AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bus Strike: ಸಾರಿಗೆ ನೌಕರರ ಒಂದು ದಿನದ ಮುಷ್ಕರದಿಂದ ನಿಗಮಗಳಿಗೆ ಆದ ನಷ್ಟವೆಷ್ಟು ಗೊತ್ತಾ?

ಸಾರಿಗೆ ಸಿಬ್ಬಂದಿ ಮುಷ್ಕರದ ನಡುವೆಯೂ ಬೆಂಗಳೂರು ನಗರದಲ್ಲಿ ಕೆಲ ಬಸ್​ಗಳು ಸಂಚಾರ ನಡೆಸಿವೆ. ಬೆಂಗಳೂರಿನಲ್ಲಿ ಇಂದು 145 ಬಿಎಂಟಿಸಿ ಬಸ್​ಗಳು ಸಂಚಾರ ಮಾಡಿವೆ.

Bus Strike: ಸಾರಿಗೆ ನೌಕರರ ಒಂದು ದಿನದ ಮುಷ್ಕರದಿಂದ ನಿಗಮಗಳಿಗೆ ಆದ ನಷ್ಟವೆಷ್ಟು ಗೊತ್ತಾ?
ಸರ್ಕಾರಿ ಸಾರಿಗೆ ಸಂಸ್ಥೆಗಳ ಬಸ್​ಗಳು
TV9 Web
| Edited By: |

Updated on:Apr 05, 2022 | 12:43 PM

Share

ಬೆಂಗಳೂರು: ತಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸಾರಿಗೆ ನೌಕರರು ಇಂದು (ಏಪ್ರಿಲ್ 7) ಮುಷ್ಕರ ನಡೆಸಿದ್ದಾರೆ. ಇದರಿಂದಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ಸರ್ಕಾರಿ ಬಸ್​ಗಳು ಕಾರ್ಯನಿರ್ವಹಿಸಿಲ್ಲ. ಸಾರಿಗೆ ವಾಹನಗಳ ಮುಷ್ಕರದಿಂದ ಸರ್ಕಾರದ ಬೊಕ್ಕಸಕ್ಕೆ ಎಷ್ಟು ನಷ್ಟವಾಗಿದೆ ಎಂಬ ಲೆಕ್ಕಾಚಾರವನ್ನು ಕೆಎಸ್​ಆರ್​ಟಿಸಿ ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ.

ಸಾರಿಗೆ ಸಿಬ್ಬಂದಿ ಮುಷ್ಕರದಿಂದ ಇಂದು ಒಟ್ಟು 17 ಕೋಟಿ ನಷ್ಟ ಉಂಟಾಗಿದೆ. ಅಂದರೆ, ಸಾರಿಗೆ ಸಂಸ್ಥೆಯ ಒಟ್ಟು 4 ನಿಗಮಗಳಿಂದ 17 ಕೋಟಿ ನಷ್ಟ ಸಂಭವಿಸಿದೆ. ಅದರಲ್ಲಿ ಕೆಎಸ್​​ಆರ್​ಟಿಸಿಗೆ ಇಂದು 7 ಕೋಟಿ ರೂಪಾಯಿ ನಷ್ಟ ಉಂಟಾಗಿದ್ದರೆ, ಬಿಎಂಟಿಸಿಗೆ 3 ಕೋಟಿ ರೂಪಾಯಿ ನಷ್ಟವಾಗಿದೆ. ವಾಯವ್ಯ ಸಾರಿಗೆ ಸಂಸ್ಥೆಗೆ 3.5 ಕೋಟಿ ರೂಪಾಯಿ ನಷ್ಟವಾಗಿದ್ದು, ಈಶಾನ್ಯ ಸಾರಿಗೆ ಸಂಸ್ಥೆಗೆ ಕೂಡ 3.5 ಕೋಟಿ ರೂಪಾಯಿ ನಷ್ಟ ಉಂಟಾಗಿದೆ. ಈ ಬಗ್ಗೆ, ಕೆಎಸ್​ಆರ್​ಟಿಸಿ ಅಧಿಕಾರಿಗಳಿಂದ ಮಾಹಿತಿ ಬಿಡುಗಡೆ ಮಾಡಲಾಗಿದೆ.

ಸಾರಿಗೆ ಸಿಬ್ಬಂದಿ ಮುಷ್ಕರದ ನಡುವೆಯೂ ಬೆಂಗಳೂರು ನಗರದಲ್ಲಿ ಕೆಲ ಬಸ್​ಗಳು ಸಂಚಾರ ನಡೆಸಿವೆ. ಬೆಂಗಳೂರಿನಲ್ಲಿ ಇಂದು 145 ಬಿಎಂಟಿಸಿ ಬಸ್​ಗಳು ಸಂಚಾರ ಮಾಡಿವೆ. ಅಲ್ಲದೆ, ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ 1124 ಖಾಸಗಿ ಬಸ್​ಗಳು, 2 ಸಾವಿರ ಮ್ಯಾಕ್ಸಿ ಕ್ಯಾಬ್​ ಬಳಕೆ ಮಾಡಲಾಗಿದೆ. ಈ ಬಗ್ಗೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಾಹಿತಿ ನೀಡಿದೆ.

ಎಷ್ಟು ಬಸ್​ಗಳು ಸಂಚಾರ ನಡೆಸಿವೆ? ರಾಜ್ಯಾದ್ಯಂತ ಸಾರಿಗೆ ಸಂಸ್ಥೆ ನೌಕರರ ಮುಷ್ಕರ ಹಿನ್ನೆಲೆ, ಕೆಎಸ್​ಆರ್​ಟಿಸಿ ಇಂದಿನ ಬಸ್ ಸಂಚಾರದ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಅದರಂತೆ, ರಾತ್ರಿ ಪಾಳಿಯಲ್ಲಿ ಒಟ್ಟು 264 ಬಸ್​ ಕಾರ್ಯಾಚರಣೆಯಾಗಿದೆ. KSRTC ವ್ಯಾಪ್ತಿಯಲ್ಲಿ 3,152 ಖಾಸಗಿ ವಾಹನ ಸಂಚಾರ ಮಾಡಿವೆ. ವಾಯವ್ಯ ಸಾರಿಗೆ ವ್ಯಾಪ್ತಿಯಲ್ಲಿ 1,645 ಖಾಸಗಿ ವಾಹನ ಸಂಚಾರ ಮಾಡಿವೆ. ಈಶಾನ್ಯ ಸಾರಿಗೆ ವ್ಯಾಪ್ತಿ 3,234 ಖಾಸಗಿ ವಾಹನ ಸಂಚರಿಸಿವೆ.

ಬೆಂಗಳೂರಿನಿಂದ ಹೊರ ರಾಜ್ಯಗಳಿಗೆ ಬಸ್ ಸಂಚಾರ ವಿವರ ಈ ರೀತಿ ಇದೆ. ತಮಿಳುನಾಡಿಗೆ 300, ಆಂಧ್ರಪ್ರದೇಶಕ್ಕೆ 125, ಕೇರಳ 25, ತೆಲಂಗಾಣಕ್ಕೆ 20 ಬಸ್​ಗಳು ಕಾರ್ಯಾಚರಣೆ ನಡೆಸಿವೆ. ಅಲ್ಲದೆ, ಕೆಎಸ್​ಆರ್​ಟಿಸಿ ಬಸ್ ಮೇಲೆ ಕಲ್ಲುತೂರಾಟ ಹಿನ್ನೆಲೆ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ 1 ದೂರು ದಾಖಲಾದ ಘಟನೆಯೂ ನಡೆದಿದೆ. ಕೆಎಸ್​ಆರ್​ಟಿಸಿ ಕೇಂದ್ರ ಕಚೇರಿಯಿಂದ ಈ ಮಾಹಿತಿ ಬಿಡುಗಡೆ ಮಾಡಲಾಗಿದೆ.

ಮೆಟ್ರೋ ರೈಲು ಹೆಚ್ಚುವರಿ ಟ್ರಿಪ್ 6ನೇ ವೇತನ ಆಯೋಗ ಜಾರಿಗಾಗಿ ಸಾರಿಗೆ ಸಿಬ್ಬಂದಿ ಮುಷ್ಕರ ಮಾಡಿರುವ ಕಾರಣ ಬಸ್​ಗಳು ಇಂದು ಎಂದಿನಂತೆ ಸಂಚಾರ ನಡೆಸಿಲ್ಲ. ಹೀಗಾಗಿ ಬಹುತೇಕರು ಮೆಟ್ರೋ ರೈಲು ಅವಲಂಬಿಸಬೇಕಾಗಿ ಬರಬಹುದು ಎಂದು ಮೆಟ್ರೋ ರೈಲು ಟ್ರಿಪ್​ಗಳನ್ನು ಹೆಚ್ಚುವರಿಯಾಗಿ ನಡೆಸಲಾಗಿದೆ. ನಮ್ಮ ಮೆಟ್ರೋ ರೈಲಿನಲ್ಲಿ ಸಂಚರಿಸಿದ ಪ್ರಯಾಣಿಕರ ಮಾಹಿತಿ ಹೀಗಿದೆ.

ಹಸಿರು, ನೇರಳೆ ಮಾರ್ಗದಲ್ಲಿ 289 ಟ್ರಿಪ್​ ಮೆಟ್ರೋ ಸಂಚಾರ ಮಾಡಿದೆ. ಬೇರೆ ದಿನಗಳಲ್ಲಿ 247 ಟ್ರಿಪ್ ಸಂಚರಿಸುತ್ತಿದ್ದ ಮೆಟ್ರೋ ರೈಲು, ಇಂದು ಒಟ್ಟು 289 ಟ್ರಿಪ್ ಸಂಚಾರ ನಡೆಸಿದೆ. ಮೆಟ್ರೋದಲ್ಲಿ ಇಂದು ಅಂದಾಜು 1,27,876 ಜನರ ಸಂಚಾರ ಮಾಡಿದ್ದಾರೆ. ಈ ಬಗ್ಗೆ, ಬಿಎಂಆರ್​ಸಿಎಲ್​ನಿಂದ ಮಾಧ್ಯಮ ಪ್ರಕಟಣೆ ನೀಡಿದೆ.

ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರ: ಪರ್ಯಾಯ ವ್ಯವಸ್ಥೆ ಮಾಡಲಾಗಿದೆ, ಆತಂಕ ಬೇಡವೆಂದ ಸಾರಿಗೆ ಸಚಿವ ಲಕ್ಷ್ಮಣ ಸವದಿ

ಇದನ್ನೂ ಓದಿ: ಪ್ರಯಾಣಿಕರು ನೌಕರರ ಕೊರಳಪಟ್ಟಿ ಹಿಡಿದು ಒದೀಬೇಕು: ಬಿಜೆಪಿ ಶಾಸಕ ಬಿ.ಸಿ. ನಾಗೇಶ್ ಮಾತಾಡಿರುವ ಆಡಿಯೋ ವೈರಲ್

(KSRTC BMTC Bus Transport Workers Strike Karnataka Govt faces huge loss details here)

Published On - 10:32 pm, Wed, 7 April 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್