AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC, BMTC ಸಂಸ್ಥೆಗಳಿಗೆ ಉತ್ತಮ ಪದ್ಧತಿಗಳ ದಾಖಲೀಕರಣ ಪ್ರಶಸ್ತಿ ಪ್ರದಾನ

KSRTC, BMTC: ಕೆಎಸ್​ಆರ್​ಟಿಸಿಗೆ ಲಭಿಸಿರುವ ಪ್ರಶಸ್ತಿಯನ್ನು ನಿಗಮದ ಸಿಬ್ಬಂದಿ, ಸಾರ್ವಜನಿಕ ಪ್ರಯಾಣಿಕರಿಗೆ ಸಮರ್ಪಿಸಲಾಗಿದೆ ಎಂದು ಕೆಎಸ್​ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ತಿಳಿಸಿದ್ದಾರೆ.

KSRTC, BMTC ಸಂಸ್ಥೆಗಳಿಗೆ ಉತ್ತಮ ಪದ್ಧತಿಗಳ ದಾಖಲೀಕರಣ ಪ್ರಶಸ್ತಿ ಪ್ರದಾನ
KSRTC, BMTC ಸಂಸ್ಥೆಗಳಿಗೆ ಉತ್ತಮ ಪದ್ಧತಿಗಳ ದಾಖಲೀಕರಣ ಪ್ರಶಸ್ತಿ ಪ್ರದಾನ
TV9 Web
| Updated By: ganapathi bhat|

Updated on: Oct 11, 2021 | 8:31 PM

Share

ಬೆಂಗಳೂರು: ಸಿಮ್ಯಾಕ್ ಸಂಸ್ಥೆಯ ಉತ್ತಮ ಪದ್ಧತಿಗಳ ದಾಖಲೀಕರಣ ಬಿಡುಗಡೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿಗಮಕ್ಕೆ 2018-19 ಮತ್ತು 2019-20 ಕ್ಕೆ ಸಂಬಂಧಿಸಿದಂತೆ ಫ್ಲೈಬಸ್ ಸೇವೆ ಮತ್ತು ಸ್ವಚ್ಛತೆಯೇ ಸೇವೆ ಅಭಿಯಾನ ಉಪಕ್ರಮಗಳಿಗೆ ಪ್ರಶಸ್ತಿಗಳು ಲಭಿಸಿದೆ. ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸಿಟಿ ಮ್ಯಾನೇಜರ್ಸ್ ಅಸೋಸಿಯೇಷನ್ ಕರ್ನಾಟಕ ಪೌರಾಡಳಿತ ನಿರ್ದೇಶನಾಲಯದ ಉತ್ತಮ ಪದ್ಧತಿಗಳ ದಾಖಲೀಕರಣ ಪ್ರಶಸ್ತಿ ಲಭಿಸಿದೆ.

ಫ್ಲೈಬಸ್ ಸೇವೆ ಉಪಕ್ರಮಕ್ಕೆ 2018-19ನೇ ಸಾಲಿನಲ್ಲಿ ಹಾಗೂ ಸ್ವಚ್ಛತೆಯೇ ಸೇವೆ ಉಪಕ್ರಮಕ್ಕೆ 2019-20ನೇ ಸಾಲಿನಲ್ಲಿ ಕ್ರಮವಾಗಿ ಮೊದಲನೇ ಮತ್ತು ಎರಡನೇ ಬಹುಮಾನವನ್ನು ದೊರಕಿದೆ. ಇದು 1 ಲಕ್ಷ ಮತ್ತು 75,000 ರೂಪಾಯಿಗಳನ್ನು ಬಹುಮಾನ ಮೊತ್ತವನ್ನು ಹೊಂದಿದೆ. ಅದೇ ರೀತಿ, ಬಿಎಂಟಿಸಿ ಸಂಸ್ಥೆಯನ್ನು ಉತ್ತಮ ಪದ್ಧತಿಗಳ ದಾಖಲೀಕರಣ ವರ್ಗ ಅಡಿಯಲ್ಲಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಬಿಎಂಟಿಸಿಗೆ 2018-19ನೇ ಸಾಲಿನಲ್ಲಿ ಲೈನ್ ಡಿಪಾರ್ಟ್​ಮೆಂಟ್ ವರ್ಗ ಅಡಿಯಲ್ಲಿ ಸ್ಮಾರ್ಟ್ ಸ್ಟೂಡೆಂಟ್ ಪಾಸ್ ಉಪಕ್ರಮ ಅಳವಡಿಕೆಗಾಗಿ ಟ್ರೋಫಿ ಮತ್ತು ನಗದು ಬಹುಮಾನ ರೂಪಾಯಿ 75,000 ಮೊತ್ತ ಹೊಂದಿರುವಂತೆ ದ್ವಿತೀಯ ಬಹುಮಾನ ನೀಡಲಾಗಿದೆ. ಹಾಗೂ 2019-20 ನೇ ಸಾಲಿನಲ್ಲಿ ಲೈನ್ ಡಿಪಾರ್ಟ್​ಮೆಂಟ್ ವರ್ಗ ಅಡಿಯಲ್ಲಿ ಬಸ್ ಪ್ರಿಯಾರಿಟಿ ಲೇನ್ ಉಪಕ್ರಮ ಅಳವಡಿಕೆಗಾಗಿ ಟ್ರೋಫಿ ಮತ್ತು ನಗದು ಬಹುಮಾನ 1,00,000 ರೂಪಾಯಿ ಮೊತ್ತದ ಬಹುಮಾನ ಲಭಿಸಿದೆ.

ಕೆಎಸ್​ಆರ್​ಟಿಸಿಗೆ ಲಭಿಸಿರುವ ಪ್ರಶಸ್ತಿಯನ್ನು ನಿಗಮದ ಸಿಬ್ಬಂದಿ, ಸಾರ್ವಜನಿಕ ಪ್ರಯಾಣಿಕರಿಗೆ ಸಮರ್ಪಿಸಲಾಗಿದೆ ಎಂದು ಕೆಎಸ್​ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ತಿಳಿಸಿದ್ದಾರೆ. ಪ್ರಶಸ್ತಿಯನ್ನು ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜ್ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಅವರು ನೀಡಿದ್ದಾರೆ.

ಇದನ್ನೂ ಓದಿ: ನೀವೆ ನಮ್ಮ ಪಾಲಿಗೆ ಕೆಎಸ್ಆರ್​ಟಿಸಿ ಎಂಡಿ ಎಂದು ಸಿದ್ದರಾಮಯ್ಯಗೆ KSRTC ನೌಕರ ಗೋಗರೆದಿದ್ದು ಏಕೆ?

ಇದನ್ನೂ ಓದಿ: ಬೆಂಗಳೂರಲ್ಲಿ ಎಲೆಕ್ಟ್ರಿಕ್ ಬಸ್; ಬಿಎಂಟಿಸಿ ಖಾಸಗಿಕರಣದ ಮೊದಲ ಹೆಜ್ಜೆ? ಕಾರ್ಮಿಕರ ಆತಂಕ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!