AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ಲೂಟಿ ವ್ಯವಹಾರ ಬಯಲು’: ಕಮಿಷನ್ ಸರ್ಕಾರಕ್ಕೆ ಲಂಚದ ಬಗ್ಗೆ ಮಾತನಾಡೋ ನೈತಿಕತೆ ಇಲ್ಲವೆಂದ ಅಶೋಕ್

ಮಂಗಳೂರು KRIDL ವಿಭಾಗದಲ್ಲಿ ಸಚಿವರ ಹೆಸರಿನಲ್ಲಿ ಶೇ 7ರಷ್ಟು ಕಮಿಷನ್ ವಸೂಲಿ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ಅಶೋಕ್ ರೈ ಆರೋಪಿಸಿ ಮುಖ್ಯಮಂತ್ರಿಗೆ ಪತ್ರ ಬರೆದ ವಿಚಾರವನ್ನೇ ಇಟ್ಟುಕೊಂಡು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ಆರೋಪದ ಕುರಿತ ತನಿಖೆಗೆ ಆಗ್ರಹಿಸಿದ್ದಾರೆ.

‘ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ಲೂಟಿ ವ್ಯವಹಾರ ಬಯಲು’: ಕಮಿಷನ್ ಸರ್ಕಾರಕ್ಕೆ ಲಂಚದ ಬಗ್ಗೆ ಮಾತನಾಡೋ ನೈತಿಕತೆ ಇಲ್ಲವೆಂದ ಅಶೋಕ್
ಆರ್. ಅಶೋಕ್Image Credit source: PTI
Anil Kalkere
| Edited By: |

Updated on: Aug 31, 2026 | 1:39 PM

Share

ಮುಖ್ಯಾಂಶಗಳು

  • ಕಾಂಗ್ರೆಸ್ ಶಾಸಕರ ಆರೋಪಕ್ಕೆ ಆರ್ ಅಶೋಕ್ ತಿರುಗೇಟು
  • KRIDLನಲ್ಲಿ ಶೇ 7 ಕಮಿಷನ್ ವಸೂಲಿ ಆರೋಪ
  • ಸಚಿವರ ಪಾತ್ರ ತನಿಖೆಗೆ ಪ್ರತಿಪಕ್ಷ ನಾಯಕ ಆಗ್ರಹ

ಬೆಂಗಳೂರು, ಆಗಸ್ಟ್ 31: ಮಂಗಳೂರು ಕೆಆರ್‌ಐಡಿಎಲ್‌ (KRIDL) ವಿಭಾಗದ ಎಂಜಿನಿಯರ್‌ಗಳು ಉಸ್ತುವಾರಿ ಸಚಿವರು ಹಾಗೂ ಇಲಾಖೆ ಸಚಿವರ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ 7ರಷ್ಟು ‘ಶುಲ್ಕ’ ವಸೂಲಿ ಮಾಡುತ್ತಿದ್ದಾರೆ ಎಂಬ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಅವರ ಆರೋಪ ಇದೀಗ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಈ ವಿಚಾರವಾಗಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ (R Ashoka) ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ಗೆ ಲಿಖಿತ ದೂರು ನೀಡಿದ್ದರು. ಮಂಗಳೂರು ಕೆಆರ್‌ಐಡಿಎಲ್ ವಿಭಾಗದಲ್ಲಿ ಕಾಮಗಾರಿ ನಡೆಸುವ ಗುತ್ತಿಗೆದಾರರ ಮೇಲೆ ಒತ್ತಡ ಹೇರಿ, ಸಚಿವರ ಹೆಸರಿನಲ್ಲಿ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದರು.

ಈ ವಿಚಾರವನ್ನು ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪ್ರಸ್ತಾಪಿಸಿರುವ ಆರ್. ಅಶೋಕ್, ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದಾಗ ಅದನ್ನು ರಾಜಕೀಯ ಎಂದು ಹೇಳಲಾಗುತ್ತಿತ್ತು. ಆದರೆ, ಇದೀಗ ಆಡಳಿತಾರೂಢ ಕಾಂಗ್ರೆಸ್‌ನ ಶಾಸಕರೇ ಸರ್ಕಾರದ ವ್ಯವಸ್ಥೆಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಅಧಿಕಾರಿಗಳು ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಹೆಸರನ್ನು ಬಳಸಿಕೊಂಡು ಶೇ 7ರಷ್ಟು ‘ಪರ್ಸಂಟೇಜ್’ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪವನ್ನು ಶಾಸಕ ಅಶೋಕ್ ರೈ ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾರೆ. ಈ ಆರೋಪದ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆರ್. ಅಶೋಕ್ ಆಗ್ರಹಿಸಿದ್ದಾರೆ.

‘ಕಮಿಷನ್ ದಂಧೆ’ ತನಿಖೆಗೆ ಆರ್. ಅಶೋಕ್ ಆಗ್ರಹ

ಕೆಆರ್‌ಐಡಿಎಲ್‌ನಲ್ಲಿ ಕಮಿಷನ್ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸಿ, ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಆರ್. ಅಶೋಕ್ ಒತ್ತಾಯಿಸಿದ್ದಾರೆ. ಅಲ್ಲದೆ, ಸಚಿವರ ಹೆಸರಿನಲ್ಲಿ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಇರುವುದರಿಂದ ಸಂಬಂಧಪಟ್ಟ ಇಲಾಖೆ ಸಚಿವರು ಹಾಗೂ ಮಂಗಳೂರು ಜಿಲ್ಲಾ ಉಸ್ತುವಾರಿ ಸಚಿವರ ಪಾತ್ರದ ಬಗ್ಗೆಯೂ ಉನ್ನತ ಮಟ್ಟದ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಆರ್ ಅಶೋಕ್ ಎಕ್ಸ್ ಸಂದೇಶ

ಸಾರ್ವಜನಿಕರ ತೆರಿಗೆ ಹಣದಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿಗಳು ಕಮಿಷನ್ ದಂಧೆಗೆ ಬಲಿಯಾಗುತ್ತಿವೆ ಎಂದು ಆರೋಪಿಸಿರುವ ಆರ್. ಅಶೋಕ್, ಇದರಿಂದ ಕಳಪೆ ಕಾಮಗಾರಿಗಳಿಗೆ ಕಾರಣವಾಗುತ್ತಿದೆ ಎಂದು ಹೇಳಿದ್ದಾರೆ. ತಮ್ಮದೇ ಪಕ್ಷದ ಶಾಸಕ ಮುಖ್ಯಮಂತ್ರಿ ಅವರಿಗೆ ಪತ್ರ ಬರೆದು ಆರೋಪಿಸಿರುವಾಗಲೂ ಸರ್ಕಾರ ಮೌನ ವಹಿಸಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
‘ಬಿಗ್ ಬಾಸ್ ಕನ್ನಡ ಸೀಸನ್ 13’: ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು?
‘ಬಿಗ್ ಬಾಸ್ ಕನ್ನಡ ಸೀಸನ್ 13’: ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು?
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್
ಎಫ್​ಐಆರ್ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ
ಎಫ್​ಐಆರ್ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ
ಇಂದು ಹೇರಂಭ ಸಂಕಷ್ಟ ಚತುರ್ಥಿ; ಸಿಂಹವಾಹನಸ್ಥ ವಿನಾಯಕನ ಆರಾಧನೆಯ ದಿನ
ಇಂದು ಹೇರಂಭ ಸಂಕಷ್ಟ ಚತುರ್ಥಿ; ಸಿಂಹವಾಹನಸ್ಥ ವಿನಾಯಕನ ಆರಾಧನೆಯ ದಿನ
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?