AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯಲ್ಲಿ ಕೃಷ್ಣಾಷ್ಟಮಿ ಆಚರಣೆಗೆ ಅಡ್ಡಗಾಲು ಹಾಕಿದ ಕೊರೊನಾ

ಆಗಸ್ಟ್ 30ರ ಬೆಳಗ್ಗೆಯಿಂದಲೇ ಶ್ರೀಕೃಷ್ಣನ ಭಕ್ತರು ಉಪವಾಸ ಇರುತ್ತಾರೆ. ಅಂದು ರಾತ್ರಿ 12. 17ಕ್ಕೆ ಸರಿಯಾಗಿ ಶ್ರೀಕೃಷ್ಣನಿಗೆ ಅರ್ಘ್ಯ ಪ್ರದಾನವಾಗಲಿದೆ.

ಉಡುಪಿಯಲ್ಲಿ ಕೃಷ್ಣಾಷ್ಟಮಿ ಆಚರಣೆಗೆ ಅಡ್ಡಗಾಲು ಹಾಕಿದ ಕೊರೊನಾ
ಉಡುಪಿ ಕೃಷ್ಣ (ಸಂಗ್ರಹ ಚಿತ್ರ(
TV9 Web
| Updated By: ಆಯೇಷಾ ಬಾನು|

Updated on: Aug 30, 2021 | 8:24 AM

Share

ಉಡುಪಿ: ಕಡೆಗೋಲು ಕೃಷ್ಣನ ನಗರಿ ಉಡುಪಿಯಲ್ಲಿ ಅಷ್ಟಮಿ ಆಚರಣೆಗೆ ಕೊರೋನಾ ಈ ಬಾರಿ ಅಡ್ಡಗಾಲು ಹಾಕಿದೆ. ಆಗಸ್ಟ್ 30 ಮತ್ತು 31 ಕ್ಕೆ ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಶ್ರೀಕೃಷ್ಣ ಲೀಲೋತ್ಸವ ಕಾರ್ಯಕ್ರಮಗಳು ನಡೆಯಲಿದೆ. ಆಗಸ್ಟ್ 30ರ ಬೆಳಗ್ಗೆಯಿಂದಲೇ ಶ್ರೀಕೃಷ್ಣನ ಭಕ್ತರು ಉಪವಾಸ ಇರುತ್ತಾರೆ. ಅಂದು ರಾತ್ರಿ 12. 17ಕ್ಕೆ ಸರಿಯಾಗಿ ಶ್ರೀಕೃಷ್ಣನಿಗೆ ಅರ್ಘ್ಯ ಪ್ರದಾನವಾಗಲಿದೆ.

ಆಗಸ್ಟ್ 31 ರಥಬೀದಿಯಲ್ಲಿ ಶ್ರೀ ಕೃಷ್ಣನ ಲೀಲೋತ್ಸವ ಕಾರ್ಯಕ್ರಮ ನಡೆಯುತ್ತದೆ. ಈ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಈವರೆಗೆ ಪಾಲ್ಗೊಳ್ಳುತ್ತಿದ್ದರು. ಕೊರೋನಾ ಸಾಂಕ್ರಾಮಿಕ ಇರುವ ಕಾರಣ, ಈ ಬಾರಿ ನಿಗದಿತ ಭಕ್ತರಿಗೆ ಮಾತ್ರ ಅವಕಾಶ ನೀಡಲಾಗಿದೆ. ಧಾರ್ಮಿಕ ವಿಧಿ-ವಿಧಾನಗಳು ಪ್ರತಿವರ್ಷದಂತೆ ನಡೆಯುತ್ತದೆ ಎಂದು ಪರ್ಯಾಯ ಅದಮಾರು ಮಠ ತಿಳಿಸಿದೆ.

ಈ ಬಾರಿ ಕೃಷ್ಣ ಭಕ್ತರಿಗೆ ವಿತರಣೆ ಮಾಡಲು 40 ಸಾವಿರ ಅಕ್ಕಿಯ ಚಕ್ಕುಲಿಗಳನ್ನು ಸಿದ್ಧ ಮಾಡಿಕೊಳ್ಳಲಾಗಿದೆ. 80 ಸಾವಿರ ವಿವಿಧ ಬಗೆಯ ಉಂಡೆಗಳನ್ನು ಮಠದ ಸಿಬ್ಬಂದಿ ರೆಡಿ ಮಾಡಿದ್ದಾರೆ. ರಥಬೀದಿಯಲ್ಲಿ ಗುರ್ಜಿಗಳನ್ನು ಹಾಕಲಾಗಿದೆ. ಗೊಲ್ಲ ವೇಷದಾರಿಗಳು ಮಡಕೆ ಒಡೆಯುವ ಸಂಪ್ರದಾಯವನ್ನು ಮಾಡಲಿದ್ದಾರೆ. ಶ್ರೀಕೃಷ್ಣನ ಮಣ್ಣಿನ ಮೂರ್ತಿಯನ್ನು ರಥಬೀದಿಯಲ್ಲಿ ಉತ್ಸವ ಮಾಡಲಾಗುತ್ತದೆ.

ಕೃಷ್ಣ ಮಠ ಪರ್ಯಾಯ ಅದಮಾರು ಮಠ ಮತ್ತು ಅಷ್ಟ ಮಠಗಳಿಗೆ ಸಂಬಂಧಪಟ್ಟಂತ ಸ್ವಾಮೀಜಿಗಳು ಮತ್ತು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು. ಭಕ್ತರಿಗೆ ಕೃಷ್ಣ ಲೀಲೋತ್ಸವ ಕಾರ್ಯಕ್ರಮಕ್ಕೆ ರಥಬೀದಿಗೆ ಪ್ರವೇಶ ಅವಕಾಶ ಇಲ್ಲ ಎಂದು ಜಿಲ್ಲಾಡಳಿತ ಸೂಚನೆ ಹೊರಡಿಸಿದೆ. ಜನಜಂಗುಳಿ ಸೇರುವ ಅವಕಾಶ ಇಲ್ಲ ಎಂದು ಪೊಲೀಸ್ ಇಲಾಖೆ ಸೂಚಿಸಿದೆ.

(Krishnashtami Celebrations in Udupi Hit by Coronavirus Pandemic)

ಇದನ್ನೂ ಓದಿ: ಗೋಕುಲಾಷ್ಟಮಿಯ ದಿನ ನಿಮ್ಮ ರಾಶಿಗೆ ಅನುಸಾರವಾಗಿ ಕೃಷ್ಣನಿಗೆ ಹೀಗೆ ಬಟ್ಟೆ ತೊಡಿಸಿ, ಸಿಹಿ ತಿಂಡಿಯಿಟ್ಟು ಶ್ರೀ ಕೃಷ್ಣಾರ್ಪಣಮಸ್ತು ಅನ್ನಿ

ಇದನ್ನೂ ಓದಿ: Gokulashtami 2021: ಶ್ರೀ ಕೃಷ್ಣನ ಕೃಪೆ ನಿಮ್ಮ ಮೇಲಿರಬೇಕು ಅಂದರೆ ಗೋಕುಲಾಷ್ಟಮಿ ಸಂದರ್ಭ ಈ 10 ವಿಷಯ ತಿಳಿದುಕೊಳ್ಳಿ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!