AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್​ಆರ್​ಟಿಸಿ ಮುಡಿಗೆ ಮತ್ತೆ 3 ರಾಷ್ಟ ಮಟ್ಟದ ಪ್ರಶಸ್ತಿಗಳು

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) 2023-24ನೇ ಸಾಲಿನ ರಾಷ್ಟ್ರೀಯ ಸಾರ್ವಜನಿಕ ಸಾರಿಗೆ ಪ್ರಶಸ್ತಿಗಳಲ್ಲಿ ಮೂರು ಪ್ರಶಸ್ತಿಗಳನ್ನು ಗೆದ್ದಿದೆ. ಅಶ್ವಮೇಧ ಬ್ರ್ಯಾಂಡಿಂಗ್, ಉದ್ಯೋಗಿ ಕಲ್ಯಾಣ ಯೋಜನೆಗಳು ಮತ್ತು ಗಣಕೀಕರಣ ಉಪಕ್ರಮಗಳಿಗೆ ಈ ಪ್ರಶಸ್ತಿಗಳು ಲಭಿಸಿವೆ. ನ್ಯೂ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. 26 ವರ್ಷಗಳ ಸೇವೆ ಸಲ್ಲಿಸಿದ ಚಾಲಕ-ನಿರ್ವಾಹಕಿಯೊಬ್ಬರನ್ನು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಗೌರವಿಸಲಾಯಿತು.

ಕೆಎಸ್​ಆರ್​ಟಿಸಿ ಮುಡಿಗೆ ಮತ್ತೆ 3 ರಾಷ್ಟ ಮಟ್ಟದ ಪ್ರಶಸ್ತಿಗಳು
ಕೆಎಸ್​ಆರ್​ಟಿಸಿ
ವಿವೇಕ ಬಿರಾದಾರ
|

Updated on: Mar 09, 2025 | 10:10 AM

Share

ಬೆಂಗಳೂರು, ಮಾರ್ಚ್​ 09: ದೇಶದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ (ASRTU) 2023-24ನೇ ಸಾಲಿನ ಒಟ್ಟು ಮೂರು ರಾಷ್ಟ್ರೀಯ ಸಾರ್ವಜನಿಕ ಬಸ್ ಸಾರಿಗೆ ಪ್ರಶಸ್ತಿಗಳು (National Transport Excellence Award) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)  ಲಭಿಸಿವೆ.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟ (ASRTU)ದ ವ್ಯಾಪ್ತಿಯಲ್ಲಿ ದೇಶದ 62 ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ಸದಸ್ಯತ್ವವನ್ನು ಹೊಂದಿವೆ. ಸದರಿ ಒಕ್ಕೂಟವು 13ನೇ ಆಗಸ್ಟ್ 1965 ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು ,ಭಾರತ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದ ನಿರ್ದೇಶನದ ಅನುಸಾರ ಕಾರ್ಯನಿರ್ವಹಿಸುತ್ತದೆ. ಈ ಸಂಸ್ಥೆಯು 59 ವರ್ಷಗಳ ಅನುಭವವನ್ನು ಹೊಂದಿದ್ದು, ದೇಶದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಕೆಎಸ್​ಆರ್​ಟಿ‌‌ಸಿ‌ಗೆ ಅಶ್ವಮೇಧ ಬ್ರ್ಯಾಂಡಿಂಗ್ ಹಾಗೂ ವರ್ಚಸ್ಸು ಅಭಿವೃದ್ಧಿ, ಕಾರ್ಮಿಕರ ಕಲ್ಯಾಣಕ್ಕಾಗಿ ಕೈಗೊಂಡಿರುವ ವಿನೂತನ ಯೋಜನೆಗಳು ಹಾಗೂ ಗಣಕೀಕರಣ ಉಪಕ್ರಮಗಳಿಗಾಗಿ*ಮೂರು ಪ್ರಶಸ್ತಿಗಳು ಲಭಿಸಿದೆ.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟ (ASRTU)ದ ವತಿಯಿಂದ ನವದೆಹಲಿಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಡಾ. ಕಿರಣ್ ಬೇಡಿ IPS(ನಿವೃತ್ತ ) ರವರು ಪ್ರಶಸ್ತಿ ಪ್ರಧಾನ ಮಾಡಿದ್ದು, ಈ ಸಂದರ್ಭದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರು ಪ್ರಿಯಾಂಗ ಭಾಆಸೇ, ನಿರ್ವಾಹಕ ನಿರ್ದೇಶಕರು, ASRTU ಸೂರ್ಯಕಿರಣ್ ಉಪಸ್ಥಿತರಿದ್ದು, ಉಪಮುಖ್ಯ ಸಂಚಾರ ವ್ಯವಸ್ಥಾಪಕರು ಗುರುರಾಜ ಹೆಚ್, ಹಾಗೂ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ ರಾಧಾರವರು ನಿಗಮದ ಪರವಾಗಿ ಪ್ರಶಸ್ತಿಗಳನ್ನು ಸ್ವೀಕರಿಸಿದ್ದಾರೆ. ಇದೆ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಶ್ರೀಮತಿ ಸುಲೋಚನಾ ದೇವಿ ಚಾಲಕ ಕಂ ನಿರ್ವಹಕಿ, ಆನೇಕಲ್ ಘಟಕರವರು ಸಾರಿಗೆ ಸಂಸ್ಥೆಯಲ್ಲಿ ಸಲ್ಲಿಸಿರುವ 26 ವರ್ಷಗಳ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ