AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bus Strike: ಸಾರಿಗೆ ನೌಕರರ ಒಂದು ದಿನದ ಮುಷ್ಕರದಿಂದ ನಿಗಮಗಳಿಗೆ ಆದ ನಷ್ಟವೆಷ್ಟು ಗೊತ್ತಾ?

ಸಾರಿಗೆ ಸಿಬ್ಬಂದಿ ಮುಷ್ಕರದ ನಡುವೆಯೂ ಬೆಂಗಳೂರು ನಗರದಲ್ಲಿ ಕೆಲ ಬಸ್​ಗಳು ಸಂಚಾರ ನಡೆಸಿವೆ. ಬೆಂಗಳೂರಿನಲ್ಲಿ ಇಂದು 145 ಬಿಎಂಟಿಸಿ ಬಸ್​ಗಳು ಸಂಚಾರ ಮಾಡಿವೆ.

Bus Strike: ಸಾರಿಗೆ ನೌಕರರ ಒಂದು ದಿನದ ಮುಷ್ಕರದಿಂದ ನಿಗಮಗಳಿಗೆ ಆದ ನಷ್ಟವೆಷ್ಟು ಗೊತ್ತಾ?
ಸರ್ಕಾರಿ ಸಾರಿಗೆ ಸಂಸ್ಥೆಗಳ ಬಸ್​ಗಳು
TV9 Web
| Edited By: |

Updated on:Apr 05, 2022 | 12:43 PM

Share

ಬೆಂಗಳೂರು: ತಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸಾರಿಗೆ ನೌಕರರು ಇಂದು (ಏಪ್ರಿಲ್ 7) ಮುಷ್ಕರ ನಡೆಸಿದ್ದಾರೆ. ಇದರಿಂದಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ಸರ್ಕಾರಿ ಬಸ್​ಗಳು ಕಾರ್ಯನಿರ್ವಹಿಸಿಲ್ಲ. ಸಾರಿಗೆ ವಾಹನಗಳ ಮುಷ್ಕರದಿಂದ ಸರ್ಕಾರದ ಬೊಕ್ಕಸಕ್ಕೆ ಎಷ್ಟು ನಷ್ಟವಾಗಿದೆ ಎಂಬ ಲೆಕ್ಕಾಚಾರವನ್ನು ಕೆಎಸ್​ಆರ್​ಟಿಸಿ ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ.

ಸಾರಿಗೆ ಸಿಬ್ಬಂದಿ ಮುಷ್ಕರದಿಂದ ಇಂದು ಒಟ್ಟು 17 ಕೋಟಿ ನಷ್ಟ ಉಂಟಾಗಿದೆ. ಅಂದರೆ, ಸಾರಿಗೆ ಸಂಸ್ಥೆಯ ಒಟ್ಟು 4 ನಿಗಮಗಳಿಂದ 17 ಕೋಟಿ ನಷ್ಟ ಸಂಭವಿಸಿದೆ. ಅದರಲ್ಲಿ ಕೆಎಸ್​​ಆರ್​ಟಿಸಿಗೆ ಇಂದು 7 ಕೋಟಿ ರೂಪಾಯಿ ನಷ್ಟ ಉಂಟಾಗಿದ್ದರೆ, ಬಿಎಂಟಿಸಿಗೆ 3 ಕೋಟಿ ರೂಪಾಯಿ ನಷ್ಟವಾಗಿದೆ. ವಾಯವ್ಯ ಸಾರಿಗೆ ಸಂಸ್ಥೆಗೆ 3.5 ಕೋಟಿ ರೂಪಾಯಿ ನಷ್ಟವಾಗಿದ್ದು, ಈಶಾನ್ಯ ಸಾರಿಗೆ ಸಂಸ್ಥೆಗೆ ಕೂಡ 3.5 ಕೋಟಿ ರೂಪಾಯಿ ನಷ್ಟ ಉಂಟಾಗಿದೆ. ಈ ಬಗ್ಗೆ, ಕೆಎಸ್​ಆರ್​ಟಿಸಿ ಅಧಿಕಾರಿಗಳಿಂದ ಮಾಹಿತಿ ಬಿಡುಗಡೆ ಮಾಡಲಾಗಿದೆ.

ಸಾರಿಗೆ ಸಿಬ್ಬಂದಿ ಮುಷ್ಕರದ ನಡುವೆಯೂ ಬೆಂಗಳೂರು ನಗರದಲ್ಲಿ ಕೆಲ ಬಸ್​ಗಳು ಸಂಚಾರ ನಡೆಸಿವೆ. ಬೆಂಗಳೂರಿನಲ್ಲಿ ಇಂದು 145 ಬಿಎಂಟಿಸಿ ಬಸ್​ಗಳು ಸಂಚಾರ ಮಾಡಿವೆ. ಅಲ್ಲದೆ, ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ 1124 ಖಾಸಗಿ ಬಸ್​ಗಳು, 2 ಸಾವಿರ ಮ್ಯಾಕ್ಸಿ ಕ್ಯಾಬ್​ ಬಳಕೆ ಮಾಡಲಾಗಿದೆ. ಈ ಬಗ್ಗೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಾಹಿತಿ ನೀಡಿದೆ.

ಎಷ್ಟು ಬಸ್​ಗಳು ಸಂಚಾರ ನಡೆಸಿವೆ? ರಾಜ್ಯಾದ್ಯಂತ ಸಾರಿಗೆ ಸಂಸ್ಥೆ ನೌಕರರ ಮುಷ್ಕರ ಹಿನ್ನೆಲೆ, ಕೆಎಸ್​ಆರ್​ಟಿಸಿ ಇಂದಿನ ಬಸ್ ಸಂಚಾರದ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಅದರಂತೆ, ರಾತ್ರಿ ಪಾಳಿಯಲ್ಲಿ ಒಟ್ಟು 264 ಬಸ್​ ಕಾರ್ಯಾಚರಣೆಯಾಗಿದೆ. KSRTC ವ್ಯಾಪ್ತಿಯಲ್ಲಿ 3,152 ಖಾಸಗಿ ವಾಹನ ಸಂಚಾರ ಮಾಡಿವೆ. ವಾಯವ್ಯ ಸಾರಿಗೆ ವ್ಯಾಪ್ತಿಯಲ್ಲಿ 1,645 ಖಾಸಗಿ ವಾಹನ ಸಂಚಾರ ಮಾಡಿವೆ. ಈಶಾನ್ಯ ಸಾರಿಗೆ ವ್ಯಾಪ್ತಿ 3,234 ಖಾಸಗಿ ವಾಹನ ಸಂಚರಿಸಿವೆ.

ಬೆಂಗಳೂರಿನಿಂದ ಹೊರ ರಾಜ್ಯಗಳಿಗೆ ಬಸ್ ಸಂಚಾರ ವಿವರ ಈ ರೀತಿ ಇದೆ. ತಮಿಳುನಾಡಿಗೆ 300, ಆಂಧ್ರಪ್ರದೇಶಕ್ಕೆ 125, ಕೇರಳ 25, ತೆಲಂಗಾಣಕ್ಕೆ 20 ಬಸ್​ಗಳು ಕಾರ್ಯಾಚರಣೆ ನಡೆಸಿವೆ. ಅಲ್ಲದೆ, ಕೆಎಸ್​ಆರ್​ಟಿಸಿ ಬಸ್ ಮೇಲೆ ಕಲ್ಲುತೂರಾಟ ಹಿನ್ನೆಲೆ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ 1 ದೂರು ದಾಖಲಾದ ಘಟನೆಯೂ ನಡೆದಿದೆ. ಕೆಎಸ್​ಆರ್​ಟಿಸಿ ಕೇಂದ್ರ ಕಚೇರಿಯಿಂದ ಈ ಮಾಹಿತಿ ಬಿಡುಗಡೆ ಮಾಡಲಾಗಿದೆ.

ಮೆಟ್ರೋ ರೈಲು ಹೆಚ್ಚುವರಿ ಟ್ರಿಪ್ 6ನೇ ವೇತನ ಆಯೋಗ ಜಾರಿಗಾಗಿ ಸಾರಿಗೆ ಸಿಬ್ಬಂದಿ ಮುಷ್ಕರ ಮಾಡಿರುವ ಕಾರಣ ಬಸ್​ಗಳು ಇಂದು ಎಂದಿನಂತೆ ಸಂಚಾರ ನಡೆಸಿಲ್ಲ. ಹೀಗಾಗಿ ಬಹುತೇಕರು ಮೆಟ್ರೋ ರೈಲು ಅವಲಂಬಿಸಬೇಕಾಗಿ ಬರಬಹುದು ಎಂದು ಮೆಟ್ರೋ ರೈಲು ಟ್ರಿಪ್​ಗಳನ್ನು ಹೆಚ್ಚುವರಿಯಾಗಿ ನಡೆಸಲಾಗಿದೆ. ನಮ್ಮ ಮೆಟ್ರೋ ರೈಲಿನಲ್ಲಿ ಸಂಚರಿಸಿದ ಪ್ರಯಾಣಿಕರ ಮಾಹಿತಿ ಹೀಗಿದೆ.

ಹಸಿರು, ನೇರಳೆ ಮಾರ್ಗದಲ್ಲಿ 289 ಟ್ರಿಪ್​ ಮೆಟ್ರೋ ಸಂಚಾರ ಮಾಡಿದೆ. ಬೇರೆ ದಿನಗಳಲ್ಲಿ 247 ಟ್ರಿಪ್ ಸಂಚರಿಸುತ್ತಿದ್ದ ಮೆಟ್ರೋ ರೈಲು, ಇಂದು ಒಟ್ಟು 289 ಟ್ರಿಪ್ ಸಂಚಾರ ನಡೆಸಿದೆ. ಮೆಟ್ರೋದಲ್ಲಿ ಇಂದು ಅಂದಾಜು 1,27,876 ಜನರ ಸಂಚಾರ ಮಾಡಿದ್ದಾರೆ. ಈ ಬಗ್ಗೆ, ಬಿಎಂಆರ್​ಸಿಎಲ್​ನಿಂದ ಮಾಧ್ಯಮ ಪ್ರಕಟಣೆ ನೀಡಿದೆ.

ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರ: ಪರ್ಯಾಯ ವ್ಯವಸ್ಥೆ ಮಾಡಲಾಗಿದೆ, ಆತಂಕ ಬೇಡವೆಂದ ಸಾರಿಗೆ ಸಚಿವ ಲಕ್ಷ್ಮಣ ಸವದಿ

ಇದನ್ನೂ ಓದಿ: ಪ್ರಯಾಣಿಕರು ನೌಕರರ ಕೊರಳಪಟ್ಟಿ ಹಿಡಿದು ಒದೀಬೇಕು: ಬಿಜೆಪಿ ಶಾಸಕ ಬಿ.ಸಿ. ನಾಗೇಶ್ ಮಾತಾಡಿರುವ ಆಡಿಯೋ ವೈರಲ್

(KSRTC BMTC Bus Transport Workers Strike Karnataka Govt faces huge loss details here)

Published On - 10:32 pm, Wed, 7 April 21

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್