AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏ 12ರಂದು ನಾಮಪತ್ರ: ಚುನಾವಣೆಗೆ ಸ್ಪರ್ಧಿಸಲು ದೆಹಲಿ ಯಾತ್ರೆ ಭಗವಂತ ಕೊಟ್ಟ ವರ ಎಂದ ಈಶ್ವರಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​​ಪೋರ್ಟ್​​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಡಿಸಿಎಂ ಕೆ.ಎಸ್​ ಈಶ್ವರಪ್ಪ, ಏಪ್ರಿಲ್​ 12 ರಂದು ನಾನು ನಾಮಪತ್ರವನ್ನ ಸಲ್ಲಿಕೆ ಮಾಡುತ್ತೇನೆ ಶಿವಮೊಗ್ಗದಲ್ಲಿ ರಾಮಣ್ಣ ಶೆಟ್ಟಿ ಪಾರ್ಕ್​ನಿಂದ ಬೃಹತ ಮೆರವಣಿಗೆ ಮೂಲಕ ಹೋಗಿ ನಾಮಪತ್ರ ಸಲ್ಲಿಸುತ್ತೇನೆ. ಜ‌ನರ ಅಪಾರ ಬೆಂಬಲ ಶಕ್ತಿ ನನಗೆ ಸಿಕ್ಕಿದೆ. ಕಾಂಗ್ರೆಸ್ ಮತ್ತು ಜೆಡಿಎಸ್​ನಿಂದಲೂ ನನಗೆ ಬೆಂಬಲ ಸಿಗುತ್ತಿದೆ ಎಂದು ಹೇಳಿದ್ದಾರೆ.

ಏ 12ರಂದು ನಾಮಪತ್ರ: ಚುನಾವಣೆಗೆ ಸ್ಪರ್ಧಿಸಲು ದೆಹಲಿ ಯಾತ್ರೆ ಭಗವಂತ ಕೊಟ್ಟ ವರ ಎಂದ ಈಶ್ವರಪ್ಪ
K.S.ಈಶ್ವರಪ್ಪ
ನವೀನ್ ಕುಮಾರ್ ಟಿ
| Edited By: |

Updated on: Apr 04, 2024 | 9:30 PM

Share

ದೇವನಹಳ್ಳಿ, ಏಪ್ರಿಲ್​ 04: ಏಪ್ರಿಲ್​ 12ರಂದು ಶಿವಮೊಗ್ಗ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುತ್ತೇನೆ ಎಂದು ಮಾಜಿ ಡಿಸಿಎಂ ಕೆ.ಎಸ್​ ಈಶ್ವರಪ್ಪ (KS Eshwarappa) ಹೇಳಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​​ಪೋರ್ಟ್​​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಸ್ಪರ್ಧಿಸಲು ದೆಹಲಿ ಯಾತ್ರೆ ಭಗವಂತ ಕೊಟ್ಟ ವರ. ಏ.12ರಂದು ಬೃಹತ್ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸುತ್ತೇನೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್​ನಿಂದಲೂ ನನಗೆ ಬೆಂಬಲ ಸಿಗುತ್ತಿದೆ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಭೇಟಿಗೆ ಅವಕಾಶ ಕೊಟ್ಟಿಲ್ಲ. ಬೇಡಿಕೆಯಿಟ್ಟಿದ್ದ ಪ್ರಶ್ನೆಗೆ ಉತ್ತರಿಸಲಾಗದೆ ಭೇಟಿಗೆ ಅವಕಾಶ ನೀಡಿಲ್ಲ. ದೇಶದಲ್ಲಿ ಕಾಂಗ್ರೆಸ್​ನಿಂದ ಕುಟುಂಬ ರಾಜಕಾರಣ ನಡೆಯುತ್ತಿದೆ. ಕರ್ನಾಟಕದಲ್ಲಿ ಬಿಎಸ್ ಯಡಿಯೂರಪ್ಪ ಕುಟುಂಬ ರಾಜಕಾರಣ ನಡೆಯುತ್ತಿದೆ. ಹೀಗಾಗಿ ಅವರ ವಿರುದ್ಧ ರಾಜ್ಯದಲ್ಲಿ ಹೋರಾಟ ಮಾಡ್ತಿದ್ದೀನಿ ಎಂದು ಹೇಳಿದ್ದಾರೆ.

ನನ್ನ ಹೃದಯದಲ್ಲಿ ಮೋದಿ ಹಾಗೂ ಶ್ರೀರಾಮ ಇದ್ದಾರೆ: ಕೆ.ಎಸ್​ ಈಶ್ವರಪ್ಪ

ಸುಮಲತಾ ಬಿಜೆಪಿಗೆ ಬಂದಿರುವುದು ಸ್ವಾಗತ. ಬಿಜೆಪಿಗೆ ಯಾರೆಲ್ಲ ಬರುತ್ತಾರೋ ಅವರಿಗೆಲ್ಲಾ ಸ್ವಾಗತ. ನರೇಂದ್ರ ಮೋದಿ ಮತ್ತೆ ದೇಶದ ಪ್ರಧಾನಿಯಾಗಬೇಕು. ನನ್ನ ಹೃದಯದಲ್ಲಿ ಮೋದಿ ಹಾಗೂ ಶ್ರೀರಾಮ ಇದ್ದಾರೆ. ಮೋದಿಗೆ ಬೆಂಬಲ ಕೊಡದಿದ್ರೆ ನನ್ನ ಕೈಕಟ್ ಆಗಿಬಿಡುತ್ತೆ. ಚುನಾವಣೆಯಲ್ಲಿ ಗೆದ್ದ ಮೇಲೆ ಮೋದಿ ಬಳಿ ಹೋಗುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ಮೇರೆಗೆ ದೆಹಲಿಗೆ ತೆರಳಿದ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ

ರಾಜ್ಯದ, ದೇಶದ ಜನ ಮೋದಿ ಕೈ ಎತ್ತಬೇಕು ಎನ್ನುವ ಅಪೇಕ್ಷೆಯಿದೆ. ನನ್ನ ಜೊತೆ ಗೂಳಿಹಟ್ಟಿಶೇಖರ್ ಸೇರಿದಂತೆ ಅನೇಕರು ಇದ್ದಾರೆ. ಎಲ್ಲರೂ ನನ್ನ ಜೊತೆ ಸೇರುತ್ತಾರೆ ನನಗೆ ಬೆಂಬಲ ನೀಡುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಈಶ್ವರಪ್ಪ ಎತ್ತಿರುವ ಪ್ರಶ್ನೆಗಳನ್ನು ವರಿಷ್ಠರು ಗಂಭೀರವಾಗಿ ಪರಿಗಣಿಸಿ ಬಗೆಹರಿಸುವ ಕೆಲಸಕ್ಕೆ ಮುಂದಾಗಬೇಕು: ಬಸನಗೌಡ ಯತ್ನಾಳ್

ಕಾರವಾದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​, ಈಶ್ವರಪ್ಪ ಆಡುತ್ತಿರುವ ಮಾತುಗಳನ್ನು ಮತ್ತು ಅವರು ಎತ್ತಿರುವ ಪ್ರಶ್ನೆಗಳನ್ನು ಪಕ್ಷದ ವರಿಷ್ಠರು ಗಂಭೀರವಾಗಿ ಪರಿಗಣಿಸಬೇಕು ಮತ್ತು ಅವುಗಳ ಇತ್ಯರ್ಥಕ್ಕೆ ಮುಂದಾಗಬೇಕು ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ