AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋ ಹತ್ಯೆ ನಿಷೇಧ ವಿಧೇಯಕ ಮಂಡನೆಗೂ ಮುನ್ನ ವಿಧಾನಸೌಧ ಅಂಗಳದಲ್ಲಿ ಹೆಜ್ಜೆ ಹಾಕಿದ ಗೋಮಾತೆ

ವಿಧೇಯಕ ಅಂಗೀಕಾರಕ್ಕೆ ಮುನ್ನ ವಿಧಾನಸೌಧದ ಪೂರ್ವ ದ್ವಾರದ ಮುಂದೆ ಗೋವುಗಳನ್ನು ಕರೆತಂದು ಪೂಜೆ ಮಾಡಿದ್ದು ವಿಶೇಷವಾಗಿತ್ತು.

ಗೋ ಹತ್ಯೆ ನಿಷೇಧ ವಿಧೇಯಕ ಮಂಡನೆಗೂ ಮುನ್ನ ವಿಧಾನಸೌಧ ಅಂಗಳದಲ್ಲಿ ಹೆಜ್ಜೆ ಹಾಕಿದ ಗೋಮಾತೆ
ಇಂದು ವಿಧಾನಸೌಧದ ಮುಂದೆ ಗೋವುಗಳನ್ನು ಕರೆತಂದ ಕ್ಷಣ
Skanda
| Edited By: |

Updated on:Dec 10, 2020 | 12:36 PM

Share

ಬೆಂಗಳೂರು: ವಿಧಾನಸೌಧದ ಮುಂದೆ ಗೋಪೂಜೆ ನಡೆಸುವ ಮೂಲಕ ಗೋಹತ್ಯಾ ನಿಷೇಧ ಕಾಯ್ದೆ ವಿಧೇಯಕ ಮಂಡನೆಗೆ ಮುನ್ನುಡಿ ಹಾಡಲಾಯಿತು. ವಿಧಾನಸೌಧದ ಅಂಗಳಕ್ಕೆ ಎಳೆಯ ಕರು ಮತ್ತು ಗೋವುಗಳನ್ನು ಕರೆತಂದು ಸಚಿವರಾದ ಪ್ರಭು ಚೌಹಾಣ್ ಮತ್ತು ಕೆ.ಎಸ್.ಈಶ್ವರಪ್ಪ ಗೋಪೂಜೆ ಮಾಡಿದರು.

ಬಹುನಿರೀಕ್ಷಿತ ಗೋ ಹತ್ಯೆ ನಿಷೇಧ ಕಾಯ್ದೆಯ ವಿಧೇಯಕ ಇಂದು ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಗೋಹತ್ಯಾ ನಿಷೇಧ ಕಾಯ್ದೆಯ ಕುರಿತು ಕಾಂಗ್ರೆಸ್ ಪಕ್ಷದ ಮುಖಂಡರು ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದರು.

ಯಾರೇ ವಿರೋಧಿಸಿದರೂ ಗೋಹತ್ಯೆ ನಿಷೇಧ ಮಾಡಿಯೇ ಮಾಡುತ್ತೇವೆ ಎಂದಿದ್ದ ಆಡಳಿತ ಪಕ್ಷ ಇಂದು ಮೊದಲ ಹೆಜ್ಜೆಯನ್ನು ಯಶಸ್ವಿಯಾಗಿ ಇಟ್ಟಿದೆ. ವಿಧೇಯಕ ಅಂಗೀಕಾರಕ್ಕೆ ಮುನ್ನ ವಿಧಾನಸೌಧದ ಪೂರ್ವ ದ್ವಾರದ ಮುಂದೆ ಗೋವುಗಳನ್ನು ಕರೆತಂದು ಪೂಜೆ ಮಾಡಿದ್ದು ವಿಶೇಷವಾಗಿತ್ತು.

ಹಿಂದೂ ಸಂಪ್ರದಾಯದಲ್ಲಿ ಗೋವುಗಳಿಗೆ ಪೂಜನೀಯ ಸ್ಥಾನವಿದೆ. ಆದ್ದರಿಂದ ಅದಕ್ಕೆ ಬೆಲೆ ನೀಡಲೇಬೇಕು. ಎಷ್ಟೇ ವಿರೋಧವಿದ್ದರೂ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಆಡಳಿತ ಪಕ್ಷದ ನಾಯಕರು ಪದೇ ಪದೇ ಹೇಳಿಕೆ ನೀಡುತ್ತಿದ್ದಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ಗೋ ಹತ್ಯೆ ನಿಷೇಧ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ; ಪ್ರತಿಭಟನೆ ಬಿಡದ ಕಾಂಗ್ರೆಸ್​

Published On - 8:03 pm, Wed, 9 December 20

ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್