AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MEIL: ಶೀಘ್ರದಲ್ಲೇ ರಾಜ್ಯಾದ್ಯಂತ ಸಂಚರಿಸಲಿವೆ ಎಂಇಐಎಲ್​ನ ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್​ಗಳು

ಹೈದರಾಬಾದ್ ಮೂಲದ ಮೇಘಾ ಎಂಜಿನಿಯರಿಂಗ್ ಆ್ಯಂಡ್ ಇನ್​ಫ್ರಾಸ್ಟ್ರಕ್ಚರ್ ಲಿಮಿಟೆಡ್​​ನ ಅಂಗಸಂಸ್ಥೆ ಒಲೆಕ್ಟ್ರಾ ಕಂಪನಿಯ 50 ಎಲೆಕ್ಟ್ರಿಕ್ ಬಸ್​​ಗಳು ಶೀಘ್ರದಲ್ಲೇ ರಾಜ್ಯಾದ್ಯಂತ ಸಂಚರಿಸಲಿವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅದ್ಯಕ್ಷ ಎಂ. ಚಂದ್ರಪ್ಪ ಚಿತ್ರದುರ್ಗದಲ್ಲಿ ತಿಳಿಸಿದ್ದಾರೆ.

MEIL: ಶೀಘ್ರದಲ್ಲೇ ರಾಜ್ಯಾದ್ಯಂತ ಸಂಚರಿಸಲಿವೆ ಎಂಇಐಎಲ್​ನ ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್​ಗಳು
ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್
Follow us
Ganapathi Sharma
|

Updated on: Mar 04, 2023 | 5:48 PM

ಚಿತ್ರದುರ್ಗ: ಹೈದರಾಬಾದ್ ಮೂಲದ ಮೇಘಾ ಎಂಜಿನಿಯರಿಂಗ್ ಆ್ಯಂಡ್ ಇನ್​ಫ್ರಾಸ್ಟ್ರಕ್ಚರ್ ಲಿಮಿಟೆಡ್​​ನ (MEIL) ಅಂಗಸಂಸ್ಥೆ ಒಲೆಕ್ಟ್ರಾ ಕಂಪನಿಯ 50 ಎಲೆಕ್ಟ್ರಿಕ್ ಬಸ್​​ಗಳು ಶೀಘ್ರದಲ್ಲೇ ರಾಜ್ಯಾದ್ಯಂತ ಸಂಚರಿಸಲಿವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಅದ್ಯಕ್ಷ ಎಂ. ಚಂದ್ರಪ್ಪ ಚಿತ್ರದುರ್ಗದಲ್ಲಿ ‘ಟಿವಿ9’ಗೆ ತಿಳಿಸಿದ್ದಾರೆ. ಎಲೆಕ್ಟ್ರಿಕ್ ಬಸ್​​ಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. 20 ವೋಲ್ವೊ ಬಸ್‌ಗಳಿಗೆ ಫೆಬ್ರುವರಿ 21ಕ್ಕೆ ಚಾಲನೆ ನೀಡಿದ್ದೇವೆ. ಸುಮಾರು ಐವತ್ತು ಇ-ಬಸ್ ಗಳು ಕೆಎಸ್​ಆರ್​ಟಿಸಿ ಬಳಿ ಇವೆ. ಈ ಬಸ್​ಗಳು ಒಂದು‌ ಬಾರಿ ಬ್ಯಾಟರಿ ಚಾರ್ಜ್ ಆದರೆ 350 ಕಿ.ಮೀ. ಚಲಿಸುತ್ತವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಬೆಂಗಳೂರು-ಮೈಸೂರು ಮಧ್ಯೆ ಆರಂಭಿಸಿರುವ ಇ-ಬಸ್​​ಗೆ ಉತ್ತಮ‌ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇ-ಬಸ್​​ಗಳು ವಾಯುಮಾಲಿನ್ಯ ರಹಿತ ಪರಿಸರ ಸ್ನೇಹಿ ಬಸ್​​ಗಳಾಗಿದ್ದು, ಪ್ರಯಾಣಿಕಸ್ನೇಹಿಯಾಗಿವೆ. ಇವು ಏರ್ ಕಂಡಿಷನ್​​ಯುಕ್ತ ಸುಸಜ್ಜಿತ ಬಸ್​​ಗಳಾಗಿವೆ ಎಂದು ಅವರು ಹೇಳಿದ್ದಾರೆ. ಶೀಘ್ರದಲ್ಲೇ 550 ಸಾಮಾನ್ಯ ಬಸ್​ಗಳು, 50 ಲೇಲ್ಯಾಂಡ್ ಹಾಗೂ ಸ್ಲೀಪರ್ ಕೋಚ್ ಬಸ್​​ಗಳು ಸಹ ಬರಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: KSRTC Electric Bus: ರಸ್ತೆಗಿಳಿದ ಕೆಎಸ್​​​ಆರ್​​​ಟಿಸಿ ಎಲೆಕ್ಟ್ರಿಕ್​​​ ಬಸ್​ಗಳು, ಮೊದಲ ಪ್ರಯಾಣ ಆರಂಭ

ಬೆಂಗಳೂರು-ಮೈಸೂರು ನಡುವೆ ಮೊದಲ ಎಲೆಕ್ಟ್ರಿಕ್​​ ಬಸ್ ಸೇವೆ ಇದೇ ವರ್ಷ ಜನವರಿ 16ರಂದು ಆರಂಭವಾಗಿತ್ತು. ಮೊದಲ ಎಲೆಕ್ಟ್ರಿಕ್​​ ಬಸ್​​ಗೆ ಚಾಲನೆ ನೀಡಿದ ಸಂದರ್ಭದಲ್ಲೇ, ಮುಂದಿನ ಮೂರು ತಿಂಗಳಲ್ಲಿ 50 ಎಲೆಕ್ಟ್ರಿಕ್ ಬಸ್​​ಗಳನ್ನು ರಸ್ತೆಗಿಳಿಸಲಾಗುವುದು ಎಂದು ಕೆಎಸ್​ಆರ್​​ಟಿಸಿ ತಿಳಿಸಿತ್ತು.

ಎಲೆಕ್ಟ್ರಿಕ್ ಬಸ್ ವಿಶೇಷ

ಆರಾಮದಾಯಕ ಆಸನ, ದೂರದರ್ಶನ, ಪ್ರೀಮಿಯಂ ಸೀಟ್‌ಗಳು, ಪ್ರತಿಯೊಂದು ಸೀಟಿಗೂ ಚಾರ್ಜಿಂಗ್ ಸಾಕೆಟ್‌, ಎಸಿ​ ವೆಂಟ್‌ಗಳು, ಓದುವ ದೀಪಗಳು ಸೇರಿದಂತೆ ಇನ್ನೂ ಅನೇಕ ಸೌಲಭ್ಯಗಳನ್ನು ಎಲೆಕ್ಟ್ರಿಕ್ ಬಸ್ ಒಳಗೊಂಡಿವೆ. ಎಲೆಕ್ಟ್ರಿಕ್​ ಬಸ್​ಗಳು 2022 ಡಿಸೆಂಬರ್​ 31 ರಂದೇ ರಾಜ್ಯಕ್ಕೆ ಬಂದಿದ್ದು, ಪ್ರಾಯೋಗಿಕ ಸಂಚಾರ ನಡೆಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ