
ಕರ್ನಾಟಕ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ‘ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರವರ್ತನಾ ಸಂಘ’ (KSRLPS) ಚಾಮರಾಜನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಸರ್ಕಾರಿ ವಲಯದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ.
ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘವು ಒಟ್ಟು 8 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಇದರಲ್ಲಿ 7 ಕ್ಲಸ್ಟರ್ ಮೇಲ್ವಿಚಾರಕ ಹುದ್ದೆಗಳಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 18,000ರೂ. ವೇತನ ಸಿಗಲಿದೆ. ಹಾಗೆಯೇ 1 ಜಿಲ್ಲಾ ವ್ಯವಸ್ಥಾಪಕ ಹುದ್ದೆಯಿದ್ದು, ಮಾಸಿಕ 30,000 ರೂ. ಸಂಭಾವನೆ ನಿಗದಿಪಡಿಸಲಾಗಿದೆ. ಈ ಎಲ್ಲಾ ಹುದ್ದೆಗಳ ಉದ್ಯೋಗ ಸ್ಥಳ ಚಾಮರಾಜನಗರವಾಗಿದೆ.
ಕ್ಲಸ್ಟರ್ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ (Graduation) ಪೂರ್ಣಗೊಳಿಸಿರಬೇಕು. ಜಿಲ್ಲಾ ವ್ಯವಸ್ಥಾಪಕ ಹುದ್ದೆಗೆ ಬಿ.ಎಸ್ಸಿ (B.Sc) ಅಥವಾ ಎಂ.ಎಸ್ಸಿ (M.Sc) ಪದವಿ ಅರ್ಹತೆ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು ಮತ್ತು ಗರಿಷ್ಠ 50 ವರ್ಷ ವಯೋಮಿತಿ ಇರಬೇಕು. ಸರ್ಕಾರದ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ಇದನ್ನೂ ಓದಿ: 15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ; ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ
ಈ ನೇಮಕಾತಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ, ಎಲ್ಲಾ ವರ್ಗದ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳನ್ನು ಯಾವುದೇ ಲಿಖಿತ ಪರೀಕ್ಷೆಯಿಲ್ಲದೆ ನೇರ ಸಂದರ್ಶನದ (Interview) ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಜಿ ಭರ್ತಿ ಮಾಡುವ ಮೊದಲು ಸರಿಯಾದ ಇಮೇಲ್ ಐಡಿ, ಮೊಬೈಲ್ ಸಂಖ್ಯೆ ಹಾಗೂ ಶೈಕ್ಷಣಿಕ ದಾಖಲೆಗಳು, ಆಧಾರ್ ಕಾರ್ಡ್, ರೆಸ್ಯೂಮ್ ಮತ್ತು ಫೋಟೋ ಸಿದ್ಧವಿಟ್ಟುಕೊಳ್ಳಬೇಕು. ಅಧಿಕೃತ ಲಿಂಕ್(ksrlps.karnataka.gov.in) ಬಳಸಿ ಆನ್ಲೈನ್ ಫಾರ್ಮ್ನಲ್ಲಿ ಅಗತ್ಯ ವಿವರಗಳನ್ನು ಭರ್ತಿ ಮಾಡಿ, ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು 31 ಆಗಸ್ಟ್ ಕೊನೆಯ ದಿನಾಂಕವಾಗಿದೆ.
ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ