AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC Package Tour: ಜೋಗ ಜಲಪಾತ ವೀಕ್ಷಣೆಗೆ ಕೆಎಸ್​ಆರ್​ಟಿಸಿಯಿಂದ ಊಟ ಸಹಿತ ಟೂರ್​ ಪ್ಯಾಕೇಜ್​, ಇಲ್ಲಿದೆ ಸಮಯ, ದರ ವಿವರ

ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲಿ ಮಳೆರಾಯ ಆರ್ಭಟ ಜೋರಾಗಿದೆ. ಇದರಿಂದ ಜೋಗ ಜಲಪಾತ ಹಾಲಿನಂತೆ ಪ್ರಪಾತಕ್ಕೆ ಧುಮ್ಮುಕ್ಕುತ್ತಿದೆ. ಮುಂಗಾರಿನ ವೇಳೆ ಜಲಪಾತವನ್ನು ನೋಡ ಬಯಸಿದರೆ ನಿಮಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಊಟ, ತಿಂಡಿ ಸಹಿತವಾಗಿ ವಿಶೇಷ ಟೂರ್​ ಪ್ಯಾಕೇಜ್​ ಘೋಷಿಸಿದೆ.

KSRTC Package Tour: ಜೋಗ ಜಲಪಾತ ವೀಕ್ಷಣೆಗೆ ಕೆಎಸ್​ಆರ್​ಟಿಸಿಯಿಂದ ಊಟ ಸಹಿತ ಟೂರ್​ ಪ್ಯಾಕೇಜ್​, ಇಲ್ಲಿದೆ ಸಮಯ, ದರ ವಿವರ
ಕೆಎಸ್​ಆರ್​ಟಿಸಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Jul 17, 2024 | 12:17 PM

Share

ಬೆಂಗಳೂರು, ಜುಲೈ 17: ಮಲೆನಾಡಿನ ಹಚ್ಚ ಹಸಿರಿನ ಮಧ್ಯೆ ಜೋಗ ಜಲಪಾತ (Jog Falls) ಭೋರ್ಗರೆಯುತ್ತ ಧುಮ್ಮುಕ್ಕುತ್ತಿದೆ. ಹಾಲಿನಂತೆ ಪ್ರಪಾತಕ್ಕೆ ಧುಮ್ಮುಕ್ಕುವ ಜಲಪಾತದ ಸೌಂದರ್ಯವನ್ನು ಮಳೆಗಾಲದಲ್ಲಿ ನೋಡುವುದೇ ಆನಂದದ ಸಂಗತಿ. ಮುಂಗಾರಿನ ವೇಳೆ ಜಲಪಾತವನ್ನು ನೋಡ ಬಯಸಿದರೆ ನಿಮಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಊಟ, ತಿಂಡಿ ಸಹಿತವಾಗಿ ವಿಶೇಷ ಟೂರ್​ ಪ್ಯಾಕೇಜ್​ ಘೋಷಿಸಿದೆ.

ವಾರಾಂತ್ಯ ಶುಕ್ರವಾರ (ಜು.19) ಮತ್ತು ಶನಿವಾರ (ಜು.20) ಎರಡು ದಿನವು ಕೆಎಸ್​ಆರ್​​ಟಿಸಿಯ ನಾನ್​ ಎಸಿ ಸ್ಲೀಪರ್​ ಬಸ್​ಗಳು ಪ್ರವಾಸಿಗರನ್ನು ಕರೆದುಕೊಂಡು ಹೋಗಿ, ಮರಳಿ ಕರೆತರುತ್ತವೆ. ಒಬ್ಬರಿಗೆ 3 ಸಾವಿರ ರೂ. ( 6 ರಿಂದ 12 ವರ್ಷದವರಿಗೆ 2,800 ರೂ.) ದರ ನಿಗದಿ ಮಾಡಿದೆ.

ಟೂರ್​ ಸಮಯ ವಿವರ

ರಾತ್ರಿ 10:30 ವರೆಗೆ ಬೆಂಗಳೂರಿನಿಂದ ಹೊರಡುವ ಬಸ್​ ನಸುಕಿನ ಜಾವ 5:30ಕ್ಕೆ ಸಾಗರ ತಲುಪಲಿದೆ. ನಂತರ ಹೋಟೆಲ್​ನಲ್ಲಿ ಫ್ರೆಶ್​ ಅಪ್​ ಹಾಗೂ ವಿಶ್ರಾಂತಿಗೆ ಬೆಳಗ್ಗೆ 7 ಗಂಟೆವರೆಗೆ ಸಮಯವಿರುತ್ತದೆ. ಬಳಿಕ ಬೆಳಗ್ಗೆ 7:15ಕ್ಕೆ ಉಪಹಾರ ತಿಂದು ಅಲ್ಲಿಂದ 7:30ಕ್ಕೆ ವರದಹಳ್ಳಿ ತಲುಪಲಿದೆ. ನಂತರ ಅರ್ಧ ಗಂಟೆಯ ಆಸು ಪಾಸಿನಲ್ಲಿ ವರದಮೂಲದಿಂದ ಇಕ್ಕೇರಿ, ಕೆಳದಿ, ಸಾಗರಕ್ಕೆ ಬಸ್​ ಬರಲಿದೆ.

ಸಾಗರದಲ್ಲಿ 1:15ಕ್ಕೆ ಮಧ್ಯಾಹ್ನದ ಊಟ ಮುಗಿಸಿಕೊಂಡು ಮಧ್ಯಾಹ್ನ 2 ಗಂಟೆಗೆ ಜೋಗ ತಲುಪಲಿದೆ. ಸಾಯಂಕಾಲ 5:15ಕ್ಕೆ ಸುಮಾರಿಗೆ ಜೋಗದಿಂದ ಹೊರಟು 6 ಗಂಟೆ ಹೊತ್ತಿಗೆ ಸಾಗರ ತಲುಪಲಿದೆ. ಸಾಗರದಲ್ಲಿ ಒಂದು ಗಂಟೆ ಕಾಲ ಶಾಪಿಂಗ್​ ಮಾಡಿ, ರಾತ್ರಿ ಊಟ ಅಲ್ಲಿಯೇ ಮುಗಿಸಿಕೊಂಡು, 11 ಗಂಟೆಗೆ ಬಸ್​ ಸಾಗರದಿಂದ ಹೊರಟು ನಸುಕಿನ ಜಾವ 5ಕ್ಕೆ ಬೆಂಗಳೂರು ತಲುಪಲಿದೆ.

ಇದನ್ನೂ ಓದಿ: ಬಿಎಂಟಿಸಿಯಿಂದ ಚಿಕ್ಕಬಳ್ಳಾಪುರ ರೌಂಡ್ಸ್: ಈಶಾ ಫೌಂಡೇಶನ್​ ಸೇರಿದಂತೆ 5 ಪ್ರವಾಸಿ ತಾಣಗಳ ಸುತ್ತಾಟ

ಇದರೊಂದಿಗೆ ಕೆಎಸ್​ಆರ್​ಟಿಸಿ ಬೆಂಗಳೂರಿನಿಂದ ಸೋಮನಾಥಪುರ, ತಲಕಾಡು, ಮಧ್ಯರಂಗ, ಭರಚುಕ್ಕಿ, ಗಗನಚುಕ್ಕಿ ಜಲಪಾತಕ್ಕೂ ಟೂರ್​ ಪ್ಯಾಕೇಜ್​ ಘೋಷಿಸಿದೆ. ಒಬ್ಬರಿಗೆ 500 ರೂ. (6 ರಿಂದ 12 ವರ್ಷದವರಿಗೆ 350 ರೂ.) ನಿಗದಿ ಮಾಡಿದೆ.

ಟೂರ್​ ಸಮಯ ವಿವರ

ಬೆಂಗಳೂರಿನಿಂದ ನಸುಕಿನ ಜಾವ 6:30ಕ್ಕೆ ಹೊರಟು ಬೆಳಗ್ಗೆ 8:30ಕ್ಕೆ ಬಸ್​ ಮದ್ದೂರು ತಲುಪಲಿದೆ. ಮದ್ದೂರಿನಲ್ಲಿ ಉಪಹಾರ ಮಾಡಿಕೊಂಡು ಸೋಮನಾಥಪುರಕ್ಕೆ ಬೆಳಗ್ಗೆ 9:45ಕ್ಕೆ ತಲುಪಲಿದೆ. ಅಲ್ಲಿಂದ 1:45ಕ್ಕೆ ಹೊರಟು ತಲಕಾಡಿಗೆ ತಲುಪಲಿದೆ. ತಲಕಾಡು ಪಂಚಲಿಂಗ ದರ್ಶನ ಮತ್ತು ಊಟ ಮುಗಿಸಿಕೊಂಡು ಮಧ್ಯಾಹ್ನ 3 ಗಂಟೆಗೆ ಹೊರಟು ತಲಕಾಡಿನ ಮಧ್ಯರಂಗ, ರಂಗನಾಥ ಸ್ವಾಮಿ ದರ್ಶನ ಪಡೆದು ಭರಚುಕ್ಕಿಗೆ ಸಾಯಂಕಾಲ 5 ಗಂಟೆಗೆ ಬಸ್​ ಬರಲಿದೆ. ನಂತರ ಭರಚುಕ್ಕಿಯಿಂದ ಗಗನಚುಕ್ಕಿ ತೆರಳಲಿದೆ. ಗಗನಚುಕ್ಕಿ ನೋಡಿಕೊಂಡು ರಾತ್ರಿ 10 ಗಂಟೆಗೆ ಬೆಂಗಳೂರಿಗೆ ಬಸ್​ ಬರಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್