AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಕರ್ಣ ಕ್ಷೇತ್ರಕ್ಕೆ ಸಚಿವ ಕೆ ಎಸ್ ಈಶ್ವರಪ್ಪ ಭೇಟಿ; ಕೋಟಿತೀರ್ಥ ಪುಷ್ಕರಣಿ ಅಭಿವೃದ್ಧಿ ಯೋಜನೆಗೆ ಚಾಲನೆ

ಈ ಪುಷ್ಕರಣಿ ಅಭಿವೃದ್ಧಿ ಯೋಜನೆಯು, 2021-2022ರ ಜಲಾಮೃತ ಯೋಜನೆಯಡಿ ನಡೆಯುತ್ತಿರುವ ಕಾರ್ಯಕ್ರಮವಾಗಿದೆ. ಸಚಿವರಿಗೆ ಕುಮಟಾ ಶಾಸಕ ದಿನಕರ ಶೆಟ್ಟಿ, ವಿಧಾನಪರಿಷತ್ ಸದಸ್ಯ ಶಾಂತಾರಾಮ ಸಿದ್ಧಿ, ಸಿಇಒ ಪ್ರಿಯಾಂಕಾ ಸಾಥ್ ನೀಡಿದ್ದಾರೆ.

ಗೋಕರ್ಣ ಕ್ಷೇತ್ರಕ್ಕೆ ಸಚಿವ ಕೆ ಎಸ್ ಈಶ್ವರಪ್ಪ ಭೇಟಿ; ಕೋಟಿತೀರ್ಥ ಪುಷ್ಕರಣಿ ಅಭಿವೃದ್ಧಿ ಯೋಜನೆಗೆ ಚಾಲನೆ
ಕೆ.ಎಸ್. ಈಶ್ವರಪ್ಪ
TV9 Web
| Updated By: ganapathi bhat|

Updated on:Jun 15, 2021 | 11:51 PM

Share

ಕಾರವಾರ: ಗೋಕರ್ಣ ಮಹಾಬಲೇಶ್ವರ ದೇವಸ್ಥಾನಕ್ಕೆ ಸಚಿವ ಕೆ.ಎಸ್. ಈಶ್ವರಪ್ಪ ಭೇಟಿ ನೀಡಿ, ಕೋಟಿತೀರ್ಥ ಪುಷ್ಕರಣಿ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಕ್ಷೇತ್ರಕ್ಕೆ ಈಶ್ವರಪ್ಪ ಭೇಟಿ ನೀಡಿದ್ದಾರೆ. ಕ್ಷೇತ್ರದ ಮಹಾಬಲೇಶ್ವರನಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ನಂದಿಮಂಟಪದ ಬಳಿಯಿಂದ ನಾಗಾಭರಣ ಪೂಜೆ ಸಲ್ಲಿಸಿದ್ದಾರೆ.

ಬಳಿಕ ಕೋಟಿತೀರ್ಥ ಪುಷ್ಕರಣಿ ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಿದ್ದಾರೆ. 131.70 ಲಕ್ಷ ರೂಪಾಯಿ ವೆಚ್ಚದಲ್ಲಿ ಕೋಟಿತೀರ್ಥ ಪುಷ್ಕರಣಿ ಅಭಿವೃದ್ಧಿ ಕಾರ್ಯ ನಡೆಯಲಿದೆ. ಈ ಅಭಿವೃದ್ಧಿ ಕಾರ್ಯಕ್ಕೆ ಈಶ್ವರಪ್ಪ ಚಾಲನೆ ನೀಡಿದ್ದಾರೆ.

ಈ ಪುಷ್ಕರಣಿ ಅಭಿವೃದ್ಧಿ ಯೋಜನೆಯು, 2021-2022ರ ಜಲಾಮೃತ ಯೋಜನೆಯಡಿ ನಡೆಯುತ್ತಿರುವ ಕಾರ್ಯಕ್ರಮವಾಗಿದೆ. ಸಚಿವರಿಗೆ ಕುಮಟಾ ಶಾಸಕ ದಿನಕರ ಶೆಟ್ಟಿ, ವಿಧಾನಪರಿಷತ್ ಸದಸ್ಯ ಶಾಂತಾರಾಮ ಸಿದ್ಧಿ, ಸಿಇಒ ಪ್ರಿಯಾಂಕಾ ಸಾಥ್ ನೀಡಿದ್ದಾರೆ.

ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಕೋಟಿತೀರ್ಥ ಕಲ್ಯಾಣಿಗೆ ಈಶ್ವರಪ್ಪ ಬಾಗಿನ ಅರ್ಪಿಸಿದ್ದಾರೆ. ಮುಂದಿನ ಜನವರಿಯಿಂದ ಕೋಟಿತೀರ್ಥ ಅಭಿವೃದ್ಧಿ ಕಾಮಗಾರಿ ಪ್ರಾರಂಭಗೊಳ್ಳಲಿದೆ. ಪುಷ್ಕರಣಿ ಅಭಿವೃದ್ಧಿಯೊಂದಿಗೆ ಜನವರಿಯವರೆಗೆ ಒಟ್ಟು 11 ಚಟುವಟಿಕೆಗಳು ನಡೆಯಲಿದೆ. ಈ ಮೊದಲು, ಕೋಟಿತೀರ್ಥ ಅಭಿವೃದ್ಧಿಗೆ ಪಣತೊಟ್ಟಿದ್ದ ಸಚಿವ‌ ಈಶರಪ್ಪ, ನೀಡಿದ ಮಾತಿನಂತೆ ಇಂದು ಯೋಜನೆಗೆ ಚಾಲನೆ ನೀಡಿದ್ದಾರೆ.

ಇದನ್ನೂ ಓದಿ: ರೇಣುಕಾಚಾರ್ಯ, ಈಶ್ವರಪ್ಪ ಮಧ್ಯೆ ಮಾತಿನ ಸಮರ; ಹುಲಿವೇಷ ಎಂದವರು ಆತ್ಮಾವಲೋಕನ ಮಾಡಿಕೊಳ್ಳಲಿ: ರೇಣುಕಾಚಾರ್ಯ ತಿರುಗೇಟು

ಕೊವಿಡ್ ನಿಯಮ ಪಾಲಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಿ; ಪೊಲೀಸರಿಗೆ ಕೆ.ಎಸ್​ ಈಶ್ವರಪ್ಪ ಸೂಚನೆ

Published On - 11:35 pm, Tue, 15 June 21

ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,