AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಆರ್​ ಪಾಟೀಲ್ ಹೇಳಿಕೆಗೆ ಕೃಷ್ಣ ಬೈರೇಗೌಡ ತಿರುಗೇಟು; ಮಾಧ್ಯಮದವರ ಕೈಗೆ ಸದನದ ಕಡತದ ಪ್ರತಿ ನೀಡಿದ ಸಚಿವರು

ಸಚಿವ ಕೃಷ್ಣಬೈರೇಗೌಡ ವಿರುದ್ಧ ಸಿಡಿದೆದ್ದಿರುವ ಸ್ವಪಕ್ಷ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್, ನ್ಯೂನ್ಯತೆ ಬಗ್ಗೆ ಸದನದಲ್ಲಿ ಒಪ್ಪಿಕೊಂಡಿದ್ದರ ಬಗ್ಗೆ ಮುಖ್ಯಮಂತ್ರಿ ಅವರಿಗೆ ದಾಖಲೆ ನೀಡುತ್ತೇನೆ ಎಂದು ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿದ ಕೃಷ್ಣಬೈರೇಗೌಡ, ಸದನದ ಕಡತದ ಪ್ರತಿಯನ್ನು ಮಾಧ್ಯಮದವರಿಗೆ ನೀಡಿದರು.

ಬಿಆರ್​ ಪಾಟೀಲ್ ಹೇಳಿಕೆಗೆ ಕೃಷ್ಣ ಬೈರೇಗೌಡ ತಿರುಗೇಟು; ಮಾಧ್ಯಮದವರ ಕೈಗೆ ಸದನದ ಕಡತದ ಪ್ರತಿ ನೀಡಿದ ಸಚಿವರು
ಕೃಷ್ಣಬೈರೇಗೌಡ ಮತ್ತು ಬಿಆರ್ ಪಾಟೀಲ್
ಅಶೋಕ ಯಡಳ್ಳಿ, ವಿಜಯಪುರ
| Updated By: Rakesh Nayak Manchi|

Updated on: Nov 29, 2023 | 6:00 PM

Share

ವಿಜಯಪುರ, ನ.29: ಸದನದಲ್ಲಿ ನ್ಯೂನ್ಯತೆ ಒಪ್ಪಿಕೊಂಡು ಬಳಿಕ ನನ್ನ ಇಲಾಖೆ ವ್ಯಾಪ್ತಿಗೆ ಬರುವುದಿಲ್ಲ ಅಂದರೆ ಹೇಗೆ? ಎಂಬ ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿಆರ್​ ಪಾಟೀಲ್ (BR Patil) ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಕೃಷ್ಣಬೈರೇಗೌಡ (Krishna Byre Gowda), ಮುಖ್ಯಮಂತ್ರಿಗೆ ದಾಖಲೆ ಬೇಕಿದ್ದರೆ ಕೊಡಲಿ, ಸದನಲ್ಲಿ ಮಾತನಾಡಿದ್ದರ ದಾಖಲೆ ಇವೆ ತೆಗೆದುಕೊಳ್ಳಿ ಎಂದು ಮಾದ್ಯಮದವರಿಗೆ ಸದನದ ಕಡತದ ಪ್ರತಿ ನೀಡಿದರು.

ಸಚಿವ ಕೃಷ್ಣಬೈರೇಗೌಡ ತಮ್ಮ ಮೇಲೆ ಆರೋಪ ಮಾಡಿದ್ದಾರೆಂದು ಪತ್ರದಲ್ಲಿ ಬಿಆರ್ ಪಾಟೀಲ್ ಅವರು ನಮೂದು ಮಾಡಿದ್ದಾರೆ. ಈ ಕುರಿತು ಸದನಲ್ಲಿ ಮಾತನಾಡಿದ್ದರ ದಾಖಲೆ ನೀಡುವುದಾಗಿ ಕೃಷ್ಣಬೈರೇಗೌಡ ಹೇಳಿದ್ದರು. ನನ್ನ ಬಳಿಯು ದಾಖಲೆ ಇದೆ, ಕೊಡುತ್ತೇನೆ ಎಂದು ಬಿಆರ್ ಪಾಟೀಲ್ ಹೇಳಿದ್ದರು.

ಇದನ್ನೂ ಓದಿ: ಸಚಿವ ಕೃಷ್ಣಭೈರೇಗೌಡ ವಿರುದ್ದ ಶಾಸಕ ಬಿಆರ್ ಪಾಟೀಲ್ ಮತ್ತೆ ಕಿಡಿ; ಆರದ ಮುನಿಸು

ವಿಜಯಪುರ ಜಿಪಂ ಸಭಾಭವನದಲ್ಲಿ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಮಾತನಾಡಿದ ಕೃಷ್ಣಬೈರೇಗೌಡ, ಅವರು ಮುಖ್ಯಮಂತ್ರಿಗೆ ದಾಖಲೆ ಬೇಕಿದ್ದರೆ ಕೊಡಲಿ. ಸದನಲ್ಲಿ ಮಾತನಾಡಿದ್ದರ ದಾಖಲೆ ಇವೆ ತೆಗೆದುಕೊಳ್ಳಿ ಎಂದು ಮಾದ್ಯಮದವರ ಕೈಗೆ ಸದನದ ಕಡತದ ಪ್ರತಿ ನೀಡಿ ತೆರಳಿದರು.

ಸಿದ್ದರಾಮಯ್ಯ ಎದುರು ಕೆಲ ದಾಖಲೆ ನೀಡುತ್ತೇನೆ. ನಾನು ಸಮಾಜವಾದಿ ಹಿನ್ನೆಲೆಯಿಂದ ಬಂದಿದ್ದೇನೆ. ನನ್ನಲ್ಲಿ ಯಾವುದೇ ಅಂತರಂಗ, ಬಹಿರಂಗವಿಲ್ಲ. ಪ್ರಿಯಾಂಕ್ ಖರ್ಗೆ ಸಚಿವರಾದ ಮೇಲೆ ನನ್ನ ಕ್ಷೇತ್ರಕ್ಕೆ ಹತ್ತು ಯಾತ್ರಿ ನಿವಾಸ ನೀಡಿದ್ದರು‌. ಅದರಲ್ಲಿ ಕೇವಲ ಒಂದು ಪೂರ್ಣಗೊಂಡಿದೆ. ಆ ಬಗ್ಗೆ ಪ್ರಗತಿ ಪರೀಶಿಲನಾ ಸಭೆ ಕೂಡ ನಡೆದಿಲ್ಲ. ಮತ್ತು ಕೆಲವು ಕಡೆ ಕಳೆಪೆ ಕೆಲಸ ಆಗಿದೆ. ಇದನ್ನು ಸ್ವತಃ ಭೈರೇ ಗೌಡರೆ ಒಪ್ಪಿಕೊಂಡು, ಭೂಸೇನಾ ನಿಗಮದಲ್ಲಿ ಕೆಲ ನ್ಯೂನ್ಯತೆ ಇದೆ ಎಂದಿದ್ದರು.

ಇದನ್ನೂ ಓದಿ: ಸಿಎಂಗೆ ಪತ್ರ ಬರೆದಿದ್ದೇನೆ, ತನಿಖೆ ಆಗುವವರೆಗೂ ಸದನಕ್ಕೆ ಹೋಗಲ್ಲ; ಕೃಷ್ಣಭೈರೇಗೌಡ ವಿರುದ್ಧ ತೊಡೆ ತಟ್ಟಿದ ಬಿ.ಆರ್.ಪಾಟೀಲ್

ಒಬ್ಬ ಮಂತ್ರಿಯಾಗಿ ತಪ್ಪು ಒಪ್ಪಿದ ಮೇಲೆ ಅದನ್ನು ಸುಧಾರಣೆ ಮಾಡಬೇಕಿತ್ತು. ಇವಾಗ ನನ್ನ ಇಲಾಖೆ ವ್ಯಾಪ್ತಿಗೆ ಬರುವುದಿಲ್ಲ ಅಂದರೆ ಹೇಗೆ? ಸದನದಲ್ಲಿ ಒಂದು ಪರಂಪರೆಯಿದೆ. ಯಾವ ಸಚಿವರು ಗೈರಾಗಿರುತ್ತಾರೋ, ಇದ್ದವರು ಉತ್ತರ ನೀಡುತ್ತಾರೆ ಎಂದು ಅಳಂದ ಪಟ್ಟಣದಲ್ಲಿ ಬಿ.ಆರ್ ಪಾಟೀಲ್ ಹೇಳಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಗುವಿನ ಮೇಲೆ ನಾಯಿ ದಾಳಿ, ಹೀರೋನಂತೆ ಬಂದು ಕಾಪಾಡಿದ ತಂದೆ
ಮಗುವಿನ ಮೇಲೆ ನಾಯಿ ದಾಳಿ, ಹೀರೋನಂತೆ ಬಂದು ಕಾಪಾಡಿದ ತಂದೆ
ಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಈ ಸಲ ಫ್ಲಾವರ್​ ಶೋ ಥೀಮ್
ಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಈ ಸಲ ಫ್ಲಾವರ್​ ಶೋ ಥೀಮ್
100 ಎಸೆತಗಳ ಪಂದ್ಯ: 99ನೇ ಎಸೆತದಲ್ಲಿ 1 ವಿಕೆಟ್​ನ ರೋಚಕ ಗೆಲುವು..!
100 ಎಸೆತಗಳ ಪಂದ್ಯ: 99ನೇ ಎಸೆತದಲ್ಲಿ 1 ವಿಕೆಟ್​ನ ರೋಚಕ ಗೆಲುವು..!
ಕಂದಕಕ್ಕೆ ಉರುಳಿದ ವಾಹನ,ಮೂವರು ಸಿಆರ್​​ಪಿಎಫ್​ ಸಿಬ್ಬಂದಿ ಸಾವು
ಕಂದಕಕ್ಕೆ ಉರುಳಿದ ವಾಹನ,ಮೂವರು ಸಿಆರ್​​ಪಿಎಫ್​ ಸಿಬ್ಬಂದಿ ಸಾವು
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ
ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ
ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ