AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಹರಣ ಕೇಸ್​: ಪ್ರಕರಣದಿಂದ ಕೈಬಿಡುವಂತೆ ಕೋರಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾ

ಕೆ.ಆರ್.ನಗರದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಿಗ್​ ರಿಲೀಫ್​ ಸಿಗುವ ನಿರೀಕ್ಷೆಯಲ್ಲಿದ್ದ ಭವಾನಿ ರೇವಣ್ಣಗೆ ನಿರಾಸೆಯಾಗಿದೆ. ಕೇಸ್​ನಿಂದ ತಮ್ಮನ್ನು ಕೈಬಿಡುವಂತೆ ಕೋರಿ ಭವಾನಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಎ7 ಕೆ.ಎ.ರಾಜಗೋಪಾಲ್ ಮತ್ತು ಎ8 ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನ 42ನೇ ಎಸಿಜೆಎಂ ಕೋರ್ಟ್‌ನ ನ್ಯಾಯಾಧೀಶರಾದ ಕೆ.ಎನ್.ಶಿವಕುಮಾರ್ ವಜಾಗೊಳಿಸಿದ್ದಾರೆ.

ಅಪಹರಣ ಕೇಸ್​: ಪ್ರಕರಣದಿಂದ ಕೈಬಿಡುವಂತೆ ಕೋರಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾ
ಭವಾನಿ ರೇವಣ್ಣಗೆ ನಿರಾಸೆ
ರಮೇಶ್​ ಎಮ್​.
| Edited By: |

Updated on: Oct 13, 2025 | 6:58 PM

Share

ಬೆಂಗಳೂರು, ಅಕ್ಟೋಬರ್​ 13: ಕೆ.ಆರ್.ನಗರದ ಮಹಿಳೆಯ ಅಪಹರಣ ಪ್ರಕರಣದಿಂದ ಕೈಬಿಡುವಂತೆ ಕೋರಿ ಭವಾನಿ ರೇವಣ್ಣ (Bhavani Revanna) ಸಲ್ಲಿಸಿದ್ದ ಅರ್ಜಿಯನ್ನು 42ನೇ ಎಸಿಜೆಎಂ ಕೋರ್ಟ್‌ ವಜಾಗೊಳಿಸಿದೆ. ಎ7 ಕೆ.ಎ. ರಾಜಗೋಪಾಲ್ ಮತ್ತು ಎ8 ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನ ವಜಾಗೊಳಿಸಿ ನ್ಯಾ. ಕೆ.ಎನ್.ಶಿವಕುಮಾರ್ ಆದೇಶಿಸಿದ್ದಾರೆ. ಆ ಮೂಲಕ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ಮತ್ತೆ ಹಿನ್ನಡೆಯಾಗಿದೆ.

ಘಟನೆ ಏನಾಗಿತ್ತು?

ವೈರಲ್​ ಆಗಿದ್ದ ಹಾಸನ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ‘ನನ್ನ ತಾಯಿಯ ಚಿತ್ರವೂ ಇದ್ದು, ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆ.ಆರ್​​ ನಗರ ಠಾಣೆಯಲ್ಲಿ ಸಂತ್ರಸ್ತೆಯೋರ್ವರ ಪುತ್ರ ಪ್ರಕರಣ ದಾಖಲಿಸಿದ್ದರು. ಅವರ ದೂರಿನ ಆಧಾರದಲ್ಲಿ ಹೆಚ್​​.ಡಿ. ರೇವಣ್ಣ, ಭವಾನಿ ರೇವಣ್ಣ ಮತ್ತು ಭವಾನಿ ರೇವಣ್ಣ ಸಂಬಂಧಿ ಬಾಬು ವಿರುದ್ಧ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಮಾಜಿ ಸಚಿವ ರೇವಣ್ಣ, ಅವರ ಪತ್ನಿ ಭವಾನಿ ಮತ್ತು ಬಾಬುವನ್ನು ಬಂಧಿಸಿದ್ದರು. ನಂತರ ಜಾಮೀನು ಕೋರಿ ಭವಾನಿ ರೇವಣ್ಣ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲಿ ಅವರಿಗೆ ನಿರೀಕ್ಷಣಾ ಜಾಮೀನು ದೊರೆತಿತ್ತು.

ಇದನ್ನೂ ಓದಿ: ಪ್ರಜ್ವಲ್​​​ ರೇವಣ್ಣ ಹೆಸರಿನಲ್ಲಿ ಅರ್ಚನೆ ಮಾಡಿಸಿದ ಭವಾನಿ ರೇವಣ್ಣ

ಆ ಬಳಿಕ ಪ್ರಕರಣ ಸುಪ್ರೀಂ ಕೋರ್ಟ್​ವರೆಗೂ ಹೋಗಿದ್ದು, ಭವಾನಿ ರೇವಣ್ಣಗೆ ನೀಡಿದ್ದ ಜಾಮೀನು ರದ್ದುಪಡಿಸುವಂತೆ ಆಗ್ರಹಿಸಲಾಗಿತ್ತು. ಆರೋಪಿ ಮಹಿಳೆ ಪ್ರಕರಣದಲ್ಲಿ ನೇರವಾಗಿ ಸಂಬಂಧ ಹೊಂದಿದ್ದಾರೆ. ಅತ್ಯಾಚಾರ ಎಸಗಿದ ಆರೋಪಿಯ ತಾಯಿ ಕೂಡ ಆಗಿದ್ದಾರೆ. ಆರೋಪಿಗಳು ಪ್ರತಿಷ್ಠಿತ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದವರು. ಹೀಗಾಗಿ ಹೈಕೋರ್ಟ್ ನೀಡಿರುವ ನಿರಿಕ್ಷಣಾ ಜಾಮೀನು ರದ್ದು ಮಾಡಬೇಕು ಎಂದು ಎಸ್​ಐಟಿ ಪರ ವಕೀಲರು ವಾದ ಮಂಡಿಸಿದ್ದರು. ಆದರೆ ಜಾಮೀನನ್ನು ರದ್ದುಗೊಳಿಸಲಾಗದು ಎಂದು ಹೇಳಿದ್ದ ಸುಪ್ರೀಂಕೋರ್ಟ್​, ರಾಜಕೀಯ ಕುಟುಂಬ ಎಂದು ಜಾಮೀನು ನಿರಾಕರಿಸಲು ಸಾಧ್ಯವಿಲ್ಲ. ಕೆಲ ರಾಜಕಾರಣಿಗಳು ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಹುದು. ಈ ಪ್ರಕರಣದಲ್ಲಿ ತನಿಖೆ ದಾರಿ ತಪ್ಪಿದೆಯಾ? ತಪ್ಪಿದ್ದರೆ ನಾವು ನಿಮ್ಮ ನೆರವಿಗೆ ಬರಬಹುದು. ಆದರೆ ಇಲ್ಲಿ ಯಾವುದೂ ಆ ರೀತಿ ಕಾಣುತ್ತಿಲ್ಲ ಎಂದಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ