AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಆರ್​ ಪಾಟೀಲ್ ಹೇಳಿಕೆಗೆ ಕೃಷ್ಣ ಬೈರೇಗೌಡ ತಿರುಗೇಟು; ಮಾಧ್ಯಮದವರ ಕೈಗೆ ಸದನದ ಕಡತದ ಪ್ರತಿ ನೀಡಿದ ಸಚಿವರು

ಸಚಿವ ಕೃಷ್ಣಬೈರೇಗೌಡ ವಿರುದ್ಧ ಸಿಡಿದೆದ್ದಿರುವ ಸ್ವಪಕ್ಷ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್, ನ್ಯೂನ್ಯತೆ ಬಗ್ಗೆ ಸದನದಲ್ಲಿ ಒಪ್ಪಿಕೊಂಡಿದ್ದರ ಬಗ್ಗೆ ಮುಖ್ಯಮಂತ್ರಿ ಅವರಿಗೆ ದಾಖಲೆ ನೀಡುತ್ತೇನೆ ಎಂದು ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿದ ಕೃಷ್ಣಬೈರೇಗೌಡ, ಸದನದ ಕಡತದ ಪ್ರತಿಯನ್ನು ಮಾಧ್ಯಮದವರಿಗೆ ನೀಡಿದರು.

ಬಿಆರ್​ ಪಾಟೀಲ್ ಹೇಳಿಕೆಗೆ ಕೃಷ್ಣ ಬೈರೇಗೌಡ ತಿರುಗೇಟು; ಮಾಧ್ಯಮದವರ ಕೈಗೆ ಸದನದ ಕಡತದ ಪ್ರತಿ ನೀಡಿದ ಸಚಿವರು
ಕೃಷ್ಣಬೈರೇಗೌಡ ಮತ್ತು ಬಿಆರ್ ಪಾಟೀಲ್
ಅಶೋಕ ಯಡಳ್ಳಿ, ವಿಜಯಪುರ
| Edited By: Rakesh Nayak Manchi|

Updated on: Nov 29, 2023 | 6:00 PM

Share

ವಿಜಯಪುರ, ನ.29: ಸದನದಲ್ಲಿ ನ್ಯೂನ್ಯತೆ ಒಪ್ಪಿಕೊಂಡು ಬಳಿಕ ನನ್ನ ಇಲಾಖೆ ವ್ಯಾಪ್ತಿಗೆ ಬರುವುದಿಲ್ಲ ಅಂದರೆ ಹೇಗೆ? ಎಂಬ ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿಆರ್​ ಪಾಟೀಲ್ (BR Patil) ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಕೃಷ್ಣಬೈರೇಗೌಡ (Krishna Byre Gowda), ಮುಖ್ಯಮಂತ್ರಿಗೆ ದಾಖಲೆ ಬೇಕಿದ್ದರೆ ಕೊಡಲಿ, ಸದನಲ್ಲಿ ಮಾತನಾಡಿದ್ದರ ದಾಖಲೆ ಇವೆ ತೆಗೆದುಕೊಳ್ಳಿ ಎಂದು ಮಾದ್ಯಮದವರಿಗೆ ಸದನದ ಕಡತದ ಪ್ರತಿ ನೀಡಿದರು.

ಸಚಿವ ಕೃಷ್ಣಬೈರೇಗೌಡ ತಮ್ಮ ಮೇಲೆ ಆರೋಪ ಮಾಡಿದ್ದಾರೆಂದು ಪತ್ರದಲ್ಲಿ ಬಿಆರ್ ಪಾಟೀಲ್ ಅವರು ನಮೂದು ಮಾಡಿದ್ದಾರೆ. ಈ ಕುರಿತು ಸದನಲ್ಲಿ ಮಾತನಾಡಿದ್ದರ ದಾಖಲೆ ನೀಡುವುದಾಗಿ ಕೃಷ್ಣಬೈರೇಗೌಡ ಹೇಳಿದ್ದರು. ನನ್ನ ಬಳಿಯು ದಾಖಲೆ ಇದೆ, ಕೊಡುತ್ತೇನೆ ಎಂದು ಬಿಆರ್ ಪಾಟೀಲ್ ಹೇಳಿದ್ದರು.

ಇದನ್ನೂ ಓದಿ: ಸಚಿವ ಕೃಷ್ಣಭೈರೇಗೌಡ ವಿರುದ್ದ ಶಾಸಕ ಬಿಆರ್ ಪಾಟೀಲ್ ಮತ್ತೆ ಕಿಡಿ; ಆರದ ಮುನಿಸು

ವಿಜಯಪುರ ಜಿಪಂ ಸಭಾಭವನದಲ್ಲಿ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಮಾತನಾಡಿದ ಕೃಷ್ಣಬೈರೇಗೌಡ, ಅವರು ಮುಖ್ಯಮಂತ್ರಿಗೆ ದಾಖಲೆ ಬೇಕಿದ್ದರೆ ಕೊಡಲಿ. ಸದನಲ್ಲಿ ಮಾತನಾಡಿದ್ದರ ದಾಖಲೆ ಇವೆ ತೆಗೆದುಕೊಳ್ಳಿ ಎಂದು ಮಾದ್ಯಮದವರ ಕೈಗೆ ಸದನದ ಕಡತದ ಪ್ರತಿ ನೀಡಿ ತೆರಳಿದರು.

ಸಿದ್ದರಾಮಯ್ಯ ಎದುರು ಕೆಲ ದಾಖಲೆ ನೀಡುತ್ತೇನೆ. ನಾನು ಸಮಾಜವಾದಿ ಹಿನ್ನೆಲೆಯಿಂದ ಬಂದಿದ್ದೇನೆ. ನನ್ನಲ್ಲಿ ಯಾವುದೇ ಅಂತರಂಗ, ಬಹಿರಂಗವಿಲ್ಲ. ಪ್ರಿಯಾಂಕ್ ಖರ್ಗೆ ಸಚಿವರಾದ ಮೇಲೆ ನನ್ನ ಕ್ಷೇತ್ರಕ್ಕೆ ಹತ್ತು ಯಾತ್ರಿ ನಿವಾಸ ನೀಡಿದ್ದರು‌. ಅದರಲ್ಲಿ ಕೇವಲ ಒಂದು ಪೂರ್ಣಗೊಂಡಿದೆ. ಆ ಬಗ್ಗೆ ಪ್ರಗತಿ ಪರೀಶಿಲನಾ ಸಭೆ ಕೂಡ ನಡೆದಿಲ್ಲ. ಮತ್ತು ಕೆಲವು ಕಡೆ ಕಳೆಪೆ ಕೆಲಸ ಆಗಿದೆ. ಇದನ್ನು ಸ್ವತಃ ಭೈರೇ ಗೌಡರೆ ಒಪ್ಪಿಕೊಂಡು, ಭೂಸೇನಾ ನಿಗಮದಲ್ಲಿ ಕೆಲ ನ್ಯೂನ್ಯತೆ ಇದೆ ಎಂದಿದ್ದರು.

ಇದನ್ನೂ ಓದಿ: ಸಿಎಂಗೆ ಪತ್ರ ಬರೆದಿದ್ದೇನೆ, ತನಿಖೆ ಆಗುವವರೆಗೂ ಸದನಕ್ಕೆ ಹೋಗಲ್ಲ; ಕೃಷ್ಣಭೈರೇಗೌಡ ವಿರುದ್ಧ ತೊಡೆ ತಟ್ಟಿದ ಬಿ.ಆರ್.ಪಾಟೀಲ್

ಒಬ್ಬ ಮಂತ್ರಿಯಾಗಿ ತಪ್ಪು ಒಪ್ಪಿದ ಮೇಲೆ ಅದನ್ನು ಸುಧಾರಣೆ ಮಾಡಬೇಕಿತ್ತು. ಇವಾಗ ನನ್ನ ಇಲಾಖೆ ವ್ಯಾಪ್ತಿಗೆ ಬರುವುದಿಲ್ಲ ಅಂದರೆ ಹೇಗೆ? ಸದನದಲ್ಲಿ ಒಂದು ಪರಂಪರೆಯಿದೆ. ಯಾವ ಸಚಿವರು ಗೈರಾಗಿರುತ್ತಾರೋ, ಇದ್ದವರು ಉತ್ತರ ನೀಡುತ್ತಾರೆ ಎಂದು ಅಳಂದ ಪಟ್ಟಣದಲ್ಲಿ ಬಿ.ಆರ್ ಪಾಟೀಲ್ ಹೇಳಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ