AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bust Strike: ತರಬೇತಿ ಸಿಬ್ಬಂದಿಯಿಂದಲೇ ಬಸ್ ಓಡಿಸಲಿದೆಯೇ ಸಾರಿಗೆ ಇಲಾಖೆ?

KSRTC BMTC Bus Strike: ಹಿಂದಿನ ಬಾರಿ ಸಾರಿಗೆ ಇಲಾಖೆಯ ಸಿಬ್ಬಂದಿ ಮುಷ್ಕರ ಕೈಗೊಂಡಾಗ ತರಬೇತಿ ಸಿಬ್ಬಂದಿ ಬಸ್ ಚಾಲನೆ ಮಾಡಿದ್ದರು. ಆದರೆ ಆಗ ಕೆಲವು ಕಡೆ ಸಮಸ್ಯೆಯಾಗಿತ್ತು. ಈ ಬಾರಿಯೂ ತರಬೇತಿ ನೌಕರರ ಬಳಿ ಬಸ್ ಓಡಿಸಿದರೆ ಏನಾದರೂ ತೊಂದರೆ ಉಂಟಾಗುವ ಸಾಧ್ಯತೆಗಳೂ ಇವೆ ಎಂದು ಹೇಳಲಾಗುತ್ತಿದೆ.

Bust Strike: ತರಬೇತಿ ಸಿಬ್ಬಂದಿಯಿಂದಲೇ ಬಸ್ ಓಡಿಸಲಿದೆಯೇ ಸಾರಿಗೆ ಇಲಾಖೆ?
ಸಾಂದರ್ಭಿಕ ಚಿತ್ರ
guruganesh bhat
| Updated By: ganapathi bhat|

Updated on: Apr 06, 2021 | 2:28 PM

Share

ಬೆಂಗಳೂರು: ಬುಧವಾರ (ಏಪ್ರಿಲ್ 7) ಸಾರಿಗೆ ನೌಕರರ ಮುಷ್ಕರ ಘೋಷಣೆಯಾದ ಹಿನ್ನೆಲೆಯಲ್ಲಿ ಮುಷ್ಕರದ ಪರಿಣಾಮ ಹತ್ತಿಕ್ಕುವುದಕ್ಕೆ ಬಿಎಂಟಿಸಿ ಯೋಜನೆ ರೂಪಿಸುತ್ತಿದೆ ಎನ್ನಲಾಗಿದೆ. ನಾಳೆ ಸಾರಿಗೆ ಇಲಾಖೆ ತರಬೇತಿ ನೌಕರರಿಂದ ಬಸ್ ಓಡಿಸುವುದಕ್ಕೆ ಬಿಎಂಟಿಸಿ ಚಿಂತಿಸಿದೆ ಎಂದು ಹೇಳಲಾಗುತ್ತಿದೆ. ಸದ್ಯ ಬಿಎಂಟಿಸಿಯಲ್ಲಿ 2 ಸಾವಿರ ತರಬೇತಿ ನೌಕರರಿದ್ದಾರೆ. ಹಿಂದಿನ ಬಾರಿ ಸಾರಿಗೆ ಇಲಾಖೆಯ ಸಿಬ್ಬಂದಿ ಮುಷ್ಕರ ಕೈಗೊಂಡಾಗ ಇದೇ ರೀತಿ ಬಸ್ ಚಾಲನೆ ಮಾಡಲಾಗಿತ್ತು. ಅದರಂತೆ ಈ ಬಾರಿಯೂ ಬಸ್ ಓಡಿಸಲು ಯೋಜನೆ ರೂಪಿಸಲಾಗುತ್ತಿದೆ ಎನ್ನಲಾಗಿದೆ.

ಹಿಂದಿನ ಬಾರಿ ಸಾರಿಗೆ ಇಲಾಖೆಯ ಸಿಬ್ಬಂದಿ ಮುಷ್ಕರ ಕೈಗೊಂಡಾಗ ತರಬೇತಿ ಸಿಬ್ಬಂದಿ ಬಸ್ ಚಾಲನೆ ಮಾಡಿದ್ದರು. ಆದರೆ ಆಗ ಕೆಲವು ಕಡೆ ಸಮಸ್ಯೆಯಾಗಿತ್ತು. ಈ ಬಾರಿಯೂ ತರಬೇತಿ ನೌಕರರ ಬಳಿ ಬಸ್ ಓಡಿಸಿದರೆ ಏನಾದರೂ ತೊಂದರೆ ಉಂಟಾಗುವ ಸಾಧ್ಯತೆಗಳೂ ಇವೆ ಎಂದು ಹೇಳಲಾಗುತ್ತಿದೆ.

ಇದೇ ವೇಳೆ, ಸಾರಿಗೆ ಸಿಬ್ಬಂದಿ ಕೈಗೊಂಡಿರುವ ನಾಳೆಯ ಮುಷ್ಕರಕ್ಕೆ ಓಲಾ-ಊಬರ್ ಚಾಲಕ ಸಂಘಟನೆ ನೈತಿಕ ಬೆಂಬಲ ಘೋಷಿಸಿದೆ. ಆದರೆ ಎಂದಿನಂತೆ ಓಲಾ-ಊಬರ್ ಕ್ಯಾಬ್-ಆಟೋಗಳು ಸಂಚರಿಸಲಿವೆ ಎಂದು ಓಲಾ ಊಬರ್ ಡ್ರೈವರ್ ಮತ್ತು ಮಾಲೀಕರ ಅಸೋಸಿಯೇಷನ್ ಅಧ್ಯಕ್ಷ ತನ್ವೀರ್ ಪಾಷ ಮಾಹಿತಿ ನೀಡಿದ್ದಾರೆ.

ಸಾರಿಗೆ ಸಿಬ್ಬಂದಿ ಮುಷ್ಕರ ಘೋಷಣೆಯಾದ ಹಿನ್ನೆಲೆಯಲ್ಲಿ ಬಿಎಂಟಿಸಿ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ. ಬಿಎಂಟಿಸಿ ಯಾವುದೇ ಅನುಸೂಚಿಗಳು ವ್ಯತ್ಯಯ ಆಗದಂತೆ ಸೂಚನೆ ನೀಡಲಾಗಿದೆ. ನಾಳೆಯಿಂದ ಗೈರು ಹಾಜರಾತಿ ಆಗುವ ನೌಕರರಿಗೆ ವೇತನ ನೀಡುವುದಿಲ್ಲ. ವಾರದ ರಜೆ ದೀರ್ಘಾವಧಿ ರಜೆಯಲ್ಲಿರುವರಿಗೆ ಆದೇಶ ಅನ್ವಯ ಆಗುವುದಿಲ್ಲ.ಆದರೆ, ಅನಗತ್ಯವಾಗಿ ರಜೆ ಹಾಕಿದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಬಿಎಂಟಿಸಿ ಭದ್ರತೆ ಹಾಗೂ ಜಾಗೃತಾ ದಳ ನಿರ್ದೇಶಕ ಅರುಣ್ ಆದೇಶಿಸಿದ್ದಾರೆ.

ರಾಜ್ಯದಲ್ಲಿ ನಾಳೆ ಸಾರಿಗೆ ನೌಕರರ ಮುಷ್ಕರ ವಿಚಾರಕ್ಕೆ ಸಂಬಂಧಿಸಿ ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.‘ಸ್ವಾಮಿ ಲಕ್ಷ್ಮಣ ಸವದಿಯವರೇ, ಡಿಸೆಂಬರ್‌ನಲ್ಲಿಯೇ ಸಾರಿಗೆ ನೌಕರರು ಧರಣಿ ನಡೆಸಿದ್ದರು. ಇಷ್ಟು ದಿನ ನಿದ್ದೆ ಮಾಡಿ ಈಗ ಚುನಾವಣಾ ನೀತಿ ಸಂಹಿತೆ ನೆಪ ಹೇಳಿ ದಿಕ್ಕು ತಪ್ಪಿಸ್ತಿದ್ದೀರಾ? ಕೇಂದ್ರದಿಂದ ತೆರಿಗೆ ಪಾಲು ತರಲಾಗದೆ ನಿಗಮಗಳು ನಷ್ಟದಲ್ಲಿರುವ ಸಬೂಬು ಹೇಳುವಿರಲ್ಲ. ಇದೇನಾ ನಿಮ್ಮ ಡಬಲ್ ಇಂಜಿನ್ ಅಭಿವೃದ್ಧಿ? ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: Bus Strike: ಬೇಡಿಕೆ ಈಡೇರಿಸಲು ಆಗಲ್ಲ ಎಂಬ ಸರ್ಕಾರದ ಮುಖ್ಯ ಕಾರ್ಯದರ್ಶಿ ಹೇಳಿಕೆ ಸರ್ವಾಧಿಕಾರಿ ಧೋರಣೆಗೆ ಸಾಕ್ಷಿ – ಕೋಡಿಹಳ್ಳಿ ಚಂದ್ರಶೇಖರ್

Bus Strike: ಹೆಚ್ಚು ಪ್ರಯಾಣಿಕರು ಸಂಚಾರ ಮಾಡುವ ಮಾರ್ಗ​ಗಳಲ್ಲಿ ನಾಳೆ ಖಾಸಗಿ ವಾಹನಗಳು ಸಂಚಾರ ಮಾಡಲಿವೆ: ಬಿಎಂಟಿಸಿ ಎಂಡಿ ಸಿ.ಶಿಖಾ

‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
ಧರ್ಮಶಾಲಾ: ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ, ವ್ಯಕ್ತಿ ಸಾವು
ಧರ್ಮಶಾಲಾ: ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ, ವ್ಯಕ್ತಿ ಸಾವು
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ