AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜೆಪಿ ಕಟ್ಟುವಾಗಲೂ ಯಡಿಯೂರಪ್ಪನವರಿಗೆ ಬೇಡವೆಂದೇ ಹೇಳಿದ್ದೆ.. ಎಂಬುದನ್ನು ಸ್ಮರಿಸಿದ ಕೆ.ಎಸ್.ಈಶ್ವರಪ್ಪ

ಕೆಲವು ವಿಚಾರದಲ್ಲಿ ಮುಖ್ಯಮಂತ್ರಿಗಳು ನನಗೆ ದೂರ ಎನ್ನುವುದನ್ನು ಒಪ್ಪುತ್ತೇನೆ. ಅವರು ಬೇರೆ ಪಕ್ಷಕ್ಕೆ ಹೋಗಿ ಮತ್ತೆ ಬಿಜೆಪಿಗೆ ಬಂದರು. ಆದರೂ ಪಕ್ಷ, ರಾಜ್ಯದ ವಿಚಾರವಾಗಿ ಹೊಂದಿಕೊಂಡು ಹೋಗ್ತಿದ್ದೇವೆ. ಅನುದಾನದ ವಿಚಾರಕ್ಕೆ ಬಂದಾಗ ನನ್ನ ಇಲಾಖೆಯ ಅನುದಾನ ಹಂಚಿಕೆ ನನ್ನ ಅಧಿಕಾರ. ನಾನು ಇಲಾಖೆಯ ಪೋಸ್ಟ್‌ಮ್ಯಾನ್ ಅಲ್ಲ.

ಕೆಜೆಪಿ ಕಟ್ಟುವಾಗಲೂ ಯಡಿಯೂರಪ್ಪನವರಿಗೆ ಬೇಡವೆಂದೇ ಹೇಳಿದ್ದೆ.. ಎಂಬುದನ್ನು ಸ್ಮರಿಸಿದ ಕೆ.ಎಸ್.ಈಶ್ವರಪ್ಪ
ಕೆ.ಎಸ್.ಈಶ್ವರಪ್ಪ ಮತ್ತು ಬಿ ಎಸ್ ಯಡಿಯೂರಪ್ಪ
Follow us
Skanda
| Updated By: ಸಾಧು ಶ್ರೀನಾಥ್​

Updated on:Apr 02, 2021 | 2:13 PM

ಕೆಜೆಪಿ ಕಟ್ಟುವಾಗಲೂ ನಾನು ಯಡಿಯೂರಪ್ಪನವರಿಗೆ ಬೇಡವೆಂದೇ ಹೇಳಿದ್ದೆ. ಆಗಲೂ ನಾವು ಒಂದೇ ತಟ್ಟೆಯಲ್ಲಿ ಊಟ ಮಾಡುತ್ತಿದ್ದೆವು. ಇಂದಿಗೂ ಅವರೊಂದಿಗೆ ನನಗೆ ಯಾವುದೇ ವೈಯಕ್ತಿಕ ಮನಸ್ತಾಪವಾಗಲೀ ದ್ವೇಷವಾಗಲೀ ಇಲ್ಲ. ಆದರೆ, ನನಗೆ ಗೊತ್ತಿಲ್ಲದೆ ಅವರು ಮಂತ್ರಿಗಳಿಗೆ, ಶಾಸಕರಿಗೆ ಹಣ ಬಿಡುಗಡೆ ಮಾಡುತ್ತಿದ್ದಾರೆ. ನನ್ನ ಗಮನಕ್ಕೆ ಬಾರದಂತೆ ಬೆಂಗಳೂರು ನಗರ ಜಿಲ್ಲೆಗೆ ₹63 ಕೋಟಿ ಬಿಡುಗಡೆ ಮಾಡಿದ್ದಾರೆ. ಹೀಗಾಗಿ ಆ ಅನುದಾನವನ್ನು ರದ್ದು ಮಾಡಲಾಗಿದೆ. ಇಷ್ಟಕ್ಕೂ ಮುಖ್ಯಮಂತ್ರಿಗಳು ಹಣ ಬಿಡುಗಡೆ ಮಾಡುವುದಕ್ಕೆ ನನ್ನ ತಕರಾರಿಲ್ಲ. ಆದರೆ, ಅದು ನಿಯಮಾನುಸಾರ ಆಗಬೇಕಷ್ಟೇ ಎಂದು ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೆ.ಎಸ್​.ಈಶ್ವರಪ್ಪ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಕೆಲವು ವಿಚಾರದಲ್ಲಿ ಮುಖ್ಯಮಂತ್ರಿಗಳು ನನಗೆ ದೂರ ಎನ್ನುವುದನ್ನು ಒಪ್ಪುತ್ತೇನೆ. ಅವರು ಬೇರೆ ಪಕ್ಷಕ್ಕೆ ಹೋಗಿ ಮತ್ತೆ ಬಿಜೆಪಿಗೆ ಬಂದರು. ಆದರೂ ಪಕ್ಷ, ರಾಜ್ಯದ ವಿಚಾರವಾಗಿ ಹೊಂದಿಕೊಂಡು ಹೋಗ್ತಿದ್ದೇವೆ. ಅನುದಾನದ ವಿಚಾರಕ್ಕೆ ಬಂದಾಗ ನನ್ನ ಇಲಾಖೆಯ ಅನುದಾನ ಹಂಚಿಕೆ ನನ್ನ ಅಧಿಕಾರ. ನಾನು ಇಲಾಖೆಯ ಪೋಸ್ಟ್‌ಮ್ಯಾನ್ ಅಲ್ಲ. ನೇರವಾಗಿ ಹಣ ಬಿಡುಗಡೆ ಮಾಡಿದ ನಂತರ ಸಚಿವರ ಗಮನಕ್ಕೆ ತನ್ನಿ ಎನ್ನುವುದು ಸರಿಯಲ್ಲ. ನಾನು ಈ ವಿಚಾರಗಳ ಬಗ್ಗೆ ಮಾತನಾಡಿದ್ದೇನೆ ಅಷ್ಟೇ ಎಂದು ಹೇಳಿದ್ದಾರೆ.

ನಾನು ಯಾರಿಗೂ ಬಗ್ಗುವ ಪ್ರಶ್ನೆಯೇ ಇಲ್ಲ! ನಾಲ್ವರು ಸಚಿವರು, ನಾಲ್ವರು ಶಾಸಕರು ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ರಾಜೀನಾಮೆ ಕೇಳಿದ್ದಾರೆ, ಖಾತೆ ಬದಲಾವಣೆ ಬಗ್ಗೆ ಚರ್ಚೆಯಾಗಿದೆ. ಇಂತಹ ಯಾವುದಕ್ಕೂ ನಾನು ಬಗ್ಗುವ ಪ್ರಶ್ನೆಯೇ ಇಲ್ಲ. ನನ್ನ ನಿರ್ಧಾರ ನ್ಯಾಯಬದ್ಧವಾಗಿದೆ. ರಾಜ್ಯದ ಹಲವು ಶಾಸಕರು, ಸಚಿವರು, ಸಂಸದರು, ಬಿಜೆಪಿ ಪದಾಧಿಕಾರಿಗಳು ನನ್ನ ಪರವಾಗಿ ಮಾತಾಡಿದ್ದಾರೆ. ಸಹಿ ಸಂಗ್ರಹಿಸುವ ಬಗ್ಗೆಯೂ ಅವರು ಕೇಳಿದ್ದಾರೆ. ಆದರೆ, ಸಹಿ ಸಂಗ್ರಹ ಮಾಡುವುದು ಬೇಡ ಎಂದು ಹೇಳಿದ್ದೆ. ಶಾಸಕರು ಸಹಿ ಸಂಗ್ರಹ ಮಾಡುವುದು ಸಹ ತಪ್ಪು. ಇದು ನನ್ನ, ಯಡಿಯೂರಪ್ಪ ನಡುವಿನ ವೈಯಕ್ತಿಕ ವಿಚಾರವಲ್ಲ, ನೀತಿ, ನಿಯಮ ಜಾರಿ ಮಾಡಬೇಕೆಂಬ ನನ್ನ ಪ್ರಯತ್ನವಷ್ಟೇ ಎಂದು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ನಾನು ರೆಬೆಲ್​ ಅಲ್ಲ, ಲಾಯಲ್.. ನನ್ನ ಅಪ್ಪ-ಅಮ್ಮ ಅಡಿಕೆ ಮಂಡಿಯಲ್ಲಿ ಕೆಲಸ ಮಾಡ್ತಿದ್ರು, ನನ್ನನ್ನು ಈ ಪಕ್ಷ ಡಿಸಿಎಂ ಮಾಡಿದೆ: ಕೆ.ಎಸ್​. ಈಶ್ವರಪ್ಪ

Published On - 1:24 pm, Fri, 2 April 21

ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​