Sign In

By signing in or creating an account, you agree with Associated Broadcasting Company's Terms & Conditions and Privacy Policy.

Bust Strike: ತರಬೇತಿ ಸಿಬ್ಬಂದಿಯಿಂದಲೇ ಬಸ್ ಓಡಿಸಲಿದೆಯೇ ಸಾರಿಗೆ ಇಲಾಖೆ?

KSRTC BMTC Bus Strike: ಹಿಂದಿನ ಬಾರಿ ಸಾರಿಗೆ ಇಲಾಖೆಯ ಸಿಬ್ಬಂದಿ ಮುಷ್ಕರ ಕೈಗೊಂಡಾಗ ತರಬೇತಿ ಸಿಬ್ಬಂದಿ ಬಸ್ ಚಾಲನೆ ಮಾಡಿದ್ದರು. ಆದರೆ ಆಗ ಕೆಲವು ಕಡೆ ಸಮಸ್ಯೆಯಾಗಿತ್ತು. ಈ ಬಾರಿಯೂ ತರಬೇತಿ ನೌಕರರ ಬಳಿ ಬಸ್ ಓಡಿಸಿದರೆ ಏನಾದರೂ ತೊಂದರೆ ಉಂಟಾಗುವ ಸಾಧ್ಯತೆಗಳೂ ಇವೆ ಎಂದು ಹೇಳಲಾಗುತ್ತಿದೆ.

Bust Strike: ತರಬೇತಿ ಸಿಬ್ಬಂದಿಯಿಂದಲೇ ಬಸ್ ಓಡಿಸಲಿದೆಯೇ ಸಾರಿಗೆ ಇಲಾಖೆ?
ಸಾಂದರ್ಭಿಕ ಚಿತ್ರ
Follow us
guruganesh bhat
| Updated By: ganapathi bhat

Updated on: Apr 06, 2021 | 2:28 PM

ಬೆಂಗಳೂರು: ಬುಧವಾರ (ಏಪ್ರಿಲ್ 7) ಸಾರಿಗೆ ನೌಕರರ ಮುಷ್ಕರ ಘೋಷಣೆಯಾದ ಹಿನ್ನೆಲೆಯಲ್ಲಿ ಮುಷ್ಕರದ ಪರಿಣಾಮ ಹತ್ತಿಕ್ಕುವುದಕ್ಕೆ ಬಿಎಂಟಿಸಿ ಯೋಜನೆ ರೂಪಿಸುತ್ತಿದೆ ಎನ್ನಲಾಗಿದೆ. ನಾಳೆ ಸಾರಿಗೆ ಇಲಾಖೆ ತರಬೇತಿ ನೌಕರರಿಂದ ಬಸ್ ಓಡಿಸುವುದಕ್ಕೆ ಬಿಎಂಟಿಸಿ ಚಿಂತಿಸಿದೆ ಎಂದು ಹೇಳಲಾಗುತ್ತಿದೆ. ಸದ್ಯ ಬಿಎಂಟಿಸಿಯಲ್ಲಿ 2 ಸಾವಿರ ತರಬೇತಿ ನೌಕರರಿದ್ದಾರೆ. ಹಿಂದಿನ ಬಾರಿ ಸಾರಿಗೆ ಇಲಾಖೆಯ ಸಿಬ್ಬಂದಿ ಮುಷ್ಕರ ಕೈಗೊಂಡಾಗ ಇದೇ ರೀತಿ ಬಸ್ ಚಾಲನೆ ಮಾಡಲಾಗಿತ್ತು. ಅದರಂತೆ ಈ ಬಾರಿಯೂ ಬಸ್ ಓಡಿಸಲು ಯೋಜನೆ ರೂಪಿಸಲಾಗುತ್ತಿದೆ ಎನ್ನಲಾಗಿದೆ.

ಹಿಂದಿನ ಬಾರಿ ಸಾರಿಗೆ ಇಲಾಖೆಯ ಸಿಬ್ಬಂದಿ ಮುಷ್ಕರ ಕೈಗೊಂಡಾಗ ತರಬೇತಿ ಸಿಬ್ಬಂದಿ ಬಸ್ ಚಾಲನೆ ಮಾಡಿದ್ದರು. ಆದರೆ ಆಗ ಕೆಲವು ಕಡೆ ಸಮಸ್ಯೆಯಾಗಿತ್ತು. ಈ ಬಾರಿಯೂ ತರಬೇತಿ ನೌಕರರ ಬಳಿ ಬಸ್ ಓಡಿಸಿದರೆ ಏನಾದರೂ ತೊಂದರೆ ಉಂಟಾಗುವ ಸಾಧ್ಯತೆಗಳೂ ಇವೆ ಎಂದು ಹೇಳಲಾಗುತ್ತಿದೆ.

ಇದೇ ವೇಳೆ, ಸಾರಿಗೆ ಸಿಬ್ಬಂದಿ ಕೈಗೊಂಡಿರುವ ನಾಳೆಯ ಮುಷ್ಕರಕ್ಕೆ ಓಲಾ-ಊಬರ್ ಚಾಲಕ ಸಂಘಟನೆ ನೈತಿಕ ಬೆಂಬಲ ಘೋಷಿಸಿದೆ. ಆದರೆ ಎಂದಿನಂತೆ ಓಲಾ-ಊಬರ್ ಕ್ಯಾಬ್-ಆಟೋಗಳು ಸಂಚರಿಸಲಿವೆ ಎಂದು ಓಲಾ ಊಬರ್ ಡ್ರೈವರ್ ಮತ್ತು ಮಾಲೀಕರ ಅಸೋಸಿಯೇಷನ್ ಅಧ್ಯಕ್ಷ ತನ್ವೀರ್ ಪಾಷ ಮಾಹಿತಿ ನೀಡಿದ್ದಾರೆ.

ಸಾರಿಗೆ ಸಿಬ್ಬಂದಿ ಮುಷ್ಕರ ಘೋಷಣೆಯಾದ ಹಿನ್ನೆಲೆಯಲ್ಲಿ ಬಿಎಂಟಿಸಿ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ. ಬಿಎಂಟಿಸಿ ಯಾವುದೇ ಅನುಸೂಚಿಗಳು ವ್ಯತ್ಯಯ ಆಗದಂತೆ ಸೂಚನೆ ನೀಡಲಾಗಿದೆ. ನಾಳೆಯಿಂದ ಗೈರು ಹಾಜರಾತಿ ಆಗುವ ನೌಕರರಿಗೆ ವೇತನ ನೀಡುವುದಿಲ್ಲ. ವಾರದ ರಜೆ ದೀರ್ಘಾವಧಿ ರಜೆಯಲ್ಲಿರುವರಿಗೆ ಆದೇಶ ಅನ್ವಯ ಆಗುವುದಿಲ್ಲ.ಆದರೆ, ಅನಗತ್ಯವಾಗಿ ರಜೆ ಹಾಕಿದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಬಿಎಂಟಿಸಿ ಭದ್ರತೆ ಹಾಗೂ ಜಾಗೃತಾ ದಳ ನಿರ್ದೇಶಕ ಅರುಣ್ ಆದೇಶಿಸಿದ್ದಾರೆ.

ರಾಜ್ಯದಲ್ಲಿ ನಾಳೆ ಸಾರಿಗೆ ನೌಕರರ ಮುಷ್ಕರ ವಿಚಾರಕ್ಕೆ ಸಂಬಂಧಿಸಿ ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.‘ಸ್ವಾಮಿ ಲಕ್ಷ್ಮಣ ಸವದಿಯವರೇ, ಡಿಸೆಂಬರ್‌ನಲ್ಲಿಯೇ ಸಾರಿಗೆ ನೌಕರರು ಧರಣಿ ನಡೆಸಿದ್ದರು. ಇಷ್ಟು ದಿನ ನಿದ್ದೆ ಮಾಡಿ ಈಗ ಚುನಾವಣಾ ನೀತಿ ಸಂಹಿತೆ ನೆಪ ಹೇಳಿ ದಿಕ್ಕು ತಪ್ಪಿಸ್ತಿದ್ದೀರಾ? ಕೇಂದ್ರದಿಂದ ತೆರಿಗೆ ಪಾಲು ತರಲಾಗದೆ ನಿಗಮಗಳು ನಷ್ಟದಲ್ಲಿರುವ ಸಬೂಬು ಹೇಳುವಿರಲ್ಲ. ಇದೇನಾ ನಿಮ್ಮ ಡಬಲ್ ಇಂಜಿನ್ ಅಭಿವೃದ್ಧಿ? ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: Bus Strike: ಬೇಡಿಕೆ ಈಡೇರಿಸಲು ಆಗಲ್ಲ ಎಂಬ ಸರ್ಕಾರದ ಮುಖ್ಯ ಕಾರ್ಯದರ್ಶಿ ಹೇಳಿಕೆ ಸರ್ವಾಧಿಕಾರಿ ಧೋರಣೆಗೆ ಸಾಕ್ಷಿ – ಕೋಡಿಹಳ್ಳಿ ಚಂದ್ರಶೇಖರ್

Bus Strike: ಹೆಚ್ಚು ಪ್ರಯಾಣಿಕರು ಸಂಚಾರ ಮಾಡುವ ಮಾರ್ಗ​ಗಳಲ್ಲಿ ನಾಳೆ ಖಾಸಗಿ ವಾಹನಗಳು ಸಂಚಾರ ಮಾಡಲಿವೆ: ಬಿಎಂಟಿಸಿ ಎಂಡಿ ಸಿ.ಶಿಖಾ

ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?
WITT: ಟಿವಿ9 ಶೃಂಗಸಭೆಯಲ್ಲಿ ಕೇಂದ್ರ ಸಚಿವರ ಸಂದರ್ಶನ, ಲೈವ್ ನೋಡಿ
WITT: ಟಿವಿ9 ಶೃಂಗಸಭೆಯಲ್ಲಿ ಕೇಂದ್ರ ಸಚಿವರ ಸಂದರ್ಶನ, ಲೈವ್ ನೋಡಿ
Shani Sanchara 2025: ಶನಿ ಸಂಚಾರ ರಾಶಿ ಭವಿಷ್ಯ, ಲೈವ್ ವೀಕ್ಷಿಸಿ
Shani Sanchara 2025: ಶನಿ ಸಂಚಾರ ರಾಶಿ ಭವಿಷ್ಯ, ಲೈವ್ ವೀಕ್ಷಿಸಿ