ನಾಳೆ ಸಾರಿಗೆ ಮುಷ್ಕರ ನಡೆದೇ ನಡೆಯುತ್ತೆ, ಖಾಸಗಿ ನೌಕರರಿಗೂ ಬಸ್ ಓಡಿಸದಂತೆ ಮನವಿ: ಕೋಡಿಹಳ್ಳಿ ಚಂದ್ರಶೇಖರ್

ಸರ್ಕಾರ ನೌಕರರಿಗೆ ಸಂಬಂಧಿಸಿದ 8 ಬೇಡಿಕೆಗಳನ್ನು ಈಡೆರಿಸಿದ್ದೇವೆ ಎನ್ನುತ್ತಿದೆ. ಆದರೆ, ಆ ಯಾವ ಬೇಡಿಕೆಗಳೂ ನೌಕರರ ಪರವಾಗಿಲ್ಲ. ಸರ್ಕಾರ ಮೇ 4ರ ನಂತರ ಭರವಸೆ ಈಡೇರಿಸಲಾಗುವುದು ಎನ್ನುತ್ತಿದೆ. ಆದರೆ, ಆ ಮಾತಿನ ಮೇಲೆ ನಮಗೆ ನಂಬಿಕೆ ಇಲ್ಲ. ನಮ್ಮ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ.

ನಾಳೆ ಸಾರಿಗೆ ಮುಷ್ಕರ ನಡೆದೇ ನಡೆಯುತ್ತೆ, ಖಾಸಗಿ ನೌಕರರಿಗೂ ಬಸ್ ಓಡಿಸದಂತೆ ಮನವಿ: ಕೋಡಿಹಳ್ಳಿ ಚಂದ್ರಶೇಖರ್
ಕೋಡಿಹಳ್ಳಿ ಚಂದ್ರಶೇಖರ್
Follow us
|

Updated on:Apr 06, 2021 | 7:36 AM

ಬೆಂಗಳೂರು: ಸರ್ಕಾರದ ವಿರುದ್ಧ ಈಗಾಗಲೇ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಿ ಬೇಡಿಕೆ ಈಡೇರಿಕೆಗೆ ಕಾಯುತ್ತಿದ್ದ ಸಾರಿಗೆ ನೌಕರರು ಮತ್ತೆ ಬೀದಿಗಿಳಿಯುವ ಸಾಧ್ಯತೆ ಇದೆ. ಈ ಬಗ್ಗೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಒಕ್ಕೂಟದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿದ್ದು, ನಾಳೆ ಸಾರಿಗೆ ಮುಷ್ಕರ ನಡೆದೇ ನಡೆಯುತ್ತೆ. ಸರ್ಕಾರ ಕೊಟ್ಟ ಮಾತಿಗೆ ತಪ್ಪಿದೆ. ಬೇಡಿಕೆ ಈಡೇರಿಸುವಂತೆ ನಾವು ಸರ್ಕಾರಕ್ಕೆ 3 ತಿಂಗಳ ಗಡುವು ನೀಡಿದ್ದೆವು. ಸರ್ಕಾರವೂ ಡಿಸೆಂಬರ್ 14ರಂದು ಲಿಖಿತ ರೂಪದಲ್ಲಿ ಭರವಸೆ ನೀಡಿತ್ತು. ಅದು ಸುಳ್ಳು ಭರವಸೆ ಎಂದು ಈಗ ಗೊತ್ತಾಗಿದೆ. ನಮಗೆ ನೀಡಿದ ಭರವಸೆ, ಆಶ್ವಾಸನೆಗಳು ಈಡೇರುವ ತನಕ ಬಸ್ ಮುಟ್ಟೋದಿಲ್ಲ ಎಂದು ಹೇಳಿದ್ದು, ಮುಷ್ಕರ ಘೋಷಿಸಿದ್ದಾರೆ.

ಸರ್ಕಾರ ನೌಕರರಿಗೆ ಸಂಬಂಧಿಸಿದ 8 ಬೇಡಿಕೆಗಳನ್ನು ಈಡೆರಿಸಿದ್ದೇವೆ ಎನ್ನುತ್ತಿದೆ. ಆದರೆ, ಆ ಯಾವ ಬೇಡಿಕೆಗಳೂ ನೌಕರರ ಪರವಾಗಿಲ್ಲ. ಸರ್ಕಾರ ಮೇ 4ರ ನಂತರ ಭರವಸೆ ಈಡೇರಿಸಲಾಗುವುದು ಎನ್ನುತ್ತಿದೆ. ಆದರೆ, ಆ ಮಾತಿನ ಮೇಲೆ ನಮಗೆ ನಂಬಿಕೆ ಇಲ್ಲ. ಇದು ನೀತಿಸಂಹಿತೆಯ ನೆಪ ಹೇಳಿ ಪಲಾಯನ ಮಾಡಲು ದಾರಿ ಹುಡುಕಿದೆ. ಇದು ಯಾವುದೇ ಹೊಸ ಜನಪ್ರಿಯ ಯೋಜನೆ ಅಲ್ಲ. ನಮಗೆ ಕೊಟ್ಟಿರುವ ಆಶ್ವಾಸನೆ ಈಡೇರಿಸುತ್ತಿದ್ದಾರೆ ಅಷ್ಟೇ. ಇದಕ್ಕೆಲ್ಲಾ ನೀತಿಸಂಹಿತೆ ಅಡ್ಡಿಯಾಗದು ಎಂದು ಹೇಳಿದ್ದಾರೆ.

ಅಲ್ಲದೇ, ನೀತಿಸಂಹಿತೆ ಇದ್ದಾಗಲೇ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ್ದಾರೆ. ಅದಕ್ಕೆಲ್ಲಾ ನೀತಿಸಂಹಿತೆ ಅಡ್ಡ ಬರಲಿಲ್ಲವಾ? ಈಗ ಮಾತ್ರ ಸಮಸ್ಯೆಯಾಗುತ್ತಾ? ನಾವು ಮೊದಲೇ ಮನವಿ ಕೊಟ್ಟಿರುವ ಕಾರಣ ಯಾವ ನೀತಿ ಸಂಹಿತೆಯೂ ನಮಗೆ ಅನ್ವಯಿಸುವುದಿಲ್ಲ. ನಮ್ಮ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಖಾಸಗಿ ನೌಕರರಿಗೆ ಕೂಡಾ ಬಸ್ ಓಡಿಸದಂತೆ ಮನವಿ ಮಾಡಿದ್ದೇವೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.

ಇದನ್ನೂ ಓದಿ: ಕೊಟ್ಟಿರೋ ಮಾತಿನಿಂದ ಹಿಂದೆ ಸರಿಯುವುದಿಲ್ಲ, ಯಾವುದೇ ಆತುರದ ನಿರ್ಣಯ ತೆಗೆದುಕೊಂಡು ಮುಷ್ಕರ ಮಾಡಬೇಡಿ: ಸಚಿವ ಲಕ್ಷ್ಮಣ ಸವದಿ

ಕೊರೊನಾ ನಿಯಂತ್ರಣಕ್ಕೆ ಹೊಸ ನಿಯಮ​; ಬಿಎಂಟಿಸಿ ಬಸ್‌ಗಳನ್ನು ತಡೆದು ಪ್ರಯಾಣಿಕರ ವಾಗ್ವಾದ 

Published On - 7:33 am, Tue, 6 April 21

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​