AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ‌ಎಸ್‌ಆರ್‌ಟಿಸಿ 63ನೇ ಸಂಸ್ಥಾಪನಾ ದಿನಾಚರಣೆ: ಕರ್ತವ್ಯದಲ್ಲಿದ್ದಾಗ ಮೃತಪಟ್ಟವರ ಕುಟುಂಬಕ್ಕೆ 1 ಕೋಟಿ ರೂ ಚೆಕ್ ವಿತರಣೆ

ಕೆ‌ಎಸ್‌ಆರ್‌ಟಿಸಿಯ 63ನೇ ಸಂಸ್ಥಾಪನಾ ದಿನಾಚರಣೆ ಹಿನ್ನೆಲೆ ಕರತವ್ಯ ನಿರತ ಅಪಘಾತದಲ್ಲಿ ಮೃತಪಟ್ಟ 3 ಸಿಬ್ಬಂದಿ ಕುಟುಂಬಕ್ಕೆ ಒಂದು ಕೋಟಿ ಚೆಕ್ ಹಾಗೂ ಕರ್ತವ್ಯ ನಿರತ ಹೊರತುಪಡಿಸಿ ಇತರೆ ಕಾರಣದಿಂದ ಮೃತಪಟ್ಟ 37 ಸಿಬ್ಬಂದಿಗೆ 10 ಲಕ್ಷ ರೂ ಚೆಕ್​ ಅನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿವರಿಂದ ಚೆಕ್ ವಿತರಣೆ ಮಾಡಿದ್ದಾರೆ.

ಕೆ‌ಎಸ್‌ಆರ್‌ಟಿಸಿ 63ನೇ ಸಂಸ್ಥಾಪನಾ ದಿನಾಚರಣೆ: ಕರ್ತವ್ಯದಲ್ಲಿದ್ದಾಗ ಮೃತಪಟ್ಟವರ ಕುಟುಂಬಕ್ಕೆ 1 ಕೋಟಿ ರೂ ಚೆಕ್ ವಿತರಣೆ
ಕೆಎಸ್​ಆರ್​ಟಿಸಿ
Vinayak Hanamant Gurav
| Edited By: |

Updated on:Oct 16, 2024 | 7:28 PM

Share

ಬೆಂಗಳೂರು, ಅಕ್ಟೋಬರ್​ 16: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ದ 63ನೇ ಸಂಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ತವ್ಯ ನಿರತದಲ್ಲಿ ಅಪಘಾತದಲ್ಲಿ ಮೃತಪಟ್ಟ 3 ಸಿಬ್ಬಂದಿ ಕುಟುಂಬಕ್ಕೆ ಒಂದು ಕೋಟಿ ರೂ. ಚೆಕ್ ಮತ್ತು ಕರ್ತವ್ಯ ನಿರತ ಹೊರತುಪಡಿಸಿ ಇತರೆ ಕಾರಣದಿಂದ ಮೃತಪಟ್ಟ 37 ಸಿಬ್ಬಂದಿಗೆ 10 ಲಕ್ಷ ರೂ ಚೆಕ್ ಅನ್ನು  ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿತರಣೆ ಮಾಡಿದ್ದಾರೆ.

3 ಐರಾವತ ಕ್ಲಬ್ ಕ್ಲಾಸ್ ಬಸ್​ಗಳಿಗೂ ಚಾಲನೆ

ಸಾರಿಗೆ ಸುರಕ್ಷಾ ವಿಮಾ ಯೋಜನೆಯಡಿ ತಲಾ 1 ಕೋಟಿ ರೂ. ಚೆಕ್​ ಮತ್ತು ಕುಟುಂಬ ಕಲ್ಯಾಣ ಯೋಜನೆ ಅಡಿ ತಲಾ 10 ಲಕ್ಷ ರೂ ಚೆಕ್ ವಿತರಣೆ ಮಾಡಲಾಗಿದೆ. ಈ ವೇಳೆ ಪುನಶ್ಚೇತನಗೊಳಿಸಿದ 3 ಐರಾವತ ಕ್ಲಬ್ ಕ್ಲಾಸ್ ಬಸ್​ಗಳಿಗೂ ಚಾಲನೆ ನೀಡಲಾಗಿದೆ. ಬಸ್​ಗಳ ಪುನಶ್ಚೇತನ ಕಾರ್ಯಕ್ಕೆ ವಿಭಾಗ ಹಾಗೂ ಪ್ರಾದೇಶಿಕ ಕಾರ್ಯಾಗಾರಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಶೂನ್ಯ ಅಪಘಾತ ಸಾಧನೆಗೆ ಪಾವಗಡ ಘಟಕ ಹಾಗೂ ಘಟಕ ವ್ಯವಸ್ಥಾಪಕರಿಗೆ ನಗದು ಪುರಸ್ಕಾರ ನೀಡಲಾಗಿದೆ.

ಇದನ್ನೂ ಓದಿ: KSRTC: ತಿಂಗಳಾಂತ್ಯಕ್ಕೆ ರಸ್ತೆಗೆ ಇಳಿಯಲಿವೆ ಐರಾವತ ಕ್ಲಬ್ ಕ್ಲಾಸ್ 2.0 ಬಸ್​ಗಳು​​

ಅನುಕಂಪದ ಆಧಾರದ ಮೇಲೆ ಮೃತ ಕುಟುಂಬದವರಿಗೆ ಕೆಎಸ್​ಟಿ (KST) ಕಾನ್ಸಟೇಬಲ್ ಹುದ್ದೆಗೆ ನೇಮಕಾತಿ ಮಾಡುವುದು. ಇನ್ನು ನಿಗಮದ ಆಂತರಿಕ ನಿಯತಕಾಲಿಕೆ ಸಾರಿಗೆ ಸಂಪದ ಮತ್ತು ವಾಹನಗಳ ಪುನಶ್ಚೇತನ ಸಂಚಿಕೆ ಬಿಡುಗಡೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಕೆ‌ಎಸ್‌ಆರ್‌ಟಿಸಿಯ ಅಧ್ಯಕ್ಷರು ಸೇರಿ ಕೆ‌ಎಸ್‌ಆರ್‌ಟಿ‌ಸಿ ಎಂಡಿ ಅನ್ಬುಕುಮಾರ್ ಭಾಗಿ ಆಗಿದ್ದರು.

ನೂತನ ಐರಾವತ ಕ್ಲಬ್ ಕ್ಲಾಸ್ 2.0 ಬಸ್​ ಕೆ‌ಎಸ್‌ಆರ್‌ಟಿಸಿ ನಿಗಮಕ್ಕೆ ಸೇರ್ಪಡೆ 

ಇನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗ್ಗೆ ಐರಾವತ ಕ್ಲಬ್ ಕ್ಲಾಸ್ 2.0 ನೂತನ ವೋಲ್ವೋ (9600 ಮಾದರಿ)ಯ ಬಸ್​ಗಳು ಸೇರ್ಪಡೆ ಆಗಿವೆ. ಇತ್ತೀಚೆಗೆ ಸಚಿವ ರಾಮಲಿಂಗಾರೆಡ್ಡಿ ಹೊಸಕೋಟೆ ಬಳಿಯಿರುವ ವೋಲ್ವೋ ಬಸ್ ತಯಾರಿಕಾ ಫ್ಯಾಕ್ಟರಿಗೆ ಭೇಟಿ ನೀಡಿ ಪರಿವೀಕ್ಷಣೆ ಮಾಡಿದ್ದರು.

ಇದನ್ನೂ ಓದಿ: ಕೆಎಸ್ಆರ್​ಟಿಸಿ ನಿಗಮ ಸೇರಲಿವೆ 1.78 ಕೋಟಿ ರೂ ಮೌಲ್ಯದ 20 ಐರಾವತ 2.0 ಮಾದರಿಯ ಬಸ್

ಐರಾವತ ಕ್ಲಬ್ ಕ್ಲಾಸ್ 2.0 ಮಾದರಿಯ 20 ಬಸ್ಸುಗಳನ್ನು ಕೆಎಸ್​ಆರ್​ಟಿಸಿಯು ಈ ತಿಂಗಳ ಕೊನೆಯ ವಾರದಲ್ಲಿ ವಾಹನಗಳ ಸಮೂಹಕ್ಕೆ ಸೇರ್ಪಡೆಗೊಳಿಸಲಿದೆ. ಕರ್ನಾಟಕವು ವಿವಿಧ ಮಾದರಿಯ ಅತ್ಯಾಧುನಿಕ ಬಸ್ಸುಗಳನ್ನು ಪ್ರಯಾಣಿಕರ ಬೇಡಿಕೆಗನುಣವಾಗಿ ಸೇರ್ಪಡೆ ‌ಗೊಳಿಸುತ್ತಿರುವುದರಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:14 pm, Wed, 16 October 24

Follow Us
Vinayak Hanamant Gurav
Vinayak Hanamant Gurav
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ