AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಮಂತ್ರಿ ಆಗಿರುವಾಗ ನನ್ನ ಮಗ ಎಂಎಲ್​ಸಿ, ಎಂಎಲ್ಎ ಆಗಬಾರದು; ಇದು ನನ್ನ ವೈಯಕ್ತಿಕ ನಿರ್ಧಾರವೆಂದ ಸಚಿವ ಈಶ್ವರಪ್ಪ

ನಾನು ಮಂತ್ರಿಯಾಗಿರುವ ಸಮಯದಲ್ಲಿ ನನ್ನ ಮಗ ಎಂಎಲ್​ಸಿ, ಎಂಎಲ್ಎ ಆಗಬಾರದು ಎನ್ನುವುದು ನನ್ನ ವೈಯಕ್ತಿಕ ನಿರ್ಧಾರ. ಈಗಾಗಲೇ ಮಗನಿಗೆ ಟಿಕೆಟ್ ಬೇಡ ಅಂತಾ ಕೋರ್ ಕಮೀಟಿಗೆ ತಿಳಿಸಿರುವೆ.

ನಾನು ಮಂತ್ರಿ ಆಗಿರುವಾಗ ನನ್ನ ಮಗ ಎಂಎಲ್​ಸಿ, ಎಂಎಲ್ಎ ಆಗಬಾರದು; ಇದು ನನ್ನ ವೈಯಕ್ತಿಕ ನಿರ್ಧಾರವೆಂದ ಸಚಿವ ಈಶ್ವರಪ್ಪ
ಸಚಿವ ಕೆ.ಎಸ್.ಈಶ್ವರಪ್ಪ (ಸಂಗ್ರಹ ಚಿತ್ರ)
TV9 Web
| Edited By: sandhya thejappa|

Updated on: Nov 13, 2021 | 1:09 PM

Share

ಶಿವಮೊಗ್ಗ: ಡಿಸೆಂಬರ್ 10ರಂದು ವಿಧಾನ ಪರಿಷತ್ನ 25 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆ ಪ್ರತಿಕ್ರಿಯೆ ನೀಡಿದ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ (KS Eshwarappa) ಈಗಾಗಲೇ ಬಿಜೆಪಿ ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ. ಕೋರ್ ಕಮಿಟಿ ಸಭೆಯಲ್ಲೇ ಅಂತಿಮವಾಗಿದೆ. ಕೇಂದ್ರ ನಾಯಕರಿಗೆ ಪಟ್ಟಿಯನ್ನು ರವಾನೆ ಮಾಡಲಾಗಿದೆ. ಇನ್ನೆರಡು ದಿನದಲ್ಲಿ ಕೇಂದ್ರ ನಾಯಕರಿಂದ ಪಟ್ಟಿ ಬಿಡುಗಡೆಯಾಗಲಿದೆ. ನನ್ನ ಪುತ್ರ ಕೆಇ ಕಾಂತೇಶ್ ಸ್ಪರ್ಧೆ ಬೇಡವೆಂದು ಹೇಳಿದ್ದೇನೆ. ಅದನ್ನು ಅವರು ಒಪ್ಪುತ್ತಾರೆಂಬ ವಿಶ್ವಾಸ ನನಗಿದೆ ಅಂತ ಹೇಳಿಕೆ ನೀಡಿದ್ದಾರೆ.

ನಾನು ಮಂತ್ರಿಯಾಗಿರುವ ಸಮಯದಲ್ಲಿ ನನ್ನ ಮಗ ಎಂಎಲ್​ಸಿ, ಎಂಎಲ್ಎ ಆಗಬಾರದು ಎನ್ನುವುದು ನನ್ನ ವೈಯಕ್ತಿಕ ನಿರ್ಧಾರ. ಈಗಾಗಲೇ ಮಗನಿಗೆ ಟಿಕೆಟ್ ಬೇಡ ಅಂತಾ ಕೋರ್ ಕಮೀಟಿಗೆ ತಿಳಿಸಿರುವೆ. ಅದನ್ನು ಅವರು ಒಪ್ಪುತ್ತಾರೆ ಎನ್ನುವ ವಿಶ್ವಾಸ ಇದೆ. ಪಕ್ಷದ ತೀರ್ಮಾನಕ್ಕೆ ನಾವು ಎಲ್ಲರೂ ಬದ್ಧವಾಗಿ ಇರುತ್ತವೆ. ಎಂಎಲ್​ಸಿ ಚುನಾವಣೆಯಲ್ಲಿ ಅತೀ ಹೆಚ್ಚು ಸ್ಥಾನ ಬಿಜೆಪಿ ಗೆಲುವು ಸಾಧಿಸಲಿದೆ ಅಂತ ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಮುಂದುವರಿದು ಮಾತನಾಡಿದ ಈಶ್ವರಪ್ಪ, ಕಾಂಗ್ರೆಸ್ ನಾಯಕರಿಗೆ ಮಾಡುವುದಕ್ಕೆ ಉದ್ಯೋಗವಿಲ್ಲ. ಹೀಗಾಗಿ ಬಿಟ್ ಕಾಯಿನ್ ವಿಚಾರ ಎತ್ತಿಕೊಂಡಿದ್ದಾರೆ. ಬಿಟ್ ಕಾಯಿನ್ ದಂಧೆಯಲ್ಲಿ ಬಿಜೆಪಿ ನಾಯಕರು ಇಲ್ಲ. ಬಿಜೆಪಿ ನಾಯಕರಿರುವ ಬಗ್ಗೆ ದಾಖಲೆ ಬಿಡುಗಡೆ ಮಾಡಲಿ. ದಾಖಲೆ ಕೊಟ್ಟರೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇವೆ. ಕಾಂಗ್ರೆಸ್​ನವರು ಖಾಲಿ ಡಬ್ಬ ಹೊಡೆಯುತ್ತಿದ್ದಾರೆ ಅಂತ ಕಿಡಿಕಾರಿದರು.

ಇದನ್ನೂ ಓದಿ

Borewell: ಬೋರ್​ವೆಲ್ ಕೊರೆಯಿಸೇ ಇಲ್ಲ, ಜೆಸಿಬಿಯಲ್ಲಿ ಗುಂಡಿ ತೋಡಿ ಬಿಲ್ ಮಂಜೂರು ಆರೋಪ!

ಚಿತ್ರದುರ್ಗ ಹೊಳಲ್ಕೆರೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ!

Follow Us
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು