Ashwamedha Classic buses: ಹೊಸ ಅಶ್ವಮೇಧ ಬಸ್ಸುಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣ: ಕೆಎಸ್​ಆರ್​ಟಿಸಿ ಘೋಷಣೆ

Free travel for women: ಕೆಎಸ್​ಆರ್​ಟಿಸಿಯು ಹೊಸ ಅಶ್ವಮೇಧ ಕ್ಲಾಸಿಕ್​ ಬಸ್​​​ಗಳನ್ನು ಕಾರ್ಯಾಚರಣೆಗೆ ಇಳಿಸುತ್ತಿದೆ. ಮಹಿಳಾ ಸುರಕ್ಷತೆ ದೃಷ್ಟಿಯಿಂದ ಹಲವು ಹೊಸ ಫೀಚರ್​ಗಳನ್ನು ಒಳಗೊಂಡಿರುವ ಈ ನಾನ್ ಎಸಿ ಬಸ್​​ಗಳಲ್ಲಿ ಕೂಡ ಮಹಿಳೆಯರಿಗೆ ಉಚಿತ ಪ್ರಯಾಣ ಇರಲಿದೆ. ಉಚಿತ ಗ್ಯಾರಂಟಿ ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ.

Follow us
| Updated By: ಗಣಪತಿ ಶರ್ಮ

Updated on:Feb 05, 2024 | 11:10 AM

ಬೆಂಗಳೂರು, ಫೆಬ್ರವರಿ 5: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ಹೊಸದಾಗಿ ಆರಂಭಿಸಿರುವ ಅಶ್ವಮೇಧ ಬಸ್ಸುಗಳಲ್ಲೂ (Ashwamedha Classic buses) ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವುದಾಗಿ ಘೋಷಣೆ ಮಾಡಲಾಗಿದೆ. ಕೆಎಸ್ಆರ್​​ಟಿಸಿಗೆ ಒಟ್ಟು ಸಾವಿರ ಹೊಸ ಬಸ್​ಗಳು ಬರಲಿದ್ದು, ಮೊದಲ ಹಂತದಲ್ಲಿ ನೂರು ಹೊಸ ಕ್ಲಾಸಿಕ್ ಬಸ್​​ಗಳು ಬಂದಿವೆ. ಬಣ್ಣ ಬಣ್ಣದ ಬಗೆ ಬಗೆಯ ಹೂವುಗಳಿಂದ ಸಿಂಗಾರಗೊಂಡಿರುವ ಅಶ್ವಮೇಧ ಬಸ್​ಗಳಿಗೆ ವಿಧಾನಸೌಧದ ಆವರಣದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಸೋಮವಾರ ಚಾಲನೆ ನೀಡಿದರು.

ಅಶ್ವಮೇಧ ಬಸ್​​ಗೆ ಚಾಲನೆ ಸಮಾರಂಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಹ ಹಾಜರಿದ್ದರು.

ಅಶ್ವಮೇಧ ಕ್ಲಾಸಿಕ್​ ಬಸ್​​ ವಿಶೇಷತೆಗಳೇನು?

ಸದ್ಯ ಕಾರ್ಯಾರಂಭ ಮಾಡುತ್ತಿರುವ ನೂರು ಅಶ್ವಮೇಧ ಕ್ಲಾಸಿಕ್​ ಬಸ್​​​ಗಳಲ್ಲಿ ಮಹಿಳೆಯರ ಸುರಕ್ಷತೆಗಾಗಿ 12 ಪ್ಯಾನಿಕ್ ಬಟನ್, ಜಿಪಿಎಸ್, ಎರಡು ರೇರ್ ಕ್ಯಾಮರಾ, ಮೊಬೈಲ್ ಫೋನ್ ಚಾರ್ಜ್ ಹಾಕಿಕೊಳ್ಳಲು ಆರು ಚಾರ್ಜಿಂಗ್ ಪಾಯಿಂಟ್ ವ್ಯವಸ್ಥೆ ಮಾಡಲಾಗಿದೆ. 52 ಸೀಟು, ಬಸ್ಸಿನ ಒಳಗೆ ಮತ್ತು ಹೊರ ಭಾಗದಲ್ಲಿ ಎಲ್ಇಡಿ ಮಾರ್ಗಫಲಕ, ಪ್ರಯಾಣಿಕರು ಲಗೆಜ್ ಇಡಲು ದೊಡ್ಡದಾದ ಸ್ಥಳದ ವ್ಯವಸ್ಥೆ ಮಾಡಲಾಗಿದೆ.

ಜಿಲ್ಲಾ ಕೇಂದ್ರಗಳಿಗೆ ಸಂಪರ್ಕ

ಅಶ್ವಮೇಧ ಕ್ಲಾಸಿಕ್​ ಬಸ್​​​ಗಳು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರದಿಂದ ರಾಜಧಾನಿಗೆ ಸಂಪರ್ಕ ಕಲ್ಪಿಸುವ ಪಾಯಿಂಟ್ ಟೂ ಪಾಯಿಂಟ್ ಎಕ್ಸ್‌ಪ್ರೆಸ್ ಬಸ್ಸುಗಳಾಗಿವೆ. ಮಹಿಳೆಯರು ಈ ಬಸ್ಸುಗಳಲ್ಲೂ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.

ಅಶ್ವಮೇಧ ಬಸ್​ಗಳಲ್ಲೂ ಉಚಿತದ ಗ್ಯಾರಂಟಿ!

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಚುನಾವಣಾ ಪೂರ್ವ ನೀಡಿದ್ದ ಭರವಸೆಯಂತೆ ಮಹಿಳೆಯರಿಗೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆ ಜಾರಿಗೊಳಿಸಿತ್ತು. ಸ್ಲೀಪರ್, ಐರಾವತ ಕ್ಲಬ್​ ಕ್ಲಾಸ್​, ಅಂಬಾರಿಯಂಥ ವಿಶೇಷ ಬಸ್​​ಗಳನ್ನು ಹೊರತುಪಡಿಸಿ ಇತರ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಲಾಗಿದೆ. ಅದರಂತೆ, ಇದೀಗ ಅಶ್ವಮೇಧ ಬಸ್​ಗಳಲ್ಲೂ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: ಅಂತರ್ಜಲ ಮಟ್ಟ ಕುಸಿತ: ಬೆಂಗಳೂರಿನ ಈ ಪ್ರದೇಶಗಳಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಬೀಗ

ಸದ್ಯ ನೂರು ಬಸ್​ಗಳಿಗೆ ಚಾಲನೆ ನೀಡಲಾಗಿದ್ದು, ಇವು ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಿಗೆ ಕಾರ್ಯಾಚರಣೆ ಆರಂಭಿಸಲಿವೆ. ಮುಂದಿನ ದಿನಗಳಲ್ಲಿ ಒಟ್ಟು ಸಾವಿರ ಅಶ್ವಮೇಧ ಬಸ್​ಗಳು ಕೆಎಸ್​ಆರ್​ಟಿಸಿಗೆ ಬರಲಿದ್ದು, ರಾಜ್ಯದಾದ್ಯಂತ ಕಾರ್ಯಾಚರಣೆ ಆರಂಭಿಸಲಿವೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:41 am, Mon, 5 February 24

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು