AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್​ ಗಾಂಧಿ ಕಾಲಿಟ್ಟ ಕಡೆಯೆಲ್ಲಾ ಕಾಂಗ್ರೆಸ್​ ಸೋತಿದೆ, ಬೆಳಗಾವಿಗೆ ಬಂದ್ರೆ ಸಿಂಹವೋ, ನರಿಯೋ, ಕುರಿಯೋ ಗೊತ್ತಾಗುತ್ತೆ: ಕೆಎಸ್​ ಈಶ್ವರಪ್ಪ

ರಾಹುಲ್ ಗಾಂಧಿ ಕಾಲಿಟ್ಟ ಕಡೆಯೆಲ್ಲಾ ಕಾಂಗ್ರೆಸ್ ಸೋತಿದೆ. ರಾಹುಲ್ ಬೆಳಗಾವಿಗೆ ಬಂದರೆ ಸಿಂಹವೋ, ನರಿಯೋ, ಕುರಿಯೋ ಆಮೇಲೆ ಗೊತ್ತಾಗುತ್ತೆ. ಬೇಕಿದ್ದರೆ ಬೆಳಗಾವಿ ಉಪಚುನಾವಣೆಗೆ ಕರೆಯಿಸಲಿ ಆಮೇಲೆ ನೋಡೋಣ ಎಂದು ಕೆ.ಎಸ್​.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.

ರಾಹುಲ್​ ಗಾಂಧಿ ಕಾಲಿಟ್ಟ ಕಡೆಯೆಲ್ಲಾ ಕಾಂಗ್ರೆಸ್​ ಸೋತಿದೆ, ಬೆಳಗಾವಿಗೆ ಬಂದ್ರೆ ಸಿಂಹವೋ, ನರಿಯೋ, ಕುರಿಯೋ ಗೊತ್ತಾಗುತ್ತೆ: ಕೆಎಸ್​ ಈಶ್ವರಪ್ಪ
ಕೆ.ಎಸ್​.ಈಶ್ವರಪ್ಪ ಮತ್ತು ರಾಹುಲ್​ ಗಾಂಧಿ
Skanda
| Edited By: |

Updated on:Apr 12, 2021 | 11:08 AM

Share

ಬೆಳಗಾವಿ: ಕರ್ನಾಟಕದಲ್ಲಿ ಉಪಚುನಾವಣೆ ಕಾವು ಜೋರಾಗಿದ್ದು ರಾಜಕೀಯ ಪಕ್ಷಗಳ ನಡುವೆ ವಾಕ್ಸಮರ, ವ್ಯಂಗ್ಯ, ಆರೋಪ, ಪ್ರತ್ಯಾರೋಪಗಳು ಮುಗಿಲುಮುಟ್ಟಿದೆ. ಸದ್ಯ ಬೆಳಗಾವಿಯಲ್ಲಿ ಮಾತನಾಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ. ರಾಹುಲ್ ಗಾಂಧಿ ಕಾಲಿಟ್ಟ ಕಡೆಯೆಲ್ಲಾ ಕಾಂಗ್ರೆಸ್ ಸೋತಿದೆ ಎಂದಿರುವ ಅವರು ರಾಹುಲ್ ಬೆಳಗಾವಿಗೆ ಬಂದರೆ ಸಿಂಹವೋ, ನರಿಯೋ, ಕುರಿಯೋ ಆಮೇಲೆ ಗೊತ್ತಾಗುತ್ತೆ. ಬೇಕಿದ್ದರೆ ಬೆಳಗಾವಿ ಉಪಚುನಾವಣೆಗೆ ಕರೆಯಿಸಲಿ ಆಮೇಲೆ ನೋಡೋಣ ಎಂದು ವ್ಯಂಗ್ಯವಾಡಿದ್ದಾರೆ.

ಉಪಚುನಾವಣೆ ಫಲಿತಾಂಶ ಬಳಿಕ ಬಿಜೆಪಿ ಸರ್ಕಾರ ಕುಸಿಯುತ್ತದೆ ಎಂಬ ರಣದೀಪ್‌ಸಿಂಗ್ ಸುರ್ಜೇವಾಲ ಹೇಳಿಕೆಗೆ ಪ್ರತಿಕ್ರಿಯಿಸಿ ರಣದೀಪ್‌ಸಿಂಗ್ ಸುರ್ಜೇವಾಲಗೆ ಕರ್ನಾಟಕವೇ ಮರೆತು ಹೋಗಿದೆ. ಸುರ್ಜೇವಾಲರಂತ ಭಟ್ಟಂಗಿಗಳು ರಾಹುಲ್ ಗಾಂಧಿನ ಹೊಗಳಿ ಹಾಳು ಮಾಡಿದ್ರು ಎಂದು ತಿರುಗೇಟು ನೀಡಿದ್ದಾರೆ. ಅಲ್ಲದೇ, ರಾಜ್ಯ ಸರ್ಕಾರದಲ್ಲಿ ವಿಜಯೇಂದ್ರ ಟ್ಯಾಕ್ಸ್ ಇದೆ ಎಂಬ ಸುರ್ಜೇವಾಲ ಆರೋಪಕ್ಕೆ ಪ್ರತಿಕ್ರಿಯೆ ನೀಡಲು ನಿರಾಕರಿಸಿರುವ ಈಶ್ವರಪ್ಪ ಆ ಬಗ್ಗೆ ಏನೂ ಮಾತನಾಡಿಲ್ಲ.

ಡಿ.ಕೆ.ಶಿವಕುಮಾರ್​, ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಖಾಲಿ ಕೊಡ ಆಗಿದ್ದಾರೆ. ಖಾಲಿ ಕೊಡವನ್ನು ಮೊದಲು ಜನ ನಂಬಿದ್ರು, ಆದ್ರೆ ಅವರು ಜನರಿಗೆ ದ್ರೋಹ ಮಾಡಿದ್ರು. ಈಗ ಇದೇ ಕಾಂಗ್ರೆಸ್ ಪಕ್ಷ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡುತ್ತಿದೆ. ಮಂಗಳಾ ಅಂಗಡಿ ಸಂಸತ್‌ಗೆ ಹೋಗಿ ಏನು ಮಾಡ್ತಾರೆ‌ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಏಕೆ ಇಂದಿರಾ ಗಾಂಧಿ, ಸುಷ್ಮಾ ಸ್ವರಾಜ್ ಮಹಿಳೆ ಅಲ್ಲವೇನು? ಅವರು ಕೆಲಸ ಮಾಡಿ ತೋರಿಸಿಲ್ವಾ? ಹೀಗೆಲ್ಲಾ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ. ಹೀಗಾಗಿ ಮಹಿಳೆಯರನ್ನು ಅಪಮಾನ ಮಾಡಿದ ಕಾಂಗ್ರೆಸ್ ಪಕ್ಷವನ್ನು ಜನ ತಿರಸ್ಕಾರ ಮಾಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಈಶ್ವರಪ್ಪ ಮನೆಯಲ್ಲಿ 2 ನೋಟ್ ಎಣಿಸೋ ಮೆಷಿನ್ ಸಿಕ್ಕಿತ್ತು, ಅದ್ನ ಆತ ಒಪ್ಕೊಂಡಿದ್ದ: ಸಿದ್ದರಾಮಯ್ಯ 

ಮಸ್ಕಿ ವಿಧಾನಸಭಾ ಉಪಚುನಾವಣೆ; ಪ್ರಚಾರದ ವೇಳೆ ಹಣ ಹಂಚಿಕೆ ಆರೋಪ, ಬಿಜೆಪಿ-ಕಾಂಗ್ರೆಸ್ ನಡುವೆ ಮಾರಾಮಾರಿ

Published On - 10:47 am, Mon, 12 April 21

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ