AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ಸೀಜ್ ಆದ್ರೆ 14 ದಿನ ಸಿಗಲ್ಲ: ಸಚಿವ ಕೆ.ಎಸ್​ ಈಶ್ವರಪ್ಪ

ನಾಳೆಯಿಂದ 14 ದಿನಗಳವರೆಗೆ ಲಾಕ್​ಡೌನ್​ ಜಾರಿಯಲ್ಲಿರಲಿದ್ದು ಸರ್ಕಾರದ ಈ ಆದೇಶವನ್ನು ಎಲ್ಲರೂ ಪಾಲಿಸಬೇಕು. ಲಾಕ್​ಡೌನ್​ ವೇಳೆ ಕಾರು, ಆಟೋ, ಬೈಕ್​ಗಳನ್ನು ಓಡಿಸಿದರೆ ಜಪ್ತಿ ಮಾಡಲಾಗುವುದು ಎಂದು ಸಚಿವ ಕೆ.ಎಸ್​ ಈಶ್ವರಪ್ಪ ಹೇಳಿದ್ದಾರೆ.

ವಾಹನ ಸೀಜ್ ಆದ್ರೆ 14 ದಿನ ಸಿಗಲ್ಲ: ಸಚಿವ ಕೆ.ಎಸ್​ ಈಶ್ವರಪ್ಪ
ಸಚಿವ ಕೆ.ಎಸ್ ಈಶ್ವರಪ್ಪ
shruti hegde
|

Updated on: May 09, 2021 | 3:16 PM

Share

ಶಿವಮೊಗ್ಗ: ನಾಳೆಯಿಂದ 14 ದಿನಗಳವರೆಗೆ ಲಾಕ್​ಡೌನ್​ ಜಾರಿಯಲ್ಲಿರಲಿದ್ದು ಸರ್ಕಾರದ ಈ ಆದೇಶವನ್ನು ಎಲ್ಲರೂ ಪಾಲಿಸಬೇಕು. ಲಾಕ್​ಡೌನ್​ ವೇಳೆ ಕಾರು, ಆಟೋ, ಬೈಕ್​ಗಳನ್ನು ಓಡಿಸಿದರೆ ಜಪ್ತಿ ಮಾಡಲಾಗುವುದು. ಜಪ್ತಿ ಮಾಡಿದ ವಾಹನಗಳು 14 ದಿನಗಳ ಕಾಲ ಸಿಗುವುದಿಲ್ಲ ಎಂದು ಜಿಲ್ಲೆಯಲ್ಲಿ ಉಸ್ತುವಾರಿ ಸಚಿವ ಕೆ.ಎಸ್​ ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ.

ನಾಳೆಯಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಬಿಗಿ ಲಾಕ್​ಡೌನ್ ಜಾರಿಯಲ್ಲಿರುತ್ತದೆ. ಬೈಕ್​, ಕಾರುಗಳನ್ನು ರಸ್ತೆಗಿಳಿಸಿದರೆ ಪೊಲೀಸರು ಜಪ್ತಿ ಮಾಡಲಿದ್ದಾರೆ. ಜಪ್ತಿಯಾದ ವಾಹನಗಳು 14 ದಿನಗಳ ಕಾಲ ಸಿಗುವುದಿಲ್ಲ. ಸರ್ಕಾರದ ಲಾಕ್​ಡೌನ್ ಆದೇಶವನ್ನು ಎಲ್ಲರೂ ಪಾಲಿಸಬೇಕು. ಅದಕ್ಕೆ ತಕ್ಕಂತೆ ಎಲ್ಲರೂ ಹೊಂದಿಕೊಳ್ಳುವಂತೆ ಸಚಿವ ಕೆ.ಎಸ್​ ಈಶ್ವರಪ್ಪ ಮನವಿ ಮಾಡಿದ್ದಾರೆ.

ಮೇ 10ರಿಂದ 24ರವರೆಗೆ ಇನ್ನಷ್ಟು ಬಿಗಿ ಕ್ರಮ ಕರ್ನಾಟದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರ ಹೆಚ್ಚಾಗಿರುವ ಕಾರಣ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಸಂಪೂರ್ಣ ಲಾಕ್​ಡೌನ್​ ಮೊರೆ ಹೋಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಮಾಡಿರುವ ರಾಜ್ಯ ಸರ್ಕಾರ ಮೇ 10ರಿಂದ ಮೇ 24ರ ತನಕ ಲಾಕ್​ಡೌನ್​ ಮಾಡಲಾಗುವುದು ಎಂದು ತಿಳಿಸಿದೆ. ರಾಜ್ಯದಲ್ಲಿ ಸಾವು-ನೋವುಗಳನ್ನು ತಡೆಗಟ್ಟಬೇಕೆಂದರೆ ಲಾಕ್​ಡೌನ್​ ಮಾಡಲೇಬೇಕೆಂದು ತಜ್ಞರು ಕೂಡಾ ಮೇಲಿಂದ ಮೇಲೆ ಎಚ್ಚರಿಕೆ ನೀಡಿದ್ದಾರೆ.

ಲಾಕ್​ಡೌನ್​ ವೇಳೆಯಲ್ಲಿ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದ್ದು, 10 ಗಂಟೆಯ ಬಳಿಕ ಯಾರೂ ಹೊರಗೆ ಓಡಾಡುವಂತಿಲ್ಲ ಎಂದು ಆದೇಶಿಸಲಾಗಿದೆ. ಅಗತ್ಯ ವಸ್ತುಗಳ ಸರಬರಾಜಿಗೆ ಗೂಡ್ಸ್ ವಾಹನಗಳ ಓಡಾಟ ಇರಲಿದ್ದು, ಆನ್‌ಲೈನ್ ಡೆಲಿವರಿ ಸರ್ವಿಸ್‌ಗೂ ಅವಕಾಶ ನೀಡಲಾಗಿದೆ. 14 ದಿನಗಳ ಕಾಲ ರಾಜ್ಯದಲ್ಲಿ ಲಾಕ್‌ಡೌನ್ ಮಾಡಿರುವುದರಿಂದ ಪ್ಯಾಕೇಜ್, ನೆರವು ನೀಡುವ ಬಗ್ಗೆ ಹಂತ ಹಂತವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂಬುದನ್ನೂ ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.

Karnataka Lockdown: ಕರ್ನಾಟಕ ಲಾಕ್​ಡೌನ್​; ಕೊರೊನಾ ತಡೆಗೆ ಮೇ 10ರಿಂದ 24ರವರೆಗೆ ಇನ್ನಷ್ಟು ಬಿಗಿ ಕ್ರಮ

Follow Us
shruti hegde
shruti hegde
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ