AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ ಎಂದ ಸಚಿವ ಕೃಷ್ಣಭೈರೇಗೌಡ!

ಅಧಿಕಾರ ಹಂಚಿಕೆ, ಮುಂದಿನ ಸಿಎಂ ಯಾರು? ನವೆಂಬರ್ ಕ್ರಾಂತಿ ಇತ್ಯಾದಿ ಚರ್ಚೆಗಳು ಕರ್ನಾಟಕ ಕಾಂಗ್ರೆಸ್​ನಲ್ಲಿ ಜೋರಾಗಿರುವ ಸಂದರ್ಭದಲ್ಲಿಯೇ, ಸಚಿವ ಸ್ಥಾನ ತ್ಯಜಿಸಲು ಸಿದ್ಧ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಸದ್ಯ ಸಚಿವ ಕೃಷ್ಣಭೈರೇಗೌಡ ನೀಡಿರುವ ಹೇಳಿಕೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ ಎಂದ ಸಚಿವ ಕೃಷ್ಣಭೈರೇಗೌಡ!
ಕೃಷ್ಣಭೈರೇಗೌಡ
Anil Kalkere
| Updated By: Ganapathi Sharma|

Updated on:Oct 25, 2025 | 1:53 PM

Share

ಬೆಂಗಳೂರು, ಅಕ್ಟೋಬರ್ 25: ಕರ್ನಾಟಕ ಕಾಂಗ್ರೆಸ್ (Congress) ಪಕ್ಷದಲ್ಲಿ ನವೆಂಬರ್ ಕ್ರಾಂತಿ, ಅಧಿಕಾರ ಹಂಚಿಕೆ, ಸಂಪುಟ ಪುನಾರಚನೆ ವಿಚಾರ ಜೋರಾಗಿ ಚರ್ಚೆಯಾಗುತ್ತಿರುವ ಸಂದರ್ಭದಲ್ಲೇ ಕಂದಾಯ ಸಚಿವ ಕೃಷ್ಣಭೈರೇಗೌಡ (Krishna Byre Gowda) ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ ಎಂದು ಹೇಳಿದ್ದಾರೆ. ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ಅರ್ಹತೆಗೂ ಮೀರಿ ಅವಕಾಶಗಳನ್ನು ಪಕ್ಷ ನೀಡಿದೆ. ನನ್ನನ್ನು ಗುರುತಿಸಿ ಸಾಕಷ್ಟು ಅವಕಾಶಗಳನ್ನು ಕೊಟ್ಟಿರುವುದಕ್ಕೆ ಆಭಾರಿಯಾಗಿದ್ದೇನೆ. ಸಚಿವ ಸ್ಥಾನದ ತ್ಯಾಗಕ್ಕೆ ಸಿದ್ದ ಎಂದು ಅವರು ಹೇಳಿದ್ದಾರೆ.

ರಾಜ್ಯ ರಾಜಕೀಯದಲ್ಲಿ, ಅದರಲ್ಲೂ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಆಂತರಿಕ ಕಲಹ ಜೋರಾಗಿರುವ ಸಂದರ್ಭದಲ್ಲಿ ಕೃಷ್ಣಭೈರೇಗೌಡರು ಈ ಹೇಳಿಕೆ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಕೆಲವು ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಸಚಿವರಿಗೆ ಔತಣಕೂಟ ಏರ್ಪಡಿಸಿದ್ದರು. ಸಂಪುಟ ಪುನಾರಚನೆ ಸಂಬಂಧ ಚರ್ಚೆಗಾಗಿಯೇ ಈ ಔತಣಕೂಟ ಏರ್ಪಟ್ಟಿತ್ತು ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಕೇಳಿ ಬಂದಿತ್ತು. ಆದರೆ, ಈ ಚರ್ಚೆಯನ್ನು ಮುಖ್ಯಮಂತ್ರಿಗಳು ಹಾಗೂ ಇತರ ಕಾಂಗ್ರೆಸ್ ನಾಯಕರು ನಿರಾಕರಿಸಿದ್ದರು.

26 ಲಕ್ಷ ಭಕ್ತರಿಂದ ಹಾಸನಾಂಬೆ ದರ್ಶನ: ಕೃಷ್ಣಭೈರೇಗೌಡ

ಈ ಬಾರಿ 26 ಲಕ್ಷ ಭಕ್ತರು ಹಾಸನಾಂಬ ದೇವಿ ದರ್ಶನ ಪಡೆದಿದ್ದಾರೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಬೆಂಗಳೂರಿನಲ್ಲಿ ಮಾಹಿತಿ ನೀಡಿದ್ದಾರೆ. ಹಾಸನಾಂಬ ದೇವಿ ಅಂದರೆ ಹಸನ್ಮುಖಿ, ಪ್ರಸನ್ನತೆಯ ಸಂಕೇತ. ದೇವಿಯ ದರ್ಶನ ಪಡೆದ ಭಕ್ತರು ಸಂತೋಷದಿಂದ ಹೋಗಿದ್ದಾರೆ. ದರ್ಶನ ಪಡೆದ 26 ಲಕ್ಷ ಭಕ್ತರ ಪೈಕಿ ಶೇ 60ರಷ್ಟು ಮಹಿಳೆಯರು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮಂಡ್ಯ: ಮತ್ತೊಬ್ಬ ಪ್ರಭಾವಿ ಒಕ್ಕಲಿಗ ನಾಯಕನ ಪುತ್ರ ರಾಜಕೀಯಕ್ಕೆ ಎಂಟ್ರಿ

ಮಹಿಳೆಯರಿಗೆ ಸರ್ಕಾರಿ ಬಸ್​​ನಲ್ಲಿ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಯಿಂದಆಗಿಯೂ ಹೆಚ್ಚಿನ ಭಕ್ತರು ಬರಲು ಸಾಧ್ಯವಾಗಿದೆ. ದೇವರು ಯಾರ ಮನೆಯ ಸ್ವತ್ತು ಕೂಡ ಅಲ್ಲ. ಸಾಮಾನ್ಯರೆಲ್ಲರಿಗೂ ದರ್ಶನ ಸಿಗುವಂತೆ ಮಾಡಿದ್ದೇವೆ ಎಂದು ಕೃಷ್ಣಭೈರೇಗೌಡ ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:10 pm, Sat, 25 October 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ