Sign In

By signing in or creating an account, you agree with Associated Broadcasting Company's Terms & Conditions and Privacy Policy.

Bus Strike: ಸಾರಿಗೆ ನೌಕರರ ವಿರುದ್ಧ ಫಿಟ್​ನೆಸ್ ಪರೀಕ್ಷೆ ಅಸ್ತ್ರ: ಇಂದು ಸರ್ಟಿಫಿಕೇಟ್​ ನೀಡದೇ ಇದ್ರೆ ಗೇಟ್​ಪಾಸ್

KSRTC BMTC Employees Protest: 55 ವರ್ಷ ಮೇಲ್ಪಟ್ಟ ಸಾರಿಗೆ ಸಿಬ್ಬಂದಿಗೆ ಫಿಟ್​ನೆಸ್ ಸರ್ಟಿಫಿಕೇಟ್ ಸಲ್ಲಿಸಲು ಬಿಎಂಟಿಸಿ ಸೂಚನೆ ನೀಡಿದ್ದು, ಸರ್ಟಿಫಿಕೇಟ್​ ಸಲ್ಲಿಕೆಗೆ ಇಂದೇ ಕೊನೆಯ ದಿನವಾಗಿದೆ. ಒಂದು ವೇಳೆ ಇಂದು ಸರ್ಟಿಫಿಕೇಟ್​ ನೀಡಲು ವಿಫಲವಾದ್ರೆ ಗೇಟ್​ಪಾಸ್ ಮಾಡುವುದಾಗಿ ಎಚ್ಚರಿಕೆಯನ್ನೂ ನೀಡಿದೆ.

Bus Strike: ಸಾರಿಗೆ ನೌಕರರ ವಿರುದ್ಧ ಫಿಟ್​ನೆಸ್ ಪರೀಕ್ಷೆ ಅಸ್ತ್ರ: ಇಂದು ಸರ್ಟಿಫಿಕೇಟ್​ ನೀಡದೇ ಇದ್ರೆ ಗೇಟ್​ಪಾಸ್
ಸಾಂದರ್ಭಿಕ ಚಿತ್ರ
Follow us
Skanda
| Updated By: ಆಯೇಷಾ ಬಾನು

Updated on: Apr 12, 2021 | 6:36 AM

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಅಂತ್ಯ ಕಾಣದೇ ಇರುವ ಹಿನ್ನೆಲೆ ಸರ್ಕಾರ ಅವರ ವಿರುದ್ಧ ಮತ್ತೊಂದು ಅಸ್ತ್ರ ಪ್ರಯೋಗಿಸಲು ಮುಂದಾಗಿದೆ. 55 ವರ್ಷ ಮೇಲ್ಪಟ್ಟ ಸಾರಿಗೆ ಸಿಬ್ಬಂದಿಗೆ ಫಿಟ್​ನೆಸ್ ಸರ್ಟಿಫಿಕೇಟ್ ಸಲ್ಲಿಸಲು ಬಿಎಂಟಿಸಿ ಸೂಚನೆ ನೀಡಿದ್ದು, ಸರ್ಟಿಫಿಕೇಟ್​ ಸಲ್ಲಿಕೆಗೆ ಇಂದೇ ಕೊನೆಯ ದಿನವಾಗಿದೆ. ಒಂದು ವೇಳೆ ಇಂದು ಸರ್ಟಿಫಿಕೇಟ್​ ನೀಡಲು ವಿಫಲವಾದ್ರೆ ಗೇಟ್​ಪಾಸ್ ಮಾಡುವುದಾಗಿ ಎಚ್ಚರಿಕೆಯನ್ನೂ ನೀಡಿದೆ. ಆ ಮೂಲಕ ಮುಷ್ಕರ ನಿರತ ಸಾರಿಗೆ ಸಿಬ್ಬಂದಿ ವಿರುದ್ಧ ಬಿಎಂಟಿಸಿ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲು ಸಜ್ಜಾಗಿದೆ.

ಇನ್ನೊಂದೆಡೆ, ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಪಟ್ಟು ಹಿಡಿದಿರುವ ಸಾರಿಗೆ ನೌಕರರು ಇಂದು ತಟ್ಟೆ, ಲೋಟ ಬಡಿಯುವ ಚಳವಳಿ ನಡೆಸುವುದಾಗಿ ತಿಳಿಸಿದ್ದಾರೆ. ರಾಜ್ಯಾದ್ಯಂತ ಬೆಳಗ್ಗೆ 11 ಗಂಟೆಯಿಂದ ಚಳವಳಿ ನಡೆಯಲಿದ್ದು, ಜಿಲ್ಲಾಧಿಕಾರಿ, ತಹಶೀಲ್ದಾರ್ ಕಚೇರಿಗಳ ಎದುರು ಚಳವಳಿ ನಡೆಸಲು ತೀರ್ಮಾನಿಸಲಾಗಿದೆ. ಅಲ್ಲದೇ ಇಂದು ಮಧ್ಯಾಹ್ನ 3ಗಂಟೆಗೆ ರಾಜ್ಯ ಮಟ್ಟದ ಸಾರಿಗೆ ಮುಖಂಡರ ಸಭೆ ಕರೆಯಲಾಗಿದ್ದು ಮುಂದಿನ ನಡೆಗಳ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ.

ಈ ಬಗ್ಗೆ ನಿನ್ನೆ ಹೇಳಿಕೆ ನೀಡಿದ್ದ ಕೋಡಿಹಳ್ಳಿ ಚಂದ್ರಶೇಖರ್, ಚಳವಳಿ ಯಶಸ್ವಿಯಾಗಿ ನಡೆಯಲಿದೆ. ಸಂಬಳ ತಡೆಹಿಡಿದಿರುವುದು ನೌಕರರಿಗೆ ಗೊತ್ತಿದೆ. ಆದರೂ ನೌಕರರು ಮುಷ್ಕರದಲ್ಲಿ ಭಾಗಿಯಾಗಿದ್ದಾರೆ. ಇದೀಗ ತಟ್ಟೆ ಲೋಟ ಬಡಿಯುವುದರ ಮೂಲಕ ವಿಭಿನ್ನ ಚಳುವಳಿ ನಡೆಸುತ್ತೇವೆ. ನೌಕರರಿಗೆ 6ನೇ ವೇತನ ಘೋಷಣೆ ಮಾಡಲು ಒತ್ತಾಯ ಮಾಡುತ್ತೇವೆ. ಸರ್ಕಾರ‌ ಮುಷ್ಕರ ದಮನ ಮಾಡಲು ಮುಂದಾಗಿದೆ. ಕೆಲ ಸಂಘಟನೆಗಳ‌ ಮೂಲಕ ಕೆಲ ಬಸ್ ಗಳು ಓಡಾಡುತ್ತಿವೆ. ಒಂದೆರಡು ಬಸ್ ಓಡಾಡಬಹುದು. ಒಂದೆರಡು ನೌಕರರು ಕರ್ತವ್ಯಕ್ಕೆ ಹಾಜರಾಗಿರಬಹುದು ಆದ್ರೆ ಮುಷ್ಕರ ನಿಂತಿಲ್ಲ. ರಾಜ್ಯಾದ್ಯಂತ ಮುಷ್ಕರ, ಪ್ರತಿಭಟನೆ ನಡೆಯುತ್ತೆ ಎಂದು ತಿಳಿಸಿದ್ದರು.

ಎರಡನೇ ದಿನದ ಕೊವಿಡ್​ ಕರ್ಫ್ಯೂ ಅಂತ್ಯ ರಾಜ್ಯದ ಕೆಲ ನಗರಗಳಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಹೇರಲಾಗಿರುವ ಕೊವಿಡ್​ ಕರ್ಫ್ಯೂವಿನ ಎರಡನೇ ದಿನ ಅಂತ್ಯವಾಗಿದೆ. ರಾತ್ರಿ 10 ಗಂಟೆಯಿಂದ ರಸ್ತೆಗಳಿಗೆ ಬ್ಯಾರಿಕೇಡ್ ಅಡ್ಡವಿಟ್ಟು ಸಂಚಾರ ನಿರ್ಬಂಧಿಸಿದ್ದ ಪೊಲೀಸರು ಮುಂಜಾನೆ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುವ ಸಲುವಾಗಿ ಬ್ಯಾರಿಕೇಡ್ ತೆರವುಗೊಳಿಸಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರನ್ನು ಎದುರು ಹಾಕಿಕೊಂಡವರು ಈವರೆಗೂ ಉಳಿದಿಲ್ಲ: ಐಎನ್​ಟಿಯುಸಿ ಪ್ರಧಾನ ಕಾರ್ಯದರ್ಶಿ ಬೋರ್ ಶೆಟ್ಟಿ 

ಸಾರಿಗೆ ನೌಕರರ ಮುಷ್ಕರ ನಿಲ್ಲಿಸದಿದ್ದರೆ ‘ಅಂತರ್‌ ನಿಗಮ ವರ್ಗಾವಣೆ’ ಪರಿಗಣಿಸದಿರಲು ತೀರ್ಮಾನ!

ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ