MEIL: ಶೀಘ್ರದಲ್ಲೇ ರಾಜ್ಯಾದ್ಯಂತ ಸಂಚರಿಸಲಿವೆ ಎಂಇಐಎಲ್​ನ ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್​ಗಳು

ಹೈದರಾಬಾದ್ ಮೂಲದ ಮೇಘಾ ಎಂಜಿನಿಯರಿಂಗ್ ಆ್ಯಂಡ್ ಇನ್​ಫ್ರಾಸ್ಟ್ರಕ್ಚರ್ ಲಿಮಿಟೆಡ್​​ನ ಅಂಗಸಂಸ್ಥೆ ಒಲೆಕ್ಟ್ರಾ ಕಂಪನಿಯ 50 ಎಲೆಕ್ಟ್ರಿಕ್ ಬಸ್​​ಗಳು ಶೀಘ್ರದಲ್ಲೇ ರಾಜ್ಯಾದ್ಯಂತ ಸಂಚರಿಸಲಿವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅದ್ಯಕ್ಷ ಎಂ. ಚಂದ್ರಪ್ಪ ಚಿತ್ರದುರ್ಗದಲ್ಲಿ ತಿಳಿಸಿದ್ದಾರೆ.

MEIL: ಶೀಘ್ರದಲ್ಲೇ ರಾಜ್ಯಾದ್ಯಂತ ಸಂಚರಿಸಲಿವೆ ಎಂಇಐಎಲ್​ನ ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್​ಗಳು
ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್

Updated on: Mar 04, 2023 | 5:48 PM

ಚಿತ್ರದುರ್ಗ: ಹೈದರಾಬಾದ್ ಮೂಲದ ಮೇಘಾ ಎಂಜಿನಿಯರಿಂಗ್ ಆ್ಯಂಡ್ ಇನ್​ಫ್ರಾಸ್ಟ್ರಕ್ಚರ್ ಲಿಮಿಟೆಡ್​​ನ (MEIL) ಅಂಗಸಂಸ್ಥೆ ಒಲೆಕ್ಟ್ರಾ ಕಂಪನಿಯ 50 ಎಲೆಕ್ಟ್ರಿಕ್ ಬಸ್​​ಗಳು ಶೀಘ್ರದಲ್ಲೇ ರಾಜ್ಯಾದ್ಯಂತ ಸಂಚರಿಸಲಿವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಅದ್ಯಕ್ಷ ಎಂ. ಚಂದ್ರಪ್ಪ ಚಿತ್ರದುರ್ಗದಲ್ಲಿ ‘ಟಿವಿ9’ಗೆ ತಿಳಿಸಿದ್ದಾರೆ. ಎಲೆಕ್ಟ್ರಿಕ್ ಬಸ್​​ಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. 20 ವೋಲ್ವೊ ಬಸ್‌ಗಳಿಗೆ ಫೆಬ್ರುವರಿ 21ಕ್ಕೆ ಚಾಲನೆ ನೀಡಿದ್ದೇವೆ. ಸುಮಾರು ಐವತ್ತು ಇ-ಬಸ್ ಗಳು ಕೆಎಸ್​ಆರ್​ಟಿಸಿ ಬಳಿ ಇವೆ. ಈ ಬಸ್​ಗಳು ಒಂದು‌ ಬಾರಿ ಬ್ಯಾಟರಿ ಚಾರ್ಜ್ ಆದರೆ 350 ಕಿ.ಮೀ. ಚಲಿಸುತ್ತವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಬೆಂಗಳೂರು-ಮೈಸೂರು ಮಧ್ಯೆ ಆರಂಭಿಸಿರುವ ಇ-ಬಸ್​​ಗೆ ಉತ್ತಮ‌ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇ-ಬಸ್​​ಗಳು ವಾಯುಮಾಲಿನ್ಯ ರಹಿತ ಪರಿಸರ ಸ್ನೇಹಿ ಬಸ್​​ಗಳಾಗಿದ್ದು, ಪ್ರಯಾಣಿಕಸ್ನೇಹಿಯಾಗಿವೆ. ಇವು ಏರ್ ಕಂಡಿಷನ್​​ಯುಕ್ತ ಸುಸಜ್ಜಿತ ಬಸ್​​ಗಳಾಗಿವೆ ಎಂದು ಅವರು ಹೇಳಿದ್ದಾರೆ. ಶೀಘ್ರದಲ್ಲೇ 550 ಸಾಮಾನ್ಯ ಬಸ್​ಗಳು, 50 ಲೇಲ್ಯಾಂಡ್ ಹಾಗೂ ಸ್ಲೀಪರ್ ಕೋಚ್ ಬಸ್​​ಗಳು ಸಹ ಬರಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: KSRTC Electric Bus: ರಸ್ತೆಗಿಳಿದ ಕೆಎಸ್​​​ಆರ್​​​ಟಿಸಿ ಎಲೆಕ್ಟ್ರಿಕ್​​​ ಬಸ್​ಗಳು, ಮೊದಲ ಪ್ರಯಾಣ ಆರಂಭ

ಬೆಂಗಳೂರು-ಮೈಸೂರು ನಡುವೆ ಮೊದಲ ಎಲೆಕ್ಟ್ರಿಕ್​​ ಬಸ್ ಸೇವೆ ಇದೇ ವರ್ಷ ಜನವರಿ 16ರಂದು ಆರಂಭವಾಗಿತ್ತು. ಮೊದಲ ಎಲೆಕ್ಟ್ರಿಕ್​​ ಬಸ್​​ಗೆ ಚಾಲನೆ ನೀಡಿದ ಸಂದರ್ಭದಲ್ಲೇ, ಮುಂದಿನ ಮೂರು ತಿಂಗಳಲ್ಲಿ 50 ಎಲೆಕ್ಟ್ರಿಕ್ ಬಸ್​​ಗಳನ್ನು ರಸ್ತೆಗಿಳಿಸಲಾಗುವುದು ಎಂದು ಕೆಎಸ್​ಆರ್​​ಟಿಸಿ ತಿಳಿಸಿತ್ತು.

ಎಲೆಕ್ಟ್ರಿಕ್ ಬಸ್ ವಿಶೇಷ

ಆರಾಮದಾಯಕ ಆಸನ, ದೂರದರ್ಶನ, ಪ್ರೀಮಿಯಂ ಸೀಟ್‌ಗಳು, ಪ್ರತಿಯೊಂದು ಸೀಟಿಗೂ ಚಾರ್ಜಿಂಗ್ ಸಾಕೆಟ್‌, ಎಸಿ​ ವೆಂಟ್‌ಗಳು, ಓದುವ ದೀಪಗಳು ಸೇರಿದಂತೆ ಇನ್ನೂ ಅನೇಕ ಸೌಲಭ್ಯಗಳನ್ನು ಎಲೆಕ್ಟ್ರಿಕ್ ಬಸ್ ಒಳಗೊಂಡಿವೆ. ಎಲೆಕ್ಟ್ರಿಕ್​ ಬಸ್​ಗಳು 2022 ಡಿಸೆಂಬರ್​ 31 ರಂದೇ ರಾಜ್ಯಕ್ಕೆ ಬಂದಿದ್ದು, ಪ್ರಾಯೋಗಿಕ ಸಂಚಾರ ನಡೆಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us