ನವದೆಹಲಿ, ಫೆಬ್ರವರಿ 18: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಿದ ಬಳಿಕ ಕಾಂಗ್ರೆಸ್ನವರು ಏನೇನೋ ಹೇಳುತ್ತಿದ್ದಾರೆ. ಅಲ್ಪಸಂಖ್ಯಾತರು, ಹಿಂದುಳಿದವರು, ದಲಿತರ ಹೆಸರು ಹೇಳಿ ಅಧಿಕಾರಕ್ಕೆ ಬಂದಿದ್ದಾರೆ. ಆದರೆ ಇವರಿಗೆ ಕಾಂಗ್ರೆಸ್ ಸರ್ಕಾರದಿಂದ ನ್ಯಾಯ ಸಿಕ್ಕಿಲ್ಲ ಎಂದು ಮಾಜಿ ಸಚಿವ ಈಶ್ವರಪ್ಪ (KS Eshwarappa) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಸುಪ್ರೀಂ’ ಸೂಚಿಸಿದ ಸ್ಥಳದಲ್ಲಿ ರಾಮಮಂದಿರ ಕಟ್ಟಿಲ್ಲವೆಂಬ ಸಂತೋಷ್ ಲಾಡ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. 140 ಕೋಟಿ ಜನರನ್ನು ಒಗ್ಗೂಡಿಸುವ ಮಂದಿರ ಅದು. ಇದೊಂದು ರಾಷ್ಟ್ರೀಯ ಮಂದಿರ ಎಂದು ಹೇಳಿದ್ದಾರೆ.
ಮೋದಿ ಪ್ರಧಾನಿಯಾದ ಬಳಿಕ ಅಲ್ಪಸಂಖ್ಯಾತರು, ಹಿಂದುಳಿದವರು, ದಲಿತ ಮೂರು ವರ್ಗಕ್ಕೆ ನ್ಯಾಯ ಸಿಗುತ್ತಿದೆ. ಮುಂದಿನ ದಿನಗಳಲ್ಲಿ ಅಲ್ಪಸಂಖ್ಯಾತರು ಕೂಡ ಬಿಜೆಪಿಗೆ ಓಟು ಹಾಕುತ್ತಾರೆ ಎಂದಿದ್ದಾರೆ.
ಇದನ್ನೂ ಓದಿ: ರಾಮ ಮಂದಿರ ನಿರ್ಮಾಣದಿಂದ ಬಡತನ ನಿರ್ಮೂಲನೆ ಆಗಲ್ಲ: ಸಂತೋಷ್ ಲಾಡ್
ಇದೊಂದು ಐತಿಹಾಸಿಕ ಬಿಜೆಪಿ ಅಧಿವೇಶನ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಧಾನಿ ಮೋದಿಯವರ ಭಾಷಣ ಕಾರ್ಯಕರ್ತರಿಗೆ ಪ್ರೇರಣೆ ಕೊಟ್ಟಿದೆ. 10 ವರ್ಷದಲ್ಲಿ ಸಂಘಟನೆ ಅಭಿವೃದ್ಧಿ, ಬಿಜೆಪಿ ಗೆಲುವು, ಕೇಂದ್ರ ಸರ್ಕಾರದ ಕೆಲಸಗಳು ಅವರ ಭಾಷಣಗಳಲ್ಲಿ ಇತ್ತು. ಈ ಬಾರಿ ಕರ್ನಾಟಕ 28ಕ್ಕೆ 28 ಸ್ಥಾನ ಗೆಲ್ಲಲು ನಮಗೆ ಸ್ಪೂತಿ ಕೊಟ್ಟಿದೆ ಎಂದು ಹೇಳಿದ್ದಾರೆ.
ಸಂತೋಷ್ ಲಾಡ್ ಹೇಳಿಕೆಗೆ ವಿಪಕ್ಷ ನಾಯಕ ಆರ್. ಅಶೋಕ್ ಪ್ರತಿಕ್ರಿಯಿಸಿದ್ದು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಸೋಲಿನ ಭೀತಿ ಎದುರಾಗಿದೆ. ಇಂಡಿಯಾ ಮೈತ್ರಿಕೂಟದಲ್ಲಿ ಈಗ ‘ಐ’ ಒಂದೇ ಉಳಿದಿದೆ.
ಇದನ್ನೂ ಓದಿ: ಉತ್ತರ ಕರ್ನಾಟಕ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಅವಕಾಶವಿತ್ತು, ಆದರೆ ಹಾಲಿ ಸರ್ಕಾರದ ಆ ನೀತಿ ಹೊಡೆತ ಕೊಟ್ಟಿದೆ!
ಇಂದಿರಾ ಗಾಂಧಿ ಕಾಂಗ್ರೆಸ್ ಮಾತ್ರ ಈಗ ಉಳಿದಿದೆ. ಕಾಂಗ್ರೆಸ್ ಪಕ್ಷದವರು ಜೋಡೋ ಅಂತಾ ಅಭಿಯಾನ ಆರಂಭಿಸಿದ್ದರು. ಆದರೆ ಈಗ ಕಾಂಗ್ರೆಸ್ ಛೋಡೋ ಅಂತಾ ಎಲ್ಲರೂ ಓಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿದ್ದು, ಶಿಲಾನ್ಯಾಸದ ಸಂದರ್ಭದಲ್ಲಿ ಕಪ್ಪುಪಟ್ಟಿ ಧರಿಸಿ ಸಂಸತ್ಗೆ ಬಂದಿದ್ದರು. ಶ್ರೀರಾಮ ಅನ್ನೋದೆ ಕಾಲ್ಪನಿಕ ಎಂದು ಸುಪ್ರೀಂಕೋರ್ಟ್ಗೆ ಹೇಳಿದ್ದರು. ಒಮ್ಮೆ ಅಯೋಧ್ಯೆ ರಾಮಮಂದಿರಕ್ಕೆ ಹೋಗಿ ದರ್ಶನ ಪಡೆದುಕೊಳ್ಳಲಿ ಆಗಲಾದರೂ ಕಾಂಗ್ರೆಸ್ನವರಿಗೆ ಒಳ್ಳೆ ಬುದ್ಧಿ ಬರುತ್ತೆ ಎಂದು ಕಿಡಿಕಾರಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:22 pm, Sun, 18 February 24