AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯಿಂದ ಖಾಸಗಿ ಬಸ್​ ಟಿಕೆಟ್ ದರದಲ್ಲಿ ಏರಿಕೆ ಸಾಧ್ಯತೆ.. ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಸಾಮಾನ್ಯ ದಿನದಲ್ಲಿ ₹600ರಿಂದ ₹700ರಷ್ಟಿರುವ ಖಾಸಗಿ ಬಸ್​ಗಳ ಟಿಕೆಟ್ ದರ ಇದೀಗ ₹1,200ರಿಂದ ₹1,300ಕ್ಕೆ ಏರಿಕೆಯಾಗಲಿದೆ ಎನ್ನಲಾಗುತ್ತಿದ್ದು, ಸರ್ಕಾರಿ ಬಸ್​ಗಳನ್ನು ನೆಚ್ಚಿಕೊಂಡ ಪ್ರಯಾಣಿಕರಿಗೆ ಇದು ತಾಳಲಾರದ ಹೊರೆಯಾಗಲಿದೆ.

ನಾಳೆಯಿಂದ ಖಾಸಗಿ ಬಸ್​ ಟಿಕೆಟ್ ದರದಲ್ಲಿ ಏರಿಕೆ ಸಾಧ್ಯತೆ.. ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ
ಕೆಎಸ್​ಆರ್​ಟಿಸಿ ಮತ್ತು ಖಾಸಗಿ ಬಸ್​
Skanda
| Edited By: |

Updated on: Apr 06, 2021 | 11:00 AM

Share

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಧೋರಣೆಯ ವಿರುದ್ಧ ಮುನಿಸಿಕೊಂಡಿರುವ ಕೆಎಸ್​ಆರ್​ಟಿಸಿ, ಬಿಎಂಟಿಸಿ ಸಾರಿಗೆ ನೌಕರರು ನಾಳೆಯಿಂದ ರಾಜ್ಯವ್ಯಾಪಿ ಮುಷ್ಕರ ನಡೆಸಲು ಸನ್ನದ್ಧರಾಗಿದ್ದಾರೆ. ಸರ್ಕಾರಿ ಬಸ್​ಗಳು ಸೇವೆಯನ್ನು ಸ್ಥಗಿತಗೊಳಿಸುತ್ತಿರುವುದರಿಂದ ಅದರ ಲಾಭ ಪಡೆಯಲು ಮುಂದಾದ ಖಾಸಗಿ ಬಸ್​ಗಳು ನಾಳೆಯಿಂದಲೇ ಟಿಕೆಟ್ ದರ ಏರಿಕೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಹೊರಜಿಲ್ಲೆ ಮತ್ತು ಹೊರರಾಜ್ಯಗಳಿಗೆ ತೆರಳುವ ಖಾಸಗಿ ಬಸ್​ ದರದಲ್ಲಿ ಏರಿಕೆ ಆಗಲಿದ್ದು, ಜನಸಾಮಾನ್ಯರಿಗೆ ಹೊರೆಯಾಗಲಿದೆ.

ಸಾಧಾರಣವಾಗಿ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಮನಸೋ ಇಚ್ಛೆ ದರ ಏರಿಸಿ ಪ್ರಯಾಣಿಕರಿಂದ ಹಣ ಪಡೆಯುವ ಖಾಸಗಿ ಬಸ್​ಗಳು ಇದೀಗ ರಾಜ್ಯ ಸಾರಿಗೆ ನೌಕರರ ಮುಷ್ಕರದ ವೇಳೆಯಲ್ಲಿ ಟಿಕೆಟ್ ದರ ಏರಿಕೆಗೆ ಮುಂದಾಗಿರುವುದು ಪ್ರಯಾಣಿಕರ ಜೇಬಿಗೆ ಕತ್ತರಿ ಪ್ರಯೋಗ ಆಗಲಿದೆ. ಬಿಜಾಪುರ, ಬಾಗಲಕೋಟೆ, ಹುಬ್ಬಳ್ಳಿ ಸೇರಿದಂತೆ ಬಹುತೇಕ ಎಲ್ಲಾ ಜಿಲ್ಲೆಗಳಿಗೆ ಹೋಗುವ ಖಾಸಗಿ ಬಸ್​ಗಳ ಪ್ರಯಾಣ ದರದಲ್ಲಿ ಈಗಾಗಲೇ ಏರಿಕೆಯಾಗಿದ್ದು, ನಾಳೆ ಇನ್ನಷ್ಟು ದರ ಏರುವ ಸಂಭವವಿದೆ.

ಸಾಮಾನ್ಯ ದಿನದಲ್ಲಿ ₹600ರಿಂದ ₹700ರಷ್ಟಿರುವ ಖಾಸಗಿ ಬಸ್​ಗಳ ಟಿಕೆಟ್ ದರ ಇದೀಗ ₹1,200ರಿಂದ ₹1,300ಕ್ಕೆ ಏರಿಕೆಯಾಗಲಿದೆ ಎನ್ನಲಾಗುತ್ತಿದ್ದು, ಸರ್ಕಾರಿ ಬಸ್​ಗಳನ್ನು ನೆಚ್ಚಿಕೊಂಡ ಪ್ರಯಾಣಿಕರಿಗೆ ಇದು ತಾಳಲಾರದ ಹೊರೆಯಾಗಲಿದೆ. ಖಾಸಗಿ ಬಸ್​ಗಳು ಹೀಗೆ ಪರಿಸ್ಥಿತಿಯ ಲಾಭ ಪಡೆದುಕೊಳ್ಳುವುದನ್ನು ನಿಯಂತ್ರಿಸಲಾಗದೆ ಅಸಹಾಯಕರಂತೆ ವರ್ತಿಸುವ ಸರ್ಕಾರ ಕಡೇ ಪಕ್ಷ ತನ್ನದೇ ನೌಕರರ ಸಮಸ್ಯೆಗಳನ್ನು ಬಗೆಹರಿಸಿ ಮುಷ್ಕರ ಆಗದಂತೆ ನೋಡಿಕೊಂಡರೆ ಜನಸಾಮಾನ್ಯರ ಮೇಲಿನ ಹೊರೆಯಾದರೂ ತಗ್ಗುತ್ತದೆ ಎನ್ನುವುದು ಬಹುತೇಕರ ಅಭಿಪ್ರಾಯ.

ಇದನ್ನೂ ಓದಿ: Bus Strike: ಇಂದು ಮಧ್ಯಾಹ್ನದಿಂದಲೇ ಬಿಎಂಟಿಸಿ ಬಸ್ ಸಂಚಾರ ಅನುಮಾನ; ನಾಳೆಯಿಂದ ಕರ್ನಾಟಕ ರಾಜ್ಯಾದ್ಯಂತ ಬಸ್​ ಬಂದ್? 

ನಾಳೆ ಸಾರಿಗೆ ಮುಷ್ಕರ ನಡೆದೇ ನಡೆಯುತ್ತೆ, ಖಾಸಗಿ ನೌಕರರಿಗೂ ಬಸ್ ಓಡಿಸದಂತೆ ಮನವಿ: ಕೋಡಿಹಳ್ಳಿ ಚಂದ್ರಶೇಖರ್

(KSRTC BMTC Bus Strike leads to hike in Private bus ticket price)

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ