AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ನಿಗಮಗಳ ಯಾವ ನೌಕರರು ಆತ್ಮಹತ್ಯೆ ಮಾಡಿಕೊಳ್ಳಬಾರದು: ಕೋಡಿಹಳ್ಳಿ ಚಂದ್ರಶೇಖರ್

ಸಾರಿಗೆ ನೌಕರರ ಆತ್ಮಹತ್ಯೆ ವಿಷಾದದ ಸಂಗತಿ. ಸಾರಿಗೆ ನಿಗಮಗಳ ನೌಕರರು ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂದು ಸಾರಿಗೆ ನಿಗಮಗಳ ಸಂಘಟನೆಗಳು ಕರೆ ನೀಡಿರುವ ಮುಷ್ಕರದ ನೇತೃತ್ವ ವಹಿಸಿರುವ ಕೋಡಿಹಳ್ಳಿ ಚಂದ್ರಶೇಖರ್ ವಿನಂತಿಸಿದರು.

ಸಾರಿಗೆ ನಿಗಮಗಳ ಯಾವ ನೌಕರರು ಆತ್ಮಹತ್ಯೆ ಮಾಡಿಕೊಳ್ಳಬಾರದು: ಕೋಡಿಹಳ್ಳಿ ಚಂದ್ರಶೇಖರ್
ಕೋಡಿಹಳ್ಳಿ ಚಂದ್ರಶೇಖರ್
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on: Apr 09, 2021 | 3:49 PM

ಬೆಂಗಳೂರು: ಸಮಸ್ಯೆಗಳು ಎದುರಾದಾಗ ದಿಟ್ಟತನದಿಂದ ಹೋರಾಡಿ ಪರಿಹಾರ ಕಂಡುಕೊಳ್ಳಬೇಕೇ ವಿನಃ ಹಿಂದೆ ಸರಿಯಬಾರದು. ಇದು ಎಲ್ಲ ನೌಕರರಲ್ಲಿ ನನ್ನ ಮನವಿ. ಸಾರಿಗೆ ನೌಕರರ ಆತ್ಮಹತ್ಯೆ ವಿಷಾದದ ಸಂಗತಿ. ಸಾರಿಗೆ ನಿಗಮಗಳ ನೌಕರರು ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂದು ಸಾರಿಗೆ ನಿಗಮಗಳ ಸಂಘಟನೆಗಳು ಕರೆ ನೀಡಿರುವ ಮುಷ್ಕರದ ನೇತೃತ್ವ ವಹಿಸಿರುವ ಕೋಡಿಹಳ್ಳಿ ಚಂದ್ರಶೇಖರ್ ವಿನಂತಿಸಿದರು.

ನಗರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು ಸರ್ಕಾರ ವೇತನ ಶ್ರೇಣಿಯ ವ್ಯತ್ಯಾಸ ಮಾಡುತ್ತಿದೆ. ಸಾರಿಗೆ ನೌಕರರ ವಿಚಾರದಲ್ಲಿ ತಾರತಮ್ಯ ಧೋರಣೆ ಅನುಸರಿಸುತ್ತಿದೆ. ನಿನ್ನೆಯ ಸಭೆಯಲ್ಲಿ ಯಾವುದೇ ತೀರ್ಮಾನಗಳು ಆಗಿಲ್ಲ. ರಾಜ್ಯ ಸರ್ಕಾರ ನಮ್ಮ ಬೇಡಿಕೆಯನ್ನು ಈಡೇರಿಸಲೇಬೇಕು ಎಂದು ಒತ್ತಾಯಿಸಿದರು.

ಸಾರಿಗೆ ನೌಕರರಿಗೆ ಮನೆ ಖಾಲಿ ಮಾಡುವಂತೆ ಮತ್ತು ಕೆಲಸ ಮಾಡದಿದ್ದರೆ ಸೇವೆಯಿಂದ ವಜಾ ಮಾಡುತ್ತೇವೆ ಎಂದು ನೋಟಿಸ್ ನೀಡಿ ಸರ್ಕಾರ ಬೆದರಿಸಲು ಯತ್ನಿಸುತ್ತಿದೆ. ಇಂಥವಕ್ಕೆ ಸಾರಿಗೆ ನೌಕರರು ಹೆದರುವುದಿಲ್ಲ ಎಂದು ಹೇಳಿದರು. ಸಾರಿಗೆ ನಿಗಮಗಳನ್ನು ಖಾಸಗೀಕರಣ ಮಾಡುವ ಹುನ್ನಾರ ನಡೆಯುತ್ತಿದೆ. ಕೇಂದ್ರ ಸರ್ಕಾರವು ಕೃಷಿ ಕ್ಷೇತ್ರವನ್ನು ಖಾಸಗೀಕರಣ ಮಾಡುತ್ತಿದೆ. ರಾಜ್ಯ ಸರ್ಕಾರ ಸಾರಿಗೆ ನಿಗಮಗಳನ್ನು ಖಾಸಗೀಕರಣ ಮಾಡುತ್ತಿದೆ. ಖಾಸಗೀಕರಣ ತಪ್ಪಿಸಲು ನಾವು ಪ್ರಯತ್ನ ಮಾಡುತ್ತಿದ್ದೇವೆ. ನಮ್ಮ ಪ್ರಯತ್ನ, ಮುಷ್ಕರ, ಪ್ರತಿಭಟನೆ ಮುಂದುವರಿಯಲಿದೆ ಎಂದು ಕೋಡಿಹಳ್ಳಿ ಚಂದ್ರಶೇಖರ್​ ಘೋಷಿಸಿದರು.

‘ವಿದ್ಯಾರ್ಥಿನಿ ನೋಟಿಸ್​ಗೆ ಬಿಎಂಟಿಸಿ ಜವಾಬ್ದಾರಿ’ ‘ಬಿಎಂಟಿಸಿ ನೌಕರರು ಮುಷ್ಕರ ನಡೆಸುತ್ತಿರುವ ನನಗೆ ತೊಂದರೆಯಾಗಿದೆ’ ಎಂದು ವಿದ್ಯಾರ್ಥಿನಿಯೊಬ್ಬರು ₹ 10 ಲಕ್ಷ ಪರಿಹಾರ ಕೇಳಿ ಲೀಗಲ್ ನೋಟಿಸ್ ನೀಡಿರುವ ವಿಚಾರದ ಪ್ರತಿಕ್ರಿಯಿಸಿದ ಕೋಡಿಹಳ್ಳಿ ಚಂದ್ರಶೇಖರ್, ಆಕೆಗೆ ಆಗಿರುವ ತೊಂದರೆಗೆ ಬಿಎಂಟಿಸಿಯೇ ಜವಾಬ್ದಾರಿ. ಪಾಸ್‌ಗೆ ಹಣ ಪಡೆದಿರುವುದು ಬಿಎಂಟಿಸಿ. ಯಾವುದೇ ಲಾಭ, ನಷ್ಟವಾದರೂ ಅದಕ್ಕೆ ಅವರೇ ಹೊಣೆ. ವಿದ್ಯಾರ್ಥಿಗಳು ಕೇಳುವುದರಲ್ಲಿ ನ್ಯಾಯ ಇದೆ. ವೇತನ ಹೆಚ್ಚಳಕ್ಕೆ ನಾವು ಮುಷ್ಕರ ಮಾಡುತ್ತಿದ್ದೇವೆ. ವಿದ್ಯಾರ್ಥಿಗಳ ಸಮಸ್ಯೆ BMTC ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ಸಾರಿಗೆ ನೌಕರ ನೇಣಿಗೆ ಶರಣು ಬೆಳಗಾವಿ: ಸಾರಿಗೆ ಸಚಿವ ಲಕ್ಷ್ಮಣ ಸವದಿ ತವರು ಜಿಲ್ಲೆಯಲ್ಲೇ ಸಾರಿಗೆ ನೌಕರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ಸಾರಿಗೆ ನೌಕರ ಶಿವಕುಮಾರ್ ನೀಲಗಾರ(40) ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಕರ್ತವ್ಯಕ್ಕೆ ಹಾಜರಾಗುವಂತೆ ಅಧಿಕಾರಿಗಳ ಕಿರುಕುಳಕ್ಕೆ ನೊಂದು ಸಾರಿಗೆ ನೌಕರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಸಾರಿಗೆ ನೌಕರರನ್ನು ಕರೆದು ಸರ್ಕಾರ ಚರ್ಚಿಸಬೇಕು ಸವದತ್ತಿಯಲ್ಲಿ ಸಾರಿಗೆ ನೌಕರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಸಾರಿಗೆ ಸಚಿವರ ಜಿಲ್ಲೆಯಲ್ಲೇ ಹೀಗಾದರೆ ರಾಜ್ಯದ ಬೇರೆ ಜಿಲ್ಲೆಗಳ ಪರಿಸ್ಥಿತಿ ಏನೆಂದು ಡಿಕೆಶಿ ಪ್ರಶ್ನೆಸಿದ್ದಾರೆ. ಸಾರಿಗೆ ನೌಕರರನ್ನು ಕರೆದು ಸರ್ಕಾರ ಚರ್ಚಿಸಬೇಕು. ನೌಕರರನ್ನು ಕುಟುಂಬ ಸದಸ್ಯರಂತೆ ನೋಡಿಕೊಳ್ಳಿ. ಎಲ್ಲಾ ನೌಕರರ ಮೇಲೆ ಸಂಶಯ ಪಡಬೇಡಿ ಎಂದು ಡಿಕೆ ಶಿವಕುಮಾರ್ ಸರ್ಕಾರಕ್ಕೆ ತರಾಟೆಗೆ ತೆಗೆದುಕೊಂಡ್ರು.

ಇದನ್ನೂ ಓದಿ: ಸರಕಾರ ಮುಷ್ಕರ ನಿರತರನ್ನ ಬಹಳ ಅಸಡ್ಡೆಯಿಂದ ನೋಡುತ್ತಿದೆ: ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ

ಇದನ್ನೂ ಓದಿ: ಸಾರಿಗೆ ಮುಷ್ಕರ; ಕೋಡಿಹಳ್ಳಿ ಚಂದ್ರಶೇಖರ್​ಗೆ 10 ಲಕ್ಷ ರೂ. ಪರಿಹಾರ ಕೇಳಿ ಲೀಗಲ್ ನೋಟಿಸ್ ನೀಡಿದ ಬಿ.ಇ. ವಿದ್ಯಾರ್ಥಿನಿ

KSRTC BMTC Bus Strike Kodihalli Chandrashekar replies on Suicide Attempts of Employees

ಭಾರತ-ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ; ಹಳೇ ರಾಗ ಹಾಡಿದ ಟ್ರಂಪ್
ಭಾರತ-ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ; ಹಳೇ ರಾಗ ಹಾಡಿದ ಟ್ರಂಪ್
ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಅಣ್ಣಾವ್ರ ಮೊಮ್ಮಗನಿಗೆ ದುನಿಯಾ ವಿಜಿ ಆಕ್ಷನ್ ಕಟ್, ಭರದಿಂದ ಸಾಗಿದೆ ಶೂಟಿಂಗ್
ಅಣ್ಣಾವ್ರ ಮೊಮ್ಮಗನಿಗೆ ದುನಿಯಾ ವಿಜಿ ಆಕ್ಷನ್ ಕಟ್, ಭರದಿಂದ ಸಾಗಿದೆ ಶೂಟಿಂಗ್
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮೇಘಸ್ಫೋಟ; ಸೈಂಜ್ ಕಣಿವೆಯಲ್ಲಿ ಪ್ರವಾಹ
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮೇಘಸ್ಫೋಟ; ಸೈಂಜ್ ಕಣಿವೆಯಲ್ಲಿ ಪ್ರವಾಹ
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ನೀರು ಬಿಡೋದಿಲ್ಲ ಅಂತ ಸ್ಟೇಟಸ್​ ಹಾಕಿದ್ದ BJP ಮುಖಂಡನ ಮೇಲೆ ಹಲ್ಲೆ
ನೀರು ಬಿಡೋದಿಲ್ಲ ಅಂತ ಸ್ಟೇಟಸ್​ ಹಾಕಿದ್ದ BJP ಮುಖಂಡನ ಮೇಲೆ ಹಲ್ಲೆ