AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯಿಂದ ಖಾಸಗಿ ಬಸ್​ ಟಿಕೆಟ್ ದರದಲ್ಲಿ ಏರಿಕೆ ಸಾಧ್ಯತೆ.. ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಸಾಮಾನ್ಯ ದಿನದಲ್ಲಿ ₹600ರಿಂದ ₹700ರಷ್ಟಿರುವ ಖಾಸಗಿ ಬಸ್​ಗಳ ಟಿಕೆಟ್ ದರ ಇದೀಗ ₹1,200ರಿಂದ ₹1,300ಕ್ಕೆ ಏರಿಕೆಯಾಗಲಿದೆ ಎನ್ನಲಾಗುತ್ತಿದ್ದು, ಸರ್ಕಾರಿ ಬಸ್​ಗಳನ್ನು ನೆಚ್ಚಿಕೊಂಡ ಪ್ರಯಾಣಿಕರಿಗೆ ಇದು ತಾಳಲಾರದ ಹೊರೆಯಾಗಲಿದೆ.

ನಾಳೆಯಿಂದ ಖಾಸಗಿ ಬಸ್​ ಟಿಕೆಟ್ ದರದಲ್ಲಿ ಏರಿಕೆ ಸಾಧ್ಯತೆ.. ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ
ಕೆಎಸ್​ಆರ್​ಟಿಸಿ ಮತ್ತು ಖಾಸಗಿ ಬಸ್​
Skanda
| Edited By: |

Updated on: Apr 06, 2021 | 11:00 AM

Share

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಧೋರಣೆಯ ವಿರುದ್ಧ ಮುನಿಸಿಕೊಂಡಿರುವ ಕೆಎಸ್​ಆರ್​ಟಿಸಿ, ಬಿಎಂಟಿಸಿ ಸಾರಿಗೆ ನೌಕರರು ನಾಳೆಯಿಂದ ರಾಜ್ಯವ್ಯಾಪಿ ಮುಷ್ಕರ ನಡೆಸಲು ಸನ್ನದ್ಧರಾಗಿದ್ದಾರೆ. ಸರ್ಕಾರಿ ಬಸ್​ಗಳು ಸೇವೆಯನ್ನು ಸ್ಥಗಿತಗೊಳಿಸುತ್ತಿರುವುದರಿಂದ ಅದರ ಲಾಭ ಪಡೆಯಲು ಮುಂದಾದ ಖಾಸಗಿ ಬಸ್​ಗಳು ನಾಳೆಯಿಂದಲೇ ಟಿಕೆಟ್ ದರ ಏರಿಕೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಹೊರಜಿಲ್ಲೆ ಮತ್ತು ಹೊರರಾಜ್ಯಗಳಿಗೆ ತೆರಳುವ ಖಾಸಗಿ ಬಸ್​ ದರದಲ್ಲಿ ಏರಿಕೆ ಆಗಲಿದ್ದು, ಜನಸಾಮಾನ್ಯರಿಗೆ ಹೊರೆಯಾಗಲಿದೆ.

ಸಾಧಾರಣವಾಗಿ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಮನಸೋ ಇಚ್ಛೆ ದರ ಏರಿಸಿ ಪ್ರಯಾಣಿಕರಿಂದ ಹಣ ಪಡೆಯುವ ಖಾಸಗಿ ಬಸ್​ಗಳು ಇದೀಗ ರಾಜ್ಯ ಸಾರಿಗೆ ನೌಕರರ ಮುಷ್ಕರದ ವೇಳೆಯಲ್ಲಿ ಟಿಕೆಟ್ ದರ ಏರಿಕೆಗೆ ಮುಂದಾಗಿರುವುದು ಪ್ರಯಾಣಿಕರ ಜೇಬಿಗೆ ಕತ್ತರಿ ಪ್ರಯೋಗ ಆಗಲಿದೆ. ಬಿಜಾಪುರ, ಬಾಗಲಕೋಟೆ, ಹುಬ್ಬಳ್ಳಿ ಸೇರಿದಂತೆ ಬಹುತೇಕ ಎಲ್ಲಾ ಜಿಲ್ಲೆಗಳಿಗೆ ಹೋಗುವ ಖಾಸಗಿ ಬಸ್​ಗಳ ಪ್ರಯಾಣ ದರದಲ್ಲಿ ಈಗಾಗಲೇ ಏರಿಕೆಯಾಗಿದ್ದು, ನಾಳೆ ಇನ್ನಷ್ಟು ದರ ಏರುವ ಸಂಭವವಿದೆ.

ಸಾಮಾನ್ಯ ದಿನದಲ್ಲಿ ₹600ರಿಂದ ₹700ರಷ್ಟಿರುವ ಖಾಸಗಿ ಬಸ್​ಗಳ ಟಿಕೆಟ್ ದರ ಇದೀಗ ₹1,200ರಿಂದ ₹1,300ಕ್ಕೆ ಏರಿಕೆಯಾಗಲಿದೆ ಎನ್ನಲಾಗುತ್ತಿದ್ದು, ಸರ್ಕಾರಿ ಬಸ್​ಗಳನ್ನು ನೆಚ್ಚಿಕೊಂಡ ಪ್ರಯಾಣಿಕರಿಗೆ ಇದು ತಾಳಲಾರದ ಹೊರೆಯಾಗಲಿದೆ. ಖಾಸಗಿ ಬಸ್​ಗಳು ಹೀಗೆ ಪರಿಸ್ಥಿತಿಯ ಲಾಭ ಪಡೆದುಕೊಳ್ಳುವುದನ್ನು ನಿಯಂತ್ರಿಸಲಾಗದೆ ಅಸಹಾಯಕರಂತೆ ವರ್ತಿಸುವ ಸರ್ಕಾರ ಕಡೇ ಪಕ್ಷ ತನ್ನದೇ ನೌಕರರ ಸಮಸ್ಯೆಗಳನ್ನು ಬಗೆಹರಿಸಿ ಮುಷ್ಕರ ಆಗದಂತೆ ನೋಡಿಕೊಂಡರೆ ಜನಸಾಮಾನ್ಯರ ಮೇಲಿನ ಹೊರೆಯಾದರೂ ತಗ್ಗುತ್ತದೆ ಎನ್ನುವುದು ಬಹುತೇಕರ ಅಭಿಪ್ರಾಯ.

ಇದನ್ನೂ ಓದಿ: Bus Strike: ಇಂದು ಮಧ್ಯಾಹ್ನದಿಂದಲೇ ಬಿಎಂಟಿಸಿ ಬಸ್ ಸಂಚಾರ ಅನುಮಾನ; ನಾಳೆಯಿಂದ ಕರ್ನಾಟಕ ರಾಜ್ಯಾದ್ಯಂತ ಬಸ್​ ಬಂದ್? 

ನಾಳೆ ಸಾರಿಗೆ ಮುಷ್ಕರ ನಡೆದೇ ನಡೆಯುತ್ತೆ, ಖಾಸಗಿ ನೌಕರರಿಗೂ ಬಸ್ ಓಡಿಸದಂತೆ ಮನವಿ: ಕೋಡಿಹಳ್ಳಿ ಚಂದ್ರಶೇಖರ್

(KSRTC BMTC Bus Strike leads to hike in Private bus ticket price)

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ