AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Something Serious.. ನಾಳೆ ಸಾರಿಗೆ ನೌಕರರಿಂದ ವಿಧಾನಸೌಧ ಚಲೋ, ಜಾಥಾದಲ್ಲಿ ನೌಕರರ ಹೆಂಡತಿ-ಮಕ್ಕಳೂ ಭಾಗಿ!

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ವಿಧಾನಸೌಧದವರೆಗೆ ನಾಳೆ ಬೆಳಗ್ಗೆ 10 ಗಂಟೆಗೆ ಸಾರಿಗೆ ನೌಕರರ ಜಾಥಾ ನಡೆಯಲಿದೆ.

Something Serious.. ನಾಳೆ ಸಾರಿಗೆ ನೌಕರರಿಂದ ವಿಧಾನಸೌಧ ಚಲೋ, ಜಾಥಾದಲ್ಲಿ ನೌಕರರ ಹೆಂಡತಿ-ಮಕ್ಕಳೂ ಭಾಗಿ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 07, 2022 | 5:32 PM

Share

ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರಾಗಿಸುವಂತೆ ಆಗ್ರಹಿಸಿ ನಾಳೆ ಸಾರಿಗೆ ನೌಕರರಿಂದ ಬೃಹತ್ ಕಾಲ್ನಡಿಗೆ ಜಾಥಾ ನಡೆಯಲಿದೆ. ‘ಸಾರಿಗೆ ನೌಕರರ ನಡಿಗೆ-ಸರ್ಕಾರಿ ನೌಕರರಾಗುವ ಕಡೆಗೆ’ ಎಂಬ ಘೋಷಣೆಯಡಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ವಿಧಾನಸೌಧದವರೆಗೆ ಬೆಳಗ್ಗೆ 10 ಗಂಟೆಗೆ ಜಾಥಾ ಹೊರಡಲಿದೆ.

ಜಾಥಾದಲ್ಲಿ ಯಾರೆಲ್ಲಾ ಭಾಗಿಯಾಗುತ್ತಾರೆ? ರಾಜ್ಯದಲ್ಲಿ ಸುಮಾರು 1 ಲಕ್ಷ 40 ಸಾವಿರ ಸಾರಿಗೆ ನೌಕರರು ಇದ್ದಾರೆ. KSRTC, BMTC, NEKRTC ಸಿಬ್ಬಂದಿ ನಾಳಿನ ಕಾಲ್ನಡಿಗೆ ಜಾಥಾದಲ್ಲಿ ಭಾಗಿಯಾಗಲಿದ್ದಾರೆ. ಜೊತೆಗೆ, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್, ನಂಜಾವಧೂತ ಸ್ವಾಮೀಜಿ, ಚಂದ್ರಶೇಖರ ಸ್ವಾಮೀಜಿ ಈ ಸಂದರ್ಭದಲ್ಲಿ ಸಾರಿಗೆ ನೌಕರರ ಜೊತೆಯಾಗಲಿದ್ದಾರೆ. ಈ ಬಗ್ಗೆ ಸಾರಿಗೆ ನೌಕರರ ಮುಖಂಡ ಆನಂದ್ ಟಿವಿ9ಗೆ ಹೇಳಿಕೆ ನೀಡಿದ್ದಾರೆ.

ಜಾಥಾದಲ್ಲಿ ಸಾರಿಗೆ ನೌಕರರ ಹೆಂಡತಿ ಮಕ್ಕಳೂ ಭಾಗಿ! ಕಾಲ್ನಡಿಗೆ ಜಾಥಾದಲ್ಲಿ ಸಾರಿಗೆ ನೌಕರರು ಅವರ ಹೆಂಡತಿ ಮಕ್ಕಳ ಸಹಿತ ಭಾಗವಹಿಸಲಿದ್ದಾರೆ. ಕನ್ನಡಪರ, ಹಿಂದೂಪರ ಸಂಘಟನೆಗಳು ಹಾಗೂ ವಕೀಲರ ಸಂಘ ಜಾಥಾಕ್ಕೆ ಬೆಂಬಲ ಸೂಚಿಸಿವೆ ಎಂದು ತಿಳಿದುಬಂದಿದೆ. ಸಾರಿಗೆ ನೌಕರರ ಬೃಹತ್ ಕಾಲ್ನಡಿಗೆ ಜಾಥಾದ ಕಾರಣ, ನಾಳೆ KSRTC, BMTC ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ವಿಧಾನಸೌಧ ಚಲೋ

ಸಾರಿಗೆ ನೌಕರರ ಪ್ರಮುಖ ಬೇಡಿಕೆಗಳೇನು? ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಬೇಕು. ಸರ್ಕಾರಿ ನೌಕರರಿಗೆ ನೀಡುವಂತಹ ಸವಲತ್ತುಗಳನ್ನು ಸಾರಿಗೆ ನೌಕರರಿಗೂ ನೀಡಬೇಕು. ಕೊರೊನಾ ಸಂದರ್ಭದಲ್ಲಿ ಮೃತಪಟ್ಟ ಸಾರಿಗೆ ನೌಕರರಿಗೆ, ಘೋಷಣೆ ಮಾಡಿದ್ದ 30 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂಬುದು ಸಾರಿಗೆ ನೌಕರರ ಪ್ರಮುಖ ಬೇಡಿಕೆಗಳಾಗಿವೆ.

ವಾಯವ್ಯ ಸಾರಿಗೆಯಿಂದ ಬಾರದ ಹಣ: ಬೇಸತ್ತ ನಿವೃತ್ತ ಚಾಲಕ ಆತ್ಮಹತ್ಯೆ

Published On - 11:11 am, Wed, 9 December 20

Follow Us
Web contact
Web contact

TV9 Kannada

Read More
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ