಪಂಕಜಕುಮಾರ್ ಪಾಂಡೆ ಭೇಟಿ ನೀಡಿ ಮಾತುಕತೆ ನಡೆಸಿದ್ದು, ಡಿಸಿಂಬರ್ ಅಂತ್ಯದೊಳಗೆ ಭರ್ತಿ ಪ್ರಕ್ರಿಯೆ ಮುಗಿಸುವುದಾಗಿ ಭರವಸೆ ನೀಡಿದರು.

ಸದ್ಯ, ಪ್ರತಿಭಟನಾ ನಿರತ ಅಭ್ಯರ್ಥಿಗಳು ಪ್ರತಿಭಟನೆ ಹಿಂಪಡೆದಿದ್ದಾರೆ. ಡಿಸೆಂಬರ್ ಅಂತ್ಯದೊಳಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿ 2024ರ ಫೆಬ್ರವರಿ 15 ರಂದು ಆಯ್ಕೆ ಮಾಡುವುದಾಗಿ ಭರವಸೆ ನೀಡಿದ್ದು, ಒಂದು ವೇಳೆ ಹೇಳಿದ ಹಾಗೆ ಕೆಪಿಟಿಸಿಎಲ್ ಮಾಡದಿದ್ದರೆ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:35 pm, Mon, 20 November 23

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!