AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜೆಪಿ ಕಟ್ಟುವಾಗಲೂ ಯಡಿಯೂರಪ್ಪನವರಿಗೆ ಬೇಡವೆಂದೇ ಹೇಳಿದ್ದೆ.. ಎಂಬುದನ್ನು ಸ್ಮರಿಸಿದ ಕೆ.ಎಸ್.ಈಶ್ವರಪ್ಪ

ಕೆಲವು ವಿಚಾರದಲ್ಲಿ ಮುಖ್ಯಮಂತ್ರಿಗಳು ನನಗೆ ದೂರ ಎನ್ನುವುದನ್ನು ಒಪ್ಪುತ್ತೇನೆ. ಅವರು ಬೇರೆ ಪಕ್ಷಕ್ಕೆ ಹೋಗಿ ಮತ್ತೆ ಬಿಜೆಪಿಗೆ ಬಂದರು. ಆದರೂ ಪಕ್ಷ, ರಾಜ್ಯದ ವಿಚಾರವಾಗಿ ಹೊಂದಿಕೊಂಡು ಹೋಗ್ತಿದ್ದೇವೆ. ಅನುದಾನದ ವಿಚಾರಕ್ಕೆ ಬಂದಾಗ ನನ್ನ ಇಲಾಖೆಯ ಅನುದಾನ ಹಂಚಿಕೆ ನನ್ನ ಅಧಿಕಾರ. ನಾನು ಇಲಾಖೆಯ ಪೋಸ್ಟ್‌ಮ್ಯಾನ್ ಅಲ್ಲ.

ಕೆಜೆಪಿ ಕಟ್ಟುವಾಗಲೂ ಯಡಿಯೂರಪ್ಪನವರಿಗೆ ಬೇಡವೆಂದೇ ಹೇಳಿದ್ದೆ.. ಎಂಬುದನ್ನು ಸ್ಮರಿಸಿದ ಕೆ.ಎಸ್.ಈಶ್ವರಪ್ಪ
ಕೆ.ಎಸ್.ಈಶ್ವರಪ್ಪ ಮತ್ತು ಬಿ ಎಸ್ ಯಡಿಯೂರಪ್ಪ
Skanda
| Edited By: |

Updated on:Apr 02, 2021 | 2:13 PM

Share

ಕೆಜೆಪಿ ಕಟ್ಟುವಾಗಲೂ ನಾನು ಯಡಿಯೂರಪ್ಪನವರಿಗೆ ಬೇಡವೆಂದೇ ಹೇಳಿದ್ದೆ. ಆಗಲೂ ನಾವು ಒಂದೇ ತಟ್ಟೆಯಲ್ಲಿ ಊಟ ಮಾಡುತ್ತಿದ್ದೆವು. ಇಂದಿಗೂ ಅವರೊಂದಿಗೆ ನನಗೆ ಯಾವುದೇ ವೈಯಕ್ತಿಕ ಮನಸ್ತಾಪವಾಗಲೀ ದ್ವೇಷವಾಗಲೀ ಇಲ್ಲ. ಆದರೆ, ನನಗೆ ಗೊತ್ತಿಲ್ಲದೆ ಅವರು ಮಂತ್ರಿಗಳಿಗೆ, ಶಾಸಕರಿಗೆ ಹಣ ಬಿಡುಗಡೆ ಮಾಡುತ್ತಿದ್ದಾರೆ. ನನ್ನ ಗಮನಕ್ಕೆ ಬಾರದಂತೆ ಬೆಂಗಳೂರು ನಗರ ಜಿಲ್ಲೆಗೆ ₹63 ಕೋಟಿ ಬಿಡುಗಡೆ ಮಾಡಿದ್ದಾರೆ. ಹೀಗಾಗಿ ಆ ಅನುದಾನವನ್ನು ರದ್ದು ಮಾಡಲಾಗಿದೆ. ಇಷ್ಟಕ್ಕೂ ಮುಖ್ಯಮಂತ್ರಿಗಳು ಹಣ ಬಿಡುಗಡೆ ಮಾಡುವುದಕ್ಕೆ ನನ್ನ ತಕರಾರಿಲ್ಲ. ಆದರೆ, ಅದು ನಿಯಮಾನುಸಾರ ಆಗಬೇಕಷ್ಟೇ ಎಂದು ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೆ.ಎಸ್​.ಈಶ್ವರಪ್ಪ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಕೆಲವು ವಿಚಾರದಲ್ಲಿ ಮುಖ್ಯಮಂತ್ರಿಗಳು ನನಗೆ ದೂರ ಎನ್ನುವುದನ್ನು ಒಪ್ಪುತ್ತೇನೆ. ಅವರು ಬೇರೆ ಪಕ್ಷಕ್ಕೆ ಹೋಗಿ ಮತ್ತೆ ಬಿಜೆಪಿಗೆ ಬಂದರು. ಆದರೂ ಪಕ್ಷ, ರಾಜ್ಯದ ವಿಚಾರವಾಗಿ ಹೊಂದಿಕೊಂಡು ಹೋಗ್ತಿದ್ದೇವೆ. ಅನುದಾನದ ವಿಚಾರಕ್ಕೆ ಬಂದಾಗ ನನ್ನ ಇಲಾಖೆಯ ಅನುದಾನ ಹಂಚಿಕೆ ನನ್ನ ಅಧಿಕಾರ. ನಾನು ಇಲಾಖೆಯ ಪೋಸ್ಟ್‌ಮ್ಯಾನ್ ಅಲ್ಲ. ನೇರವಾಗಿ ಹಣ ಬಿಡುಗಡೆ ಮಾಡಿದ ನಂತರ ಸಚಿವರ ಗಮನಕ್ಕೆ ತನ್ನಿ ಎನ್ನುವುದು ಸರಿಯಲ್ಲ. ನಾನು ಈ ವಿಚಾರಗಳ ಬಗ್ಗೆ ಮಾತನಾಡಿದ್ದೇನೆ ಅಷ್ಟೇ ಎಂದು ಹೇಳಿದ್ದಾರೆ.

ನಾನು ಯಾರಿಗೂ ಬಗ್ಗುವ ಪ್ರಶ್ನೆಯೇ ಇಲ್ಲ! ನಾಲ್ವರು ಸಚಿವರು, ನಾಲ್ವರು ಶಾಸಕರು ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ರಾಜೀನಾಮೆ ಕೇಳಿದ್ದಾರೆ, ಖಾತೆ ಬದಲಾವಣೆ ಬಗ್ಗೆ ಚರ್ಚೆಯಾಗಿದೆ. ಇಂತಹ ಯಾವುದಕ್ಕೂ ನಾನು ಬಗ್ಗುವ ಪ್ರಶ್ನೆಯೇ ಇಲ್ಲ. ನನ್ನ ನಿರ್ಧಾರ ನ್ಯಾಯಬದ್ಧವಾಗಿದೆ. ರಾಜ್ಯದ ಹಲವು ಶಾಸಕರು, ಸಚಿವರು, ಸಂಸದರು, ಬಿಜೆಪಿ ಪದಾಧಿಕಾರಿಗಳು ನನ್ನ ಪರವಾಗಿ ಮಾತಾಡಿದ್ದಾರೆ. ಸಹಿ ಸಂಗ್ರಹಿಸುವ ಬಗ್ಗೆಯೂ ಅವರು ಕೇಳಿದ್ದಾರೆ. ಆದರೆ, ಸಹಿ ಸಂಗ್ರಹ ಮಾಡುವುದು ಬೇಡ ಎಂದು ಹೇಳಿದ್ದೆ. ಶಾಸಕರು ಸಹಿ ಸಂಗ್ರಹ ಮಾಡುವುದು ಸಹ ತಪ್ಪು. ಇದು ನನ್ನ, ಯಡಿಯೂರಪ್ಪ ನಡುವಿನ ವೈಯಕ್ತಿಕ ವಿಚಾರವಲ್ಲ, ನೀತಿ, ನಿಯಮ ಜಾರಿ ಮಾಡಬೇಕೆಂಬ ನನ್ನ ಪ್ರಯತ್ನವಷ್ಟೇ ಎಂದು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ನಾನು ರೆಬೆಲ್​ ಅಲ್ಲ, ಲಾಯಲ್.. ನನ್ನ ಅಪ್ಪ-ಅಮ್ಮ ಅಡಿಕೆ ಮಂಡಿಯಲ್ಲಿ ಕೆಲಸ ಮಾಡ್ತಿದ್ರು, ನನ್ನನ್ನು ಈ ಪಕ್ಷ ಡಿಸಿಎಂ ಮಾಡಿದೆ: ಕೆ.ಎಸ್​. ಈಶ್ವರಪ್ಪ

Published On - 1:24 pm, Fri, 2 April 21

ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ