AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಮೃತಪಟ್ಟ ಸಾರಿಗೆ ನಿಗಮ ಸಿಬ್ಬಂದಿಗೆ ಸಿಕ್ಕಿಲ್ಲ ಪರಿಹಾರ: ಕೇಳಿ ಬಂದಿದೆ ಲಂಚದ ಆರೋಪ

ಪರಿಹಾರ ನೀಡುವುದಕ್ಕೂ ಲಂಚ ಕೇಳುತ್ತಿರುವ ಆರೋಪ ಕೇಳಿಬಂದಿದೆ. 30 ಲಕ್ಷ ರೂಪಾಯಿ ಪರಿಹಾರ ನೀಡಲು 5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಕೊರೊನಾದಿಂದ ಮೃತಪಟ್ಟ ಸಾರಿಗೆ ನಿಗಮ ಸಿಬ್ಬಂದಿಗೆ ಸಿಕ್ಕಿಲ್ಲ ಪರಿಹಾರ: ಕೇಳಿ ಬಂದಿದೆ ಲಂಚದ ಆರೋಪ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
TV9 Web
| Edited By: |

Updated on:Oct 03, 2021 | 2:52 PM

Share

ಬೆಂಗಳೂರು: ಕೊವಿಡ್ 19 ಸೋಂಕಿಗೆ ಬಲಿಯಾಗಿದ್ದ ಸಾರಿಗೆ ಸಿಬ್ಬಂದಿಗೆ ಪರಿಹಾರ ನೀಡಲು ಲಂಚ ಕೇಳುತ್ತಿರುವ ಆರೋಪ ಕೇಳಿಬಂದಿದೆ. ಇದುವರೆಗೆ ಕೊವಿಡ್ ಸೋಂಕಿನಿಂದ ಮೃತಪಟ್ಟ 213 ಸಿಬ್ಬಂದಿ ಪೈಕಿ ಕೇವಲ 7 ಜನರಿಗೆ ಮಾತ್ರ ಪರಿಹಾರ ನೀಡಲಾಗಿದೆ. ಪರಿಹಾರ ನೀಡುವುದಕ್ಕೂ ಲಂಚ ಕೇಳುತ್ತಿರುವ ಆರೋಪ ಕೇಳಿಬಂದಿದೆ. 30 ಲಕ್ಷ ರೂಪಾಯಿ ಪರಿಹಾರ ನೀಡಲು 5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಅಧಿಕಾರಿಗಳಿಗೆ ಲಂಚ ನೀಡಿದರೆ ಮಾತ್ರ ನಿಯಮ ಸಡಿಲಿಕೆ ಮಾಡುತ್ತಾರೆ. ಮನಸೋಇಚ್ಛೆ ನಿಯಮ ಮಾಡಿರುವ ಸಾರಿಗೆ ನಿಗಮಗಳು, ಪರಿಹಾರ ನೀಡಲು ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಹೇಳಲಾಗಿದೆ. ಕೊರೊನಾಗೆ ಬಲಿಯಾದ ಸಾರಿಗೆ ಸಿಬ್ಬಂದಿ ವರದಿ ನೀಡಿರಬೇಕು. ರಜೆ ಪಡೆದಿದ್ದ 5 ದಿನದೊಳಗೆ ವರದಿಯನ್ನ ಸಲ್ಲಿಸಿರಬೇಕು. ಕೊರೊನಾ ಬಿಟ್ಟು ಬೇರೆ ಆರೋಗ್ಯ ಸಮಸ್ಯೆ ಇರಬಾರದು. ಕೊರೊನಾಗೆ ಬಲಿಯಾಗಿದ್ದಾನೆಂದು ವರದಿ ನೀಡಿರಬೇಕು. ವೈದ್ಯರು ವರದಿ ನೀಡಬೇಕೆಂದು ಇಲಾಖೆ ನಿಯಮ ಮಾಡಿದೆ.

ಸಾರಿಗೆ ನೌಕರರು ಕೊರೊನಾದಿಂದ ಮೃತಪಟ್ಟರೆ ಮೂವತ್ತು ಲಕ್ಷ ರೂಪಾಯಿ ಪರಿಹಾರ ನೀಡುವ ಭರವಸೆಯನ್ನು ಸರ್ಕಾರ ನೀಡಿತ್ತು. ಕೆಎಸ್ಆರ್​ಟಿಸಿ ಬಿಎಂಟಿಸಿಯ ವಾಯುವ್ಯ ಕಲ್ಯಾಣ ಕರ್ನಾಟಕ ಸಾರಿಗೆಯ 213 ನೌಕರರು ಸೋಂಕಿನಿಂದ ಮೃತಪಟ್ಟಿದ್ರು. ಆದರೆ, ಇಲ್ಲಿಯವರೆಗೆ 7 ಜನರಿಗೆ ಮಾತ್ರ 30 ಲಕ್ಷ ರೂಪಾಯಿ ನೀಡಿದ್ದಾರೆ. ಇತ್ತ ಮನೆಯ ಯಜಮಾನನು ಇಲ್ಲದೆ, ಪರಿಹಾರವು ಇಲ್ಲದೆ ಕುಟುಂಬಸ್ಥರು ಕಷ್ಟ ಪಡುವಂತಾಗಿದೆ.

ಬಿಎಂಟಿಸಿಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 109 ಆಗಿದೆ. ಕೆಎಸ್​ಆರ್​ಟಿಸಿ ವಾಯುವ್ಯ ಮತ್ತು ಈಶಾನ್ಯ ಕರ್ನಾಟಕ ಸಾರಿಗೆಯಿಂದ 104 ನೌಕರರು ಮೃತಪಟ್ಟಿದ್ದರು. ಸಂಕಷ್ಟದ ಸಮಯದಲ್ಲಿ ಜನರ ಸೇವೆಗೆ ನಿಂತವರು ಸಾರಿಗೆ ನೌಕರರು, ಆದರೆ ಈಗ ರಾಜ್ಯ ಸರ್ಕಾರ ಅವರನ್ನು ನಡು ನೀರಲ್ಲಿ ಕೈಬಿಟ್ಟಿದೆ ಎಂಬ ಮಾತುಗಳು ಕೇಳಿಬಂದಿದೆ.

ಮೃತರಲ್ಲಿ ಕೆಲವರು ರಜೆಯ ಮೇಲಿದ್ದರು, ಮತ್ತೆ ಕೆಲವರಿಗೆ ಮೊದಲೇ ಅರೋಗ್ಯ ಸಮಸ್ಯೆಗಳಿತ್ತು. ಕೆಲವರಿಗೆ ಆಸ್ಪತ್ರೆಯ ವೈದ್ಯರಿಂದ ಯಾವುದೇ ಸರ್ಟಿಫಿಕೇಟ್ ಬಂದಿಲ್ಲ. ಈ ಹಿನ್ನೆಲೆಯಲ್ಲಿ ನಾವು ಯಾವುದೇ ಪರಿಹಾರ ಕೊಡಲು ಸಾಧ್ಯವಿಲ್ಲ ಎಂದು ಇಲಾಖೆಯವರು ಜಾರಿಕೊಳ್ಳುತ್ತಿದ್ದಾರೆ ಎಂಬ ಅಭಿಪ್ರಾಯ ಕೇಳಿಬಂದಿದೆ. ಕೊರೊನಾ ಕಠಿಣ ಕಾಲದಲ್ಲಿ ಕೆಲಸಕ್ಕೆ ಬರುವಂತೆ ಒತ್ತಡ ಹೇರಿದ್ದರು. ಆದರೆ ನೌಕರರಿಗೆ ಕೊರೊನಾ ಬಂದು ಸಾವನ್ನಪ್ಪುತ್ತಿರುವ ವೇಳೆ ಸರ್ಕಾರ ಅವರನ್ನು ಕೈಬಿಟ್ಟಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಕೊವಿಡ್​ನಿಂದ ಮೃತರ ಕುಟುಂಬದ ಸದಸ್ಯರಿಗೆ ಒಟ್ಟು 1.50 ಲಕ್ಷ ರೂ. ಪರಿಹಾರ: ಗೊಂದಲಗಳಿಗೆ ತೆರೆ

ಇದನ್ನೂ ಓದಿ: ವಜಾಗೊಂಡಿದ್ದ ಅಷ್ಟೂ ಸಾರಿಗೆ ನೌಕರರ ಮರು ನೇಮಕ; ಸಿಹಿ ಸುದ್ದಿ ಕೊಟ್ಟ ಶ್ರೀರಾಮುಲು

Published On - 2:49 pm, Sun, 3 October 21

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​