AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ವಿವಿಧೆಡೆ ಸಾರಿಗೆ ನೌಕರರಿಗೆ ನೋಟಿಸ್: ಗದಗದಲ್ಲಿ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿದ ಕಂಡಕ್ಟರ್

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ನಿಗಮದ ವಸತಿ ಗೃಹಗಳಲ್ಲಿ ವಾಸಿಸುತ್ತಿರುವ ಸಿಬ್ಬಂದಿಗೆ ನೊಟೀಸ್ ಜಾರಿ ಮಾಡಿದ್ದ ಅಧಿಕಾರಿಗಳು ಮನೆ ಖಾಲಿ ಮಾಡುವಂತೆ ಸೂಚಿಸಿದ್ದರು. ಬಸ್​ ಮೇಲೆ ಕಲ್ಲುತೂರಾಟದಂಥ ಕೆಲ ಪ್ರಕರಣಗಳೂ ಅಲ್ಲಲ್ಲಿ ವರದಿಯಾಗಿವೆ.

ರಾಜ್ಯದ ವಿವಿಧೆಡೆ ಸಾರಿಗೆ ನೌಕರರಿಗೆ ನೋಟಿಸ್: ಗದಗದಲ್ಲಿ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿದ ಕಂಡಕ್ಟರ್
ಮುಷ್ಕರ ನಿರತ ಸಿಬ್ಬಂದಿ ಮನೆಗೆ ನೋಟಿಸ್​
Ghanashyam D M | ಡಿ.ಎಂ.ಘನಶ್ಯಾಮ
|

Updated on: Apr 08, 2021 | 10:55 PM

Share

ಬೆಂಗಳೂರು: ಸಾರಿಗೆ ನಿಗಮಗಳ ಸಿಬ್ಬಂದಿ ನಡೆಸುತ್ತಿರುವ ಮುಷ್ಕರ ಗುರುವಾರ ಬಿರುಸಾಗಿತ್ತು. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ನಿಗಮದ ವಸತಿ ಗೃಹಗಳಲ್ಲಿ ವಾಸಿಸುತ್ತಿರುವ ಸಿಬ್ಬಂದಿಗೆ ನೊಟೀಸ್ ಜಾರಿ ಮಾಡಿದ್ದ ಅಧಿಕಾರಿಗಳು ಮನೆ ಖಾಲಿ ಮಾಡುವಂತೆ ಸೂಚಿಸಿದ್ದರು. ಬಸ್​ ಮೇಲೆ ಕಲ್ಲುತೂರಾಟದಂಥ ಕೆಲ ಪ್ರಕರಣಗಳೂ ಅಲ್ಲಲ್ಲಿ ವರದಿಯಾಗಿವೆ. ಈ ನಡುವೆ ಹಿರಿಯ ಅಧಿಕಾರಿಗಳ ಕಿರುಕುಳದ ಆರೋಪದ ಮೇಲೆ ಕಂಡಕ್ಟರ್ ಒಬ್ಬರು ವಿಷ ಸೇವಿಸಿದ ಪ್ರಕರಣವೂ ವರದಿಯಾಗಿದೆ.

ಸಾರಿಗೆ ಇಲಾಖೆಯ ಅಧಿಕಾರಿಗಳ ಕಿರುಕುಳದಿಂದ ಬೇಸತ್ತಿದ್ದೇನೆ ಎಂದು ಗದಗದಲ್ಲಿ ವಸಂತ್ ಎಂಬ ಕಂಡಕ್ಟರ್  ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥರಾದ ಅವರನ್ನು ತಕ್ಷಣ ಗದಗದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆಸ್ಪತ್ರೆ ಬಳಿ ಜಮಾಯಿಸಿದ ಸಾರಿಗೆ ಇಲಾಖೆ ನೌಕರರು ಸರ್ಕಾರ, ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನೌಕರ ಅಮಾನತು ಬಸ್​ ಅಡ್ಡಗಟ್ಟಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಸತ್ಯಪ್ಪ ಎಂಬಾತನನ್ನು KSRTC ಅಮಾನತು ಮಾಡಿದೆ. ಬುಧವಾರ ರಾತ್ರಿ ಶ್ರೀನಿವಾಸಪುರದಿಂದ ಕೋಲಾರಕ್ಕೆ ಬರುತ್ತಿದ್ದ ಬಸ್ ಅಡ್ಡಗಟ್ಟಿ ಶ್ರೀನಿವಾಸ್ ಎಂಬ ಚಾಲಕನ ಮೇಲೆ ಹಲ್ಲೆ ನಡೆಸಿ, ಪೆಟ್ರೋಲ್ ಎರಚಿದ್ದ ಆರೋಪ ಮಾಡಲಾಗಿದೆ.

ಹುಬ್ಬಳ್ಳಿ: 21 ಸಿಬ್ಬಂದಿಗೆ ನೋಟಿಸ್ ಹುಬ್ಬಳ್ಳಿಯಲ್ಲಿ ವಾಯವ್ಯ ಸಾರಿಗೆ ನಿಗಮದ 21 ಸಿಬ್ಬಂದಿಗೆ ನೋಟಿಸ್​ ಜಾರಿ ಮಾಡಲಾಗಿದೆ. ಹುಬ್ಬಳ್ಳಿ-ಧಾರವಾಡ ನಗರ ವಿಭಾಗದಿಂದ ಕ್ವಾರ್ಟರ್ಸ್​ ಖಾಲಿ ಮಾಡುವಂತೆ ಸಿಬ್ಬಂದಿಗೆ ನೋಟಿಸ್​ ನೀಡಲಾಗಿದೆ. ನಿಗಮದ 12 ಟ್ರೈನಿ ನೌಕರರಿಗೆ ವಜಾಗೊಳಿಸುವುದಾಗಿ ನೋಟಿಸ್​ ನೀಡಲಾಗಿದೆ.

ಸಂಡೂರು: ಕಲ್ಲು ತೂರಿದ್ದ ಚಾಲಕರ ಬಂಧನ ಕೆಎಸ್​​ಆರ್​ಟಿಸಿ ಬಸ್​ ಮೇಲೆ ಕಲ್ಲು ತೂರಿದ್ದ ಶಿವಕುಮಾರ್ ಮತ್ತು ನಾಗರಾಜ್ ಎಂಬುವವರನ್ನು ಸಂಡೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮುಷ್ಕರ ಬೆಂಬಲಿಸುವಂತೆ ಒತ್ತಾಯಿಸಿ ಸಂಡೂರುನಿಂದ ದೋಣಿಮಲೈಗೆ ತೆರಳುತ್ತಿದ್ದ ಸರ್ಕಾರಿ ಬಸ್ ಮೇಲೆ ಬಾಬಯ್ಯ ಕ್ರಾಸ್ ಬಳಿ ಕಲ್ಲು ತೂರಿದ್ದ ಆರೋಪ ಇವರ ಮೇಲಿದೆ. ಸಂಡೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನಕಪುರ: 24 ಸಿಬ್ಭಂದಿಗೆ ನೋಟಿಸ್ ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರಿಗೆ ರಾಮನಗರ ವಿಭಾಗೀಯ‌ ನಿಯಂತ್ರಣಾಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ. ಕನಕಪುರದ ಸಾರಿಗೆ ಇಲಾಖೆ ವಸತಿ ಗೃಹದಲ್ಲಿದ್ದ 24 ನೌಕರರ ಮನೆಗಳಿಗೆ ಅಧಿಕಾರಿಗಳು ನೋಟಿಸ್ ಅಂಟಿಸಿದ್ದಾರೆ. ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು. ಕೆಲಸಕ್ಕೆ ಹಾಜರಾಗದಿದ್ರೆ ಕ್ವಾರ್ಟರ್ಸ್​​ ಖಾಲಿ ಮಾಡಬೇಕು ಎಂದು ಸೂಚಿಸಿದ್ದಾರೆ.

(KSRTC BMTC bus strike Karnataka road transport corporation crisis)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ