AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಆರ್ ಪೇಟೆ ಬೈಎಲೆಕ್ಷನ್: ಮಂಡ್ಯ ಸಂಸದೆ ಸುಮಲತಾ ನಿಷ್ಠೆ ಯಾವ ಪಕ್ಷಕ್ಕೆ?

ಮಂಡ್ಯ: ಕೆ.ಆರ್.ಪೇಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಜಿದ್ದಾಜಿದ್ದಿಗೆ ಬಿದ್ದಿದೆ. ಬೈ ಎಲೆಕ್ಷನ್ ಗೆಲ್ಲಲೇಬೇಕು ಎಂದು ಪಣತೊಟ್ಟಿವೆ ಅದಕ್ಕಾಗಿ ಎಲ್ಲ ಕಡೆಗಳಿಂದಲೂ ಬೆಂಬಲ ನಿರೀಕ್ಷಿಸುತ್ತಿವೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಸ್ಟಾರ್ ಪ್ರಚಾರಕಿ ಆಗಿರುವ ಸಂಸದೆ ಸುಮಲತಾ ಅವರನ್ನ ತನ್ನತ್ತ ಸೆಳೆಯಲು ಎರಡೂ ಪಕ್ಷಗಳು ಹಾತೊರೆಯುತ್ತಿವೆ. ಸುಮಲತಾ ಪ್ರಚಾರ ನಿರೀಕ್ಷೆಯಲ್ಲಿ ಎರಡು ಪಕ್ಷದ ಅಭ್ಯರ್ಥಿಗಳು ಕಾದುಕುಳಿತಿದ್ದಾರೆ. ಆದ್ರೆ ಸುಮಲತಾ ಬೆಂಬಲ ಯಾರಿಗೆ ಎಂಬುದು ಇನ್ನೂ ನಿಗೂಢವಾಗಿದೆ. ಅಷ್ಟಕ್ಕೂ ಸುಮಲತಾ ಯಾವ ಪಕ್ಷದ ಋಣ ತೀರಿಸುತ್ತಾರೆ? ಅಥವಾ […]

ಕೆಆರ್ ಪೇಟೆ ಬೈಎಲೆಕ್ಷನ್: ಮಂಡ್ಯ ಸಂಸದೆ ಸುಮಲತಾ ನಿಷ್ಠೆ ಯಾವ ಪಕ್ಷಕ್ಕೆ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 19, 2019 | 12:57 PM

Share

ಮಂಡ್ಯ: ಕೆ.ಆರ್.ಪೇಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಜಿದ್ದಾಜಿದ್ದಿಗೆ ಬಿದ್ದಿದೆ. ಬೈ ಎಲೆಕ್ಷನ್ ಗೆಲ್ಲಲೇಬೇಕು ಎಂದು ಪಣತೊಟ್ಟಿವೆ ಅದಕ್ಕಾಗಿ ಎಲ್ಲ ಕಡೆಗಳಿಂದಲೂ ಬೆಂಬಲ ನಿರೀಕ್ಷಿಸುತ್ತಿವೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಸ್ಟಾರ್ ಪ್ರಚಾರಕಿ ಆಗಿರುವ ಸಂಸದೆ ಸುಮಲತಾ ಅವರನ್ನ ತನ್ನತ್ತ ಸೆಳೆಯಲು ಎರಡೂ ಪಕ್ಷಗಳು ಹಾತೊರೆಯುತ್ತಿವೆ. ಸುಮಲತಾ ಪ್ರಚಾರ ನಿರೀಕ್ಷೆಯಲ್ಲಿ ಎರಡು ಪಕ್ಷದ ಅಭ್ಯರ್ಥಿಗಳು ಕಾದುಕುಳಿತಿದ್ದಾರೆ.

ಆದ್ರೆ ಸುಮಲತಾ ಬೆಂಬಲ ಯಾರಿಗೆ ಎಂಬುದು ಇನ್ನೂ ನಿಗೂಢವಾಗಿದೆ. ಅಷ್ಟಕ್ಕೂ ಸುಮಲತಾ ಯಾವ ಪಕ್ಷದ ಋಣ ತೀರಿಸುತ್ತಾರೆ? ಅಥವಾ ಸುಮಕ್ಕ ತಟಸ್ಥವಾಗಿ ಉಳಿತಾರಾ..? ಎಂಬುದು ಸದ್ಯಕ್ಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಏಕೆಂದ್ರೆ ನಾಮಪತ್ರ ಸಲ್ಲಿಕೆ ಪಕ್ರಿಯೆ ಮುಗಿದಿದ್ರೂ ಸಂಸದೆ ತಮ್ಮ ನಿರ್ಧಾರ ಏನು ಎಂಬುದನ್ನು ಬಹಿರಂಗಗೊಳಿಸಿಲ್ಲ.

ಅಖಾಡದಿಂದ ದೂರ ಉಳಿಯಲು ಸಹಕಾರವಾಗುತ್ತಾ ಅಧಿವೇಶನ? ಈ ಮಧ್ಯೆ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಅಧಿವೇಶನದ ನೆಪದಲ್ಲಿ ಚುನಾವಣಾ ಪ್ರಚಾರದಿಂದ ದೂರ ಉಳಿಯುತ್ತಾರಾ ಸುಮಕ್ಕಾ? ತಟಸ್ಥವಾಗಿ ಉಳಿಯಲು ಅಧಿವೇಶನ ಭಾಗಿ ನೆಪ ಸುಮಲತಾಗೆ ಲಾಭ ಆಗುತ್ತಾ..? ಎಂಬುದು ಬೆಂಬಲದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ತಲೆಬಿಸಿ ತಂದಿದೆ.

ಎರಡೂ ಪಕ್ಷದ ಕಾರ್ಯಕರ್ತರ ಪ್ರೀತಿ ಉಳಿಸಿಕೊಳ್ಳುವ ಚಿಂತನೆಯಲ್ಲಿದ್ದಾರಾ ಸುಮಲತಾ..? ಎಂಬ ಪ್ರಶ್ನೆಯೂ ಎದ್ದಿದೆ. ಇನ್ನು ಕೆಲವು ದಿನಗಳ ಹಿಂದಷ್ಟೇ ಜನಾಭಿಪ್ರಾಯ ಕೇಳಿ ಯಾರಿಗೆ ಬೆಂಬಲ ಎಂಬುದನ್ನು ನಿರ್ಧಾರ ಮಾಡುವುದಾಗಿ ಸಂಸದೆ ಸುಮಲತಾ ತಿಳಿಸಿದ್ದರು. ಆದರೆ ರೆಬೆಲ್ ಸ್ಟಾರ್ ಪತ್ನಿ ಇದುವರೆಗೂ ಜನಾಭಿಪ್ರಾಯ ಕೇಳುವ ಶಾಸ್ತ್ರ ಮಾಡಿಲ್ಲ!

Published On - 10:22 am, Tue, 19 November 19

Follow Us
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ