AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯಿಂದ ಖಾಸಗಿ ಬಸ್​ ಟಿಕೆಟ್ ದರದಲ್ಲಿ ಏರಿಕೆ ಸಾಧ್ಯತೆ.. ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಸಾಮಾನ್ಯ ದಿನದಲ್ಲಿ ₹600ರಿಂದ ₹700ರಷ್ಟಿರುವ ಖಾಸಗಿ ಬಸ್​ಗಳ ಟಿಕೆಟ್ ದರ ಇದೀಗ ₹1,200ರಿಂದ ₹1,300ಕ್ಕೆ ಏರಿಕೆಯಾಗಲಿದೆ ಎನ್ನಲಾಗುತ್ತಿದ್ದು, ಸರ್ಕಾರಿ ಬಸ್​ಗಳನ್ನು ನೆಚ್ಚಿಕೊಂಡ ಪ್ರಯಾಣಿಕರಿಗೆ ಇದು ತಾಳಲಾರದ ಹೊರೆಯಾಗಲಿದೆ.

ನಾಳೆಯಿಂದ ಖಾಸಗಿ ಬಸ್​ ಟಿಕೆಟ್ ದರದಲ್ಲಿ ಏರಿಕೆ ಸಾಧ್ಯತೆ.. ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ
ಕೆಎಸ್​ಆರ್​ಟಿಸಿ ಮತ್ತು ಖಾಸಗಿ ಬಸ್​
Skanda
| Edited By: |

Updated on: Apr 06, 2021 | 11:00 AM

Share

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಧೋರಣೆಯ ವಿರುದ್ಧ ಮುನಿಸಿಕೊಂಡಿರುವ ಕೆಎಸ್​ಆರ್​ಟಿಸಿ, ಬಿಎಂಟಿಸಿ ಸಾರಿಗೆ ನೌಕರರು ನಾಳೆಯಿಂದ ರಾಜ್ಯವ್ಯಾಪಿ ಮುಷ್ಕರ ನಡೆಸಲು ಸನ್ನದ್ಧರಾಗಿದ್ದಾರೆ. ಸರ್ಕಾರಿ ಬಸ್​ಗಳು ಸೇವೆಯನ್ನು ಸ್ಥಗಿತಗೊಳಿಸುತ್ತಿರುವುದರಿಂದ ಅದರ ಲಾಭ ಪಡೆಯಲು ಮುಂದಾದ ಖಾಸಗಿ ಬಸ್​ಗಳು ನಾಳೆಯಿಂದಲೇ ಟಿಕೆಟ್ ದರ ಏರಿಕೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಹೊರಜಿಲ್ಲೆ ಮತ್ತು ಹೊರರಾಜ್ಯಗಳಿಗೆ ತೆರಳುವ ಖಾಸಗಿ ಬಸ್​ ದರದಲ್ಲಿ ಏರಿಕೆ ಆಗಲಿದ್ದು, ಜನಸಾಮಾನ್ಯರಿಗೆ ಹೊರೆಯಾಗಲಿದೆ.

ಸಾಧಾರಣವಾಗಿ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಮನಸೋ ಇಚ್ಛೆ ದರ ಏರಿಸಿ ಪ್ರಯಾಣಿಕರಿಂದ ಹಣ ಪಡೆಯುವ ಖಾಸಗಿ ಬಸ್​ಗಳು ಇದೀಗ ರಾಜ್ಯ ಸಾರಿಗೆ ನೌಕರರ ಮುಷ್ಕರದ ವೇಳೆಯಲ್ಲಿ ಟಿಕೆಟ್ ದರ ಏರಿಕೆಗೆ ಮುಂದಾಗಿರುವುದು ಪ್ರಯಾಣಿಕರ ಜೇಬಿಗೆ ಕತ್ತರಿ ಪ್ರಯೋಗ ಆಗಲಿದೆ. ಬಿಜಾಪುರ, ಬಾಗಲಕೋಟೆ, ಹುಬ್ಬಳ್ಳಿ ಸೇರಿದಂತೆ ಬಹುತೇಕ ಎಲ್ಲಾ ಜಿಲ್ಲೆಗಳಿಗೆ ಹೋಗುವ ಖಾಸಗಿ ಬಸ್​ಗಳ ಪ್ರಯಾಣ ದರದಲ್ಲಿ ಈಗಾಗಲೇ ಏರಿಕೆಯಾಗಿದ್ದು, ನಾಳೆ ಇನ್ನಷ್ಟು ದರ ಏರುವ ಸಂಭವವಿದೆ.

ಸಾಮಾನ್ಯ ದಿನದಲ್ಲಿ ₹600ರಿಂದ ₹700ರಷ್ಟಿರುವ ಖಾಸಗಿ ಬಸ್​ಗಳ ಟಿಕೆಟ್ ದರ ಇದೀಗ ₹1,200ರಿಂದ ₹1,300ಕ್ಕೆ ಏರಿಕೆಯಾಗಲಿದೆ ಎನ್ನಲಾಗುತ್ತಿದ್ದು, ಸರ್ಕಾರಿ ಬಸ್​ಗಳನ್ನು ನೆಚ್ಚಿಕೊಂಡ ಪ್ರಯಾಣಿಕರಿಗೆ ಇದು ತಾಳಲಾರದ ಹೊರೆಯಾಗಲಿದೆ. ಖಾಸಗಿ ಬಸ್​ಗಳು ಹೀಗೆ ಪರಿಸ್ಥಿತಿಯ ಲಾಭ ಪಡೆದುಕೊಳ್ಳುವುದನ್ನು ನಿಯಂತ್ರಿಸಲಾಗದೆ ಅಸಹಾಯಕರಂತೆ ವರ್ತಿಸುವ ಸರ್ಕಾರ ಕಡೇ ಪಕ್ಷ ತನ್ನದೇ ನೌಕರರ ಸಮಸ್ಯೆಗಳನ್ನು ಬಗೆಹರಿಸಿ ಮುಷ್ಕರ ಆಗದಂತೆ ನೋಡಿಕೊಂಡರೆ ಜನಸಾಮಾನ್ಯರ ಮೇಲಿನ ಹೊರೆಯಾದರೂ ತಗ್ಗುತ್ತದೆ ಎನ್ನುವುದು ಬಹುತೇಕರ ಅಭಿಪ್ರಾಯ.

ಇದನ್ನೂ ಓದಿ: Bus Strike: ಇಂದು ಮಧ್ಯಾಹ್ನದಿಂದಲೇ ಬಿಎಂಟಿಸಿ ಬಸ್ ಸಂಚಾರ ಅನುಮಾನ; ನಾಳೆಯಿಂದ ಕರ್ನಾಟಕ ರಾಜ್ಯಾದ್ಯಂತ ಬಸ್​ ಬಂದ್? 

ನಾಳೆ ಸಾರಿಗೆ ಮುಷ್ಕರ ನಡೆದೇ ನಡೆಯುತ್ತೆ, ಖಾಸಗಿ ನೌಕರರಿಗೂ ಬಸ್ ಓಡಿಸದಂತೆ ಮನವಿ: ಕೋಡಿಹಳ್ಳಿ ಚಂದ್ರಶೇಖರ್

(KSRTC BMTC Bus Strike leads to hike in Private bus ticket price)

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್