AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್ ಹಸ್ತದ ಜತೆಗೆ ಆಪರೇಷನ್ ಬಿಬಿಎಂಪಿ ಶುರು, ಸಾಲು-ಸಾಲು ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆ

ಬಿಬಿಎಂಪಿ ಹಾಗೂ ಲೋಕಸಭಾ ಚುನಾವಣೆಗೆ ಕಾಂಗ್ರೆಸ್​ ಸಿದ್ಧತೆ ನಡೆಸಿದ್ದು, ಕಾಂಗ್ರೆಸ್ ಆಪರೇಷನ್ ಹಸ್ತದ ಜತೆಗೆ ಆಪರೇಷನ್ ಬಿಬಿಎಂಪಿ ಶುರು ಮಾಡಿಕೊಂಡಿದೆ. ಹೀಗಾಗಿ ಬೇರೆ ಬೇರೆ ಪಕ್ಷಗಳ ನಾಯಕರಿಗೆ ಗಾಳ ಹಾಕಿದೆ. ಆರ್​​ಆರ್​ ನಗರ ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೆ ಇದೀಗ ಕೆಆರ್​ ಪುರ ಬಿಜೆಪಿ ಮಾಜಿ ಕಾರ್ಪೋರೇಟರ್​ಗಳು ಕೈ ಹಿಡಿದಿದ್ದಾರೆ. ಇದರಿಂದ ಬಿಜೆಪಿಗೆ ದಿಕ್ಕುತೋಚದಂತಾಗಿದೆ.

ಆಪರೇಷನ್ ಹಸ್ತದ ಜತೆಗೆ ಆಪರೇಷನ್ ಬಿಬಿಎಂಪಿ ಶುರು, ಸಾಲು-ಸಾಲು ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆ
ಕಾಂಗ್ರೆಸ್ ಸೇರ್ಪಡೆಯಾದ ಬಿಜೆಪಿ ಮಾಜಿ ಕಾರ್ಪೋರೇಟರ್​ಗಳು
ಪ್ರಸನ್ನ ಗಾಂವ್ಕರ್​
| Edited By: |

Updated on:Aug 21, 2023 | 1:29 PM

Share

ಬೆಂಗಳೂರು, (ಆಗಸ್ಟ್ 21): ಮುಂಬರುವ ಲೋಕಸಭಾ (Loksabha Elctions 2024) ಹಾಗೂ ಬಿಬಿಎಂಪಿ ಚುನಾವಣೆಗೆ (BBMP Elections ) ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್ (Congress)​, ಸದ್ದಿಲ್ಲದೇ ಬೇರೆ ಪಕ್ಷದ ನಾಯಕರಿಗೆ ಗಾಳ ಹಾಕಿದ್ದು,ಇದೀಗ ಆಪರೇಷನ್​​​ ಹಸ್ತದ (Opeation Hasta) ಜೊತೆ ಆಪರೇಷನ್ ಬಿಬಿಎಂಪಿ ಶುರು ಮಾಡಿಕೊಂಡಿದೆ. ಮತ್ತೊಂದೆಡೆ ಕಾಂಗ್ರೆಸ್​ನ ಅಸ್ತ್ರದಿಂದ ತಮ್ಮ ನಾಯಕರನ್ನು ಹಿಡಿದಿಟ್ಟುಕೊಳ್ಳಲು ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸಿದೆ. ಆದರೂ ಸಹ ಇಂದು (ಆಗಸ್ಟ್ 21) ಹಲವು ಮಾಜಿ ಕಾರ್ಪೊರೇಟರ್​ಗಳು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. KR ಪುರ ಕ್ಷೇತ್ರದ ಮಾಜಿ ಕಾರ್ಪೊರೇಟರ್‌ಗಳಾದ ವೀರಣ್ಣ, ಶ್ರೀನಿವಾಸ ಅವರು ಇಂದು (ಆಗಸ್ಟ್ 21) ಕುಮಾರಕೃಪಾ ಗೆಸ್ಟ್​​​ಹೌಸ್​​​ನಲ್ಲಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಆರ್.ಆರ್ ನಗರದ ಕ್ಷೇತ್ರದ ಬಿಜೆಪಿ ಮಾಜಿ ಕಾರ್ಪೊರೇಟರ್‌ಗಳು ಕಾಂಗ್ರೆಸ್​ ಸೇರ್ಪಡೆಯಾದ ಬಳಿಕ ಇದೀಗ ಕೆ.ಆರ್ ಪುರ ಕ್ಷೇತ್ರದ ಮಾಜಿ ಕಾರ್ಪೋರೇಟ್​ಗಳು ಕೈ ಹಿಡಿದರು.

ವಿಜಿನಾಪುರ ವಾರ್ಡ್ ಮಾಜಿ ಕಾರ್ಪೋರೇಟರ್​ ರಾಜಣ್ಣ (ಬಂಡೆ) , ಕೆ.ಆರ್ ಪುರ ವಾರ್ಡ್ ಮಾಜಿ ಕಾರ್ಪೋರೇಟರ್​ ವೀರಣ್ಣ ಅವರು ಕಾಂಗ್ರೆಸ್​ ಸೇರ್ಪಡೆಯಾಗಿದ್ದು, ಈ ವೇಳೆ ಸಚಿವ ಬೈರತಿ ಸುರೇಶ್ ಕೂಡ ಉಪಸ್ಥಿತರಿದ್ದರು. ಕೆಲ ದಿನಗಳಿಂದ ಅಷ್ಟೇ ಆರ್​ಆರ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ಬೆಂಬಲಿಗರ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಇದೀಗ ಕೆಆರ್ ಪುರಂ ಕ್ಷೇತ್ರದಲ್ಲೂ ಸದ್ದಿಲ್ಲದೇ ಬಿಜೆಪಿ ಶಾಸಕರ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಬಿಜೆಪಿಗೆ ಆತಂಕ ಶುರುವಾಗಿದೆ.

ಇದನ್ನೂ ಓದಿ: ಬಿಜೆಪಿಯತ್ತ ಮುಖ ಮಾಡಿದ ಅಖಂಡ ಶ್ರೀನಿವಾಸ್ ಮೂರ್ತಿ, ಇತ್ತ ಡಿಕೆ ಶಿವಕುಮಾರ್​ ಭೇಟಿಯಾದ ಬಿಜೆಪಿ ಹಿರಿಯ ನಾಯಕ

ಇನ್ನು ಇಂದು ಸಂಜೆ ಕೆಪಿಸಿಸಿ ಕಚೇರಿಯಲ್ಲಿ ಜೆಡಿಎಸ್​, ಬಿಜೆಪಿ ಮುಖಂಡರು ಕಾಂಗ್ರೆಸ್​ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಆಯನೂರು ಮಂಜುನಾಥ್, ಶಿಕಾರಿಪುರ ನಾಗರಾಜ್ ಗೌಡ ಅಧಿಕೃತವಾಗಿ ಕೈ ಹಿಡಿಯಲಿದ್ದಾರೆ. ಇನ್ನು ಆಪರೇಷನ್​ ಹಸ್ತದಲ್ಲಿ ಭಾರೀ ಸುದ್ದಿಯಾಗಿರುವ ಯಶವಂತಪುರ ಬಿಜೆಪಿ ಶಾಸಕ ಎಸ್​.ಟಿ.ಸೋಮಶೇಖರ್​ ಬೆಂಬಲಿಗರು ಕೂಡ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.

ಮೊದಲು ತಮ್ಮ ಬೆಂಬಲಿಗರನ್ನು ಕಾಂಗ್ರೆಸ್​​ ಪಕ್ಷಕ್ಕೆ ಕಳಿಸುವುದು. ಬಳಿಕ ಕಾಂಗ್ರೆಸ್ ಸೇರುವ ಲೆಕ್ಕಾಚಾರದಲ್ಲಿ ಎಸ್​.ಟಿ.ಸೋಮಶೇಖರ್​ ಇದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಎಸ್​.ಟಿ.ಸೋಮಶೇಖರ್​ ನಡೆ ನಿಗೂಢವಾಗಿದ್ದು, ಅವರ ಮುಂದಿನ ರಾಜಕೀಯ ನಡೆ ಕುತೂಹಲ ಮೂಡಿಸಿದೆ.

ಸದ್ಯ ಆರ್​ಆರ್​ ನಗರ, ಕೆಆರ್​ ಪುರ ಕ್ಷೇತ್ರದಲ್ಲಿ ಆಪರೇಷನ್ ಸಕ್ಸಸ್ ಆಗಿದೆ. ಇದೀಗ ಎಸ್​​ಟಿ ಸೋಮಶೇಖರ್​ ಅವರ ಯಶವಂತಪುರ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಗಾಳ ಹಾಕಿದೆ.  ಹೀಗೆ ಬೆಂಗಳೂರು ನಗರದಲ್ಲಿ ಒಂದೊಂದೇ ಏರಿಯಾದ ಬಿಜೆಪಿ ನಾಯಕರನ್ನು ಕಾಂಗ್ರೆಸ್​ ಸರಳೆಯುತ್ತಿದ್ದು, ಬಿಜೆಪಿಗೆ ದಿಕ್ಕುತೋಚದಂತಾಗಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 1:20 pm, Mon, 21 August 23

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್