AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MEIL: ಶೀಘ್ರದಲ್ಲೇ ರಾಜ್ಯಾದ್ಯಂತ ಸಂಚರಿಸಲಿವೆ ಎಂಇಐಎಲ್​ನ ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್​ಗಳು

ಹೈದರಾಬಾದ್ ಮೂಲದ ಮೇಘಾ ಎಂಜಿನಿಯರಿಂಗ್ ಆ್ಯಂಡ್ ಇನ್​ಫ್ರಾಸ್ಟ್ರಕ್ಚರ್ ಲಿಮಿಟೆಡ್​​ನ ಅಂಗಸಂಸ್ಥೆ ಒಲೆಕ್ಟ್ರಾ ಕಂಪನಿಯ 50 ಎಲೆಕ್ಟ್ರಿಕ್ ಬಸ್​​ಗಳು ಶೀಘ್ರದಲ್ಲೇ ರಾಜ್ಯಾದ್ಯಂತ ಸಂಚರಿಸಲಿವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅದ್ಯಕ್ಷ ಎಂ. ಚಂದ್ರಪ್ಪ ಚಿತ್ರದುರ್ಗದಲ್ಲಿ ತಿಳಿಸಿದ್ದಾರೆ.

MEIL: ಶೀಘ್ರದಲ್ಲೇ ರಾಜ್ಯಾದ್ಯಂತ ಸಂಚರಿಸಲಿವೆ ಎಂಇಐಎಲ್​ನ ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್​ಗಳು
ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್
Ganapathi Sharma
|

Updated on: Mar 04, 2023 | 5:48 PM

Share

ಚಿತ್ರದುರ್ಗ: ಹೈದರಾಬಾದ್ ಮೂಲದ ಮೇಘಾ ಎಂಜಿನಿಯರಿಂಗ್ ಆ್ಯಂಡ್ ಇನ್​ಫ್ರಾಸ್ಟ್ರಕ್ಚರ್ ಲಿಮಿಟೆಡ್​​ನ (MEIL) ಅಂಗಸಂಸ್ಥೆ ಒಲೆಕ್ಟ್ರಾ ಕಂಪನಿಯ 50 ಎಲೆಕ್ಟ್ರಿಕ್ ಬಸ್​​ಗಳು ಶೀಘ್ರದಲ್ಲೇ ರಾಜ್ಯಾದ್ಯಂತ ಸಂಚರಿಸಲಿವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಅದ್ಯಕ್ಷ ಎಂ. ಚಂದ್ರಪ್ಪ ಚಿತ್ರದುರ್ಗದಲ್ಲಿ ‘ಟಿವಿ9’ಗೆ ತಿಳಿಸಿದ್ದಾರೆ. ಎಲೆಕ್ಟ್ರಿಕ್ ಬಸ್​​ಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. 20 ವೋಲ್ವೊ ಬಸ್‌ಗಳಿಗೆ ಫೆಬ್ರುವರಿ 21ಕ್ಕೆ ಚಾಲನೆ ನೀಡಿದ್ದೇವೆ. ಸುಮಾರು ಐವತ್ತು ಇ-ಬಸ್ ಗಳು ಕೆಎಸ್​ಆರ್​ಟಿಸಿ ಬಳಿ ಇವೆ. ಈ ಬಸ್​ಗಳು ಒಂದು‌ ಬಾರಿ ಬ್ಯಾಟರಿ ಚಾರ್ಜ್ ಆದರೆ 350 ಕಿ.ಮೀ. ಚಲಿಸುತ್ತವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಬೆಂಗಳೂರು-ಮೈಸೂರು ಮಧ್ಯೆ ಆರಂಭಿಸಿರುವ ಇ-ಬಸ್​​ಗೆ ಉತ್ತಮ‌ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇ-ಬಸ್​​ಗಳು ವಾಯುಮಾಲಿನ್ಯ ರಹಿತ ಪರಿಸರ ಸ್ನೇಹಿ ಬಸ್​​ಗಳಾಗಿದ್ದು, ಪ್ರಯಾಣಿಕಸ್ನೇಹಿಯಾಗಿವೆ. ಇವು ಏರ್ ಕಂಡಿಷನ್​​ಯುಕ್ತ ಸುಸಜ್ಜಿತ ಬಸ್​​ಗಳಾಗಿವೆ ಎಂದು ಅವರು ಹೇಳಿದ್ದಾರೆ. ಶೀಘ್ರದಲ್ಲೇ 550 ಸಾಮಾನ್ಯ ಬಸ್​ಗಳು, 50 ಲೇಲ್ಯಾಂಡ್ ಹಾಗೂ ಸ್ಲೀಪರ್ ಕೋಚ್ ಬಸ್​​ಗಳು ಸಹ ಬರಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: KSRTC Electric Bus: ರಸ್ತೆಗಿಳಿದ ಕೆಎಸ್​​​ಆರ್​​​ಟಿಸಿ ಎಲೆಕ್ಟ್ರಿಕ್​​​ ಬಸ್​ಗಳು, ಮೊದಲ ಪ್ರಯಾಣ ಆರಂಭ

ಬೆಂಗಳೂರು-ಮೈಸೂರು ನಡುವೆ ಮೊದಲ ಎಲೆಕ್ಟ್ರಿಕ್​​ ಬಸ್ ಸೇವೆ ಇದೇ ವರ್ಷ ಜನವರಿ 16ರಂದು ಆರಂಭವಾಗಿತ್ತು. ಮೊದಲ ಎಲೆಕ್ಟ್ರಿಕ್​​ ಬಸ್​​ಗೆ ಚಾಲನೆ ನೀಡಿದ ಸಂದರ್ಭದಲ್ಲೇ, ಮುಂದಿನ ಮೂರು ತಿಂಗಳಲ್ಲಿ 50 ಎಲೆಕ್ಟ್ರಿಕ್ ಬಸ್​​ಗಳನ್ನು ರಸ್ತೆಗಿಳಿಸಲಾಗುವುದು ಎಂದು ಕೆಎಸ್​ಆರ್​​ಟಿಸಿ ತಿಳಿಸಿತ್ತು.

ಎಲೆಕ್ಟ್ರಿಕ್ ಬಸ್ ವಿಶೇಷ

ಆರಾಮದಾಯಕ ಆಸನ, ದೂರದರ್ಶನ, ಪ್ರೀಮಿಯಂ ಸೀಟ್‌ಗಳು, ಪ್ರತಿಯೊಂದು ಸೀಟಿಗೂ ಚಾರ್ಜಿಂಗ್ ಸಾಕೆಟ್‌, ಎಸಿ​ ವೆಂಟ್‌ಗಳು, ಓದುವ ದೀಪಗಳು ಸೇರಿದಂತೆ ಇನ್ನೂ ಅನೇಕ ಸೌಲಭ್ಯಗಳನ್ನು ಎಲೆಕ್ಟ್ರಿಕ್ ಬಸ್ ಒಳಗೊಂಡಿವೆ. ಎಲೆಕ್ಟ್ರಿಕ್​ ಬಸ್​ಗಳು 2022 ಡಿಸೆಂಬರ್​ 31 ರಂದೇ ರಾಜ್ಯಕ್ಕೆ ಬಂದಿದ್ದು, ಪ್ರಾಯೋಗಿಕ ಸಂಚಾರ ನಡೆಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್