AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPTCL Recruitment Scam: ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು, ಆರೋಪಿಗಳ ಹಿಸ್ಟ್ರಿ ಇಲ್ಲಿದೆ

ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಯಲ್ಲಿ ನಡೆದಿದ್ದ ಹಗರಣ ಸಂಬಂಧ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಓರ್ವ ಆರೋಪಿಯ ಬಳಿ ಇದ್ದ ಮೊಬೈಲ್ ಮತ್ತು ಇಲೆಕ್ಟ್ರಾನಿಕ್ ಡಿವೈಸ್ ಅನ್ನು ವಶಕ್ಕೆ ಪಡೆದಿದ್ದಾರೆ.

KPTCL Recruitment Scam: ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು, ಆರೋಪಿಗಳ ಹಿಸ್ಟ್ರಿ ಇಲ್ಲಿದೆ
ಕೆಪಿಟಿಸಿಎಲ್ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣ ಸಂಬಂಧ ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು
TV9 Web
| Edited By: |

Updated on:Sep 06, 2022 | 8:51 AM

Share

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಯಲ್ಲಿ ನಡೆದಿದ್ದ ಹಗರಣ ಸಂಬಂಧ ಬಗೆದಷ್ಟು ವಿಚಾರಗಳು ಬಯಲಾಗುತ್ತಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸುವಲ್ಲಿ ಕಾರ್ಯಪ್ರವೃತ್ತರಾಗಿರುವ ಪೊಲೀಸರು ಇದೀಗ ಮತ್ತೆ ಮೂವರನ್ನು ಬಂಧಿಸುವ ಮೂಲಕ ಬಂಧಿತರ ಒಟ್ಟು ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಜ್ಯೂನಿಯರ್ ಲೈನ್‌ಮ್ಯಾನ್ ಆಗಿರುವ ಹುಕ್ಕೇರಿ ತೂಲೂಕಿನ ಗಿರೀಶ ಬನಾಜ್, ಹುಕ್ಕೇರಿ ತಾಲೂಕಿನ‌ ಶಿರಹಟ್ಟಿ ಬಿ.ಕೆ. ಗ್ರಾಮದ ಬೀರಪ್ಪ ಲಕ್ಷ್ಮಣ ಹಣಗಂಡಿ, ಮೂಡಲಗಿ ‌ತಾಲೂಕಿನ ಅರಭಾವಿ ಗ್ರಾಮದ ಶಿವಾನಂದ ದುಂಡಪ್ಪ ಹಳ್ಳೂರ ಎಂಬ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಯಲ್ಲಿ ಆರೋಪಿ ಗಿರೀಶ್ ಉತ್ತರ ತಯಾರಿಸಿ ಅಭ್ಯರ್ಥಿಗಳಿಗೆ ಹೇಳಲು ಸಹಕರಿದ್ದನು. ಆರೋಪಿ ಲಕ್ಷ್ಮಣ್ ಸ್ಮಾರ್ಟ್ ವಾಚ್ ಖರೀದಿ ಮಾಡಿ ಅಭ್ಯರ್ಥಿಗಳಿಗೆ ನೀಡಿದ್ದ. ಮತ್ತೋರ್ವ ಆರೋಪಿ ಶಿವಾನಂದ ಇಲೆಕ್ಟ್ರಾನಿಕ್ ಡಿವೈಸ್ ತಗೆದುಕೊಂಡು ಪರೀಕ್ಷೆ ಬರೆಯಲು ಹೋಗಿದ್ದ. ಸದ್ಯ ಮೂವರು ಆರೋಪಿಗಳನ್ನು ಬಂಧಿಸಿದ್ದು, ಶಿವಾನಂದ ಬಳಿಯಿಂದ 5 ಮೊಬೈಲ್ ಮತ್ತು ಇಲೆಕ್ಟ್ರಾನಿಕ್ ಡಿವೈಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆ.7ರಂದು ನಡೆದಿದ್ದ ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಗೋಕಾಕ್‌ನಲ್ಲಿ ಸ್ಮಾರ್ಟ್​ವಾಚ್ ಬಳಸಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ದರು. ಈ ಸಂಬಂಧ ಗೋಕಾಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ಪರೀಕ್ಷಾರ್ಥಿ ಸಿದ್ದಪ್ಪ ಮದೀಹಳ್ಳಿ ಎಂಬುವರನ್ನು ಪೊಲೀಸರು ಬಂಧಿಸಿದ್ದರು. ಸಿದ್ದಪ್ಪ ನೀಡಿದ ಮಾಹಿತಿ ಆಧರಿಸಿ ಉಳಿದ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟುತ್ತಿದ್ದಾರೆ. ಕೆಪಿಟಿಸಿಎಲ್ 600 ಕಿರಿಯ ಸಹಾಯಕ ಹುದ್ದೆಗಳಿಗಾಗಿ ರಾಜ್ಯಾದ್ಯಂತ 3 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:51 am, Tue, 6 September 22

ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ