AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀರಶೈವ ಲಿಂಗಾಯತ ಸಮುದಾಯವನ್ನು ಒಡೆದಿದ್ದು, ಹಿಂದೂ ಮುಸ್ಲಿಂ ಸಮುದಾಯವನ್ನು ದೂರ ಮಾಡಿದ್ದು ಸಿದ್ದರಾಮಯ್ಯ: ಈಶ್ವರಪ್ಪ

ವೀರಶೈವ ಲಿಂಗಾಯತ ಸಮುದಾಯವನ್ನು ಒಡೆದಿದ್ದು ಸಿದ್ದರಾಮಯ್ಯ, ಗೋಹತ್ಯೆ ಮಾಡುತ್ತಿರೋರಿಗೆ ಬೆಂಬಲ ಕೊಟ್ಟೋರು ಸಿದ್ದರಾಮಯ್ಯ, ಹಿಂದೂ ಮುಸ್ಲಿಂ ಸಮುದಾಯದವರನ್ನು ದೂರ ದೂರ ಮಾಡಿದ್ದು ಕೂಡ ಸಿದ್ದರಾಮಯ್ಯ ಎಂದು ಕೆ.ಎಸ್​.ಈಶ್ವರಪ್ಪ ಆರೋಪಿಸಿದ್ದಾರೆ

ವೀರಶೈವ ಲಿಂಗಾಯತ ಸಮುದಾಯವನ್ನು ಒಡೆದಿದ್ದು, ಹಿಂದೂ ಮುಸ್ಲಿಂ ಸಮುದಾಯವನ್ನು ದೂರ ಮಾಡಿದ್ದು ಸಿದ್ದರಾಮಯ್ಯ: ಈಶ್ವರಪ್ಪ
K.S.ಈಶ್ವರಪ್ಪ (ಎಡ); ಸಿದ್ದರಾಮಯ್ಯ (ಬಲ)
Skanda
| Edited By: |

Updated on: Apr 12, 2021 | 12:37 PM

Share

ಬೆಳಗಾವಿ: ರಾಜ್ಯದಲ್ಲಿ ಉಪಚುನಾವಣೆ ಸನ್ನಿಹಿತವಾಗಿದ್ದು ಎಲ್ಲಾ ಪಕ್ಷಗಳೂ ಭರ್ಜರಿ ಸಿದ್ಧತೆ ಮಾಡಿಕೊಂಡಿವೆ. ಜೊತೆಗೆ, ರಾಜಕೀಯ ನಾಯಕರ ನಡುವಿನ ಆರೋಪ ಪ್ರತ್ಯಾರೋಪಗಳ ಸರಣಿಯೂ ಜೋರಾಗಿ ಸಾಗುತ್ತಿದೆ. ಇದರ ಭಾಗವೆಂಬಂತೆ ಬೆಳಗಾವಿಯಲ್ಲಿ ಮಾತನಾಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​.ಈಶ್ವರಪ್ಪ ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ಗುಡುಗಿದ್ದಾರೆ. ಪ್ರಮುಖವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿ ಕಾಂಗ್ರೆಸ್ ನಾಯಕರು ಖಾಲಿ ಕೊಡ ಎಂದು ವ್ಯಂಗ್ಯ ಮಾಡಿದ್ದಾರೆ.

ವೀರಶೈವ ಲಿಂಗಾಯತ ಸಮುದಾಯವನ್ನು ಒಡೆದಿದ್ದು ಸಿದ್ದರಾಮಯ್ಯ, ಗೋಹತ್ಯೆ ಮಾಡುತ್ತಿರೋರಿಗೆ ಬೆಂಬಲ ಕೊಟ್ಟೋರು ಸಿದ್ದರಾಮಯ್ಯ, ಹಿಂದೂ ಮುಸ್ಲಿಂ ಸಮುದಾಯದವರನ್ನು ದೂರ ದೂರ ಮಾಡಿದ್ದು ಕೂಡ ಸಿದ್ದರಾಮಯ್ಯ ಎಂದು ಆರೋಪಿಸಿದ್ದಾರೆ, ಜೊತೆಗೆ ಗೋರಕ್ಷಣೆ ಮಾಡುತ್ತಾರೆಂಬ ಕಾರಣಕ್ಕೆ ಯುವಕರ ಕಗ್ಗೊಲೆಯನ್ನೂ ಮಾಡಲಾಯ್ತು ಎನ್ನುವ ಮೂಲಕ ಹಳೆಯ ಘಟನೆಗಳನ್ನು ಉಪಚುನಾವಣೆ ಹೊತ್ತಲ್ಲಿ ತಿರುವಿ ಹಾಕಿದ್ದಾರೆ.

ಡಿ.ಕೆ.ಶಿವಕುಮಾರ್​, ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಖಾಲಿ ಕೊಡ ಆಗಿದ್ದಾರೆ. ಖಾಲಿ ಕೊಡವನ್ನು ಮೊದಲು ಜನ ನಂಬಿದ್ರು, ಆದ್ರೆ ಅವರು ಜನರಿಗೆ ದ್ರೋಹ ಮಾಡಿದ್ರು. ಈಗ ಇದೇ ಕಾಂಗ್ರೆಸ್ ಪಕ್ಷ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡುತ್ತಿದೆ. ಮಂಗಳಾ ಅಂಗಡಿ ಸಂಸತ್‌ಗೆ ಹೋಗಿ ಏನು ಮಾಡ್ತಾರೆ‌ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಏಕೆ ಇಂದಿರಾ ಗಾಂಧಿ, ಸುಷ್ಮಾ ಸ್ವರಾಜ್ ಮಹಿಳೆ ಅಲ್ಲವೇನು? ಅವರು ಕೆಲಸ ಮಾಡಿ ತೋರಿಸಿಲ್ವಾ? ಹೀಗೆಲ್ಲಾ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ. ಹೀಗಾಗಿ ಮಹಿಳೆಯರನ್ನು ಅಪಮಾನ ಮಾಡಿದ ಕಾಂಗ್ರೆಸ್ ಪಕ್ಷವನ್ನು ಜನ ತಿರಸ್ಕಾರ ಮಾಡಬೇಕು ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಕಾಲಿಟ್ಟ ಕಡೆಯೆಲ್ಲಾ ಕಾಂಗ್ರೆಸ್ ಸೋತಿದೆ ಎಂದಿರುವ ಅವರು ರಾಹುಲ್ ಬೆಳಗಾವಿಗೆ ಬಂದರೆ ಸಿಂಹವೋ, ನರಿಯೋ, ಕುರಿಯೋ ಆಮೇಲೆ ಗೊತ್ತಾಗುತ್ತೆ ಎಂದು ವ್ಯಂಗ್ಯವಾಡಿದ್ದು, ಉಪಚುನಾವಣೆ ಫಲಿತಾಂಶ ಬಳಿಕ ಬಿಜೆಪಿ ಸರ್ಕಾರ ಕುಸಿಯುತ್ತದೆ ಎಂಬ ರಣದೀಪ್‌ಸಿಂಗ್ ಸುರ್ಜೇವಾಲ ಹೇಳಿಕೆಗೆ ಪ್ರತಿಕ್ರಿಯಿಸಿ ರಣದೀಪ್‌ಸಿಂಗ್ ಸುರ್ಜೇವಾಲಗೆ ಕರ್ನಾಟಕವೇ ಮರೆತು ಹೋಗಿದೆ. ಸುರ್ಜೇವಾಲರಂತ ಭಟ್ಟಂಗಿಗಳು ರಾಹುಲ್ ಗಾಂಧಿನ ಹೊಗಳಿ ಹಾಳು ಮಾಡಿದ್ರು ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಈಶ್ವರಪ್ಪ ಮನೆಯಲ್ಲಿ 2 ನೋಟ್ ಎಣಿಸೋ ಮೆಷಿನ್ ಸಿಕ್ಕಿತ್ತು, ಅದ್ನ ಆತ ಒಪ್ಕೊಂಡಿದ್ದ: ಸಿದ್ದರಾಮಯ್ಯ 

ರಾಹುಲ್​ ಗಾಂಧಿ ಕಾಲಿಟ್ಟ ಕಡೆಯೆಲ್ಲಾ ಕಾಂಗ್ರೆಸ್​ ಸೋತಿದೆ, ಬೆಳಗಾವಿಗೆ ಬಂದ್ರೆ ಸಿಂಹವೋ, ನರಿಯೋ, ಕುರಿಯೋ ಗೊತ್ತಾಗುತ್ತೆ: ಕೆಎಸ್​ ಈಶ್ವರಪ್ಪ

(KS Eshwarappa slams Siddaramaiah and says he is the reason behind division of society)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್