AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಷ್ಕರ ನಿರತ 2443 ಬಿಎಂಟಿಸಿ ಸಿಬ್ಬಂದಿ ಅಮಾನತು; ಕಾರ್ಮಿಕ ಕಾಯ್ದೆ ಉಲ್ಲಂಘನೆ ಆರೋಪ

KSRTC BMTC Strike: ನೋಟಿಸ್ ನೀಡಿದರೂ ಕೆಲಸಕ್ಕೆ ಹಾಜರಾಗದಿದ್ದಕ್ಕೆ ಬಿಎಂಟಿಸಿ ಅಮಾನತು ಅಸ್ತ್ರ ಪ್ರಯೋಗಿಸಿದೆ. ಸಸ್ಪೆಂಡ್ ಆದವರ ಪೈಕಿ 1,974 ಮಂದಿ ಹಿರಿಯ ನೌಕರರು ಎಂಬುದು ಗಮಾರ್ಹ ಸಂಗತಿ.

ಮುಷ್ಕರ ನಿರತ 2443 ಬಿಎಂಟಿಸಿ ಸಿಬ್ಬಂದಿ ಅಮಾನತು; ಕಾರ್ಮಿಕ ಕಾಯ್ದೆ ಉಲ್ಲಂಘನೆ ಆರೋಪ
ಬಿಎಂಟಿಸಿ ಬಸ್ (ಸಾಂದರ್ಭಿಕ ಚಿತ್ರ)
Ghanashyam D M | ಡಿ.ಎಂ.ಘನಶ್ಯಾಮ
|

Updated on:Apr 17, 2021 | 11:07 PM

Share

ಬೆಂಗಳೂರು: ಮುಷ್ಕರ ನಿರತ 2,443 ಬಿಎಂಟಿಸಿ ಸಿಬ್ಬಂದಿಯನ್ನು ಆಡಳಿತ ಮಂಡಳಿ ಅಮಾನತುಗೊಳಿಸಿದೆ. ನೋಟಿಸ್ ನೀಡಿದರೂ ಕೆಲಸಕ್ಕೆ ಹಾಜರಾಗದಿದ್ದಕ್ಕೆ ಬಿಎಂಟಿಸಿ ಅಮಾನತು ಅಸ್ತ್ರ ಪ್ರಯೋಗಿಸಿದೆ. ಸಸ್ಪೆಂಡ್ ಆದವರ ಪೈಕಿ 1,974 ಮಂದಿ ಹಿರಿಯ ನೌಕರರು ಎಂಬುದು ಗಮನಾರ್ಹ ಸಂಗತಿ. ನೋಟಿಸ್‌ಗೆ ಉತ್ತರ ನೀಡಲು ಸೋಮವಾರದವರೆಗೆ ಗಡುವು ನೀಡಲಾಗಿದೆ. ನೋಟಿಸ್‌ಗೆ ಸೂಕ್ತ ಕಾರಣ ನೀಡದಿದ್ರೆ ಎಲ್ಲ ಸಿಬ್ಬಂದಿಯನ್ನು ಸೇವೆಯಿಂದ ವಜಾ ಮಾಡಲಾಗುವುದು ಎಂದು ಬಿಎಂಟಿಸಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಕೈಗಾರಿಕಾ ವಿವಾದ ಕಾಯ್ದೆ 22 (1) ಡಿ ಅಡಿಯಲ್ಲಿ ಕೈಗಾರಿಕಾ ವಿವಾದ ಸಂಧಾನ ಪ್ರಕ್ರೀಯೆಯಲ್ಲಿರುವಾಗ ಯಾವುದೇ ನೌಕರರು ಮುಷ್ಕರ ನಡೆಸುವಂತಿಲ್ಲ ಎಂಬ ನಿಯಮವಿದೆ. ಸಾರಿಗೆ ನೌಕರರ ಕೂಟ ಏಪ್ರಿಲ್ 7ರಂದು ಮುಷ್ಕರದ ನೋಟೀಸ್ ನೀಡಿತ್ತು. ಆದರೆ ಏಪ್ರಿಲ್ 6ರ ಮಧ್ಯಾಹ್ನದಿಂದಲೇ ನೌಕರರು ಮುಷ್ಕರದಲ್ಲಿ ಭಾಗಿಯಾಗಿದ್ದಾರೆ. ಇದು ಕಾರ್ಮಿಕ ಕಾಯ್ದೆಯ ಸ್ಪಷ್ಟ ಉಲ್ಲಂಘನೆ. ಹೀಗಾಗಿ ಸದ್ಯ ನಡೆಯುತ್ತಿರೋ ಮುಷ್ಕರ ಕಾನೂನುಬಾಹಿರ ಎಂದು ಬಿಎಂಟಿಸಿ ಘೋಷಿಸಿದೆ. ಕಾನೂನುಬಾಹಿರ ಮುಷ್ಕರದಲ್ಲಿ ಭಾಗಿಯಾದ ನೌಕರರು ತಕ್ಷಣ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಬಿಎಂಟಿಸಿ ಸೂಚಿಸಿದೆ. ಆದರೆ ನೌಕರರು ಮುಷ್ಕರ ಮುಂದುವರೆಸಿದ ಕಾರಣ ಇಂದು ಅಮಾನತು ಅಸ್ತ್ರ ಪ್ರಯೋಗಿಸಿದೆ.

ಮೆಜೆಸ್ಟಿಕ್​ನಲ್ಲಿ ಬಿಎಂಟಿಸಿ, ಖಾಸಗಿ ಬಸ್ ಚಾಲಕರ ನಡುವೆ ವಾಗ್ವಾದ ಬೆಂಗಳೂರಿನ ಮೆಜೆಸ್ಟಿಕ್ ಬಸ್​ ನಿಲ್ದಾಣದಲ್ಲಿ ಬಿಎಂಟಿಸಿ ಮತ್ತು ಖಾಸಗಿ ಬಸ್ ಚಾಲಕರ ನಡುವೆ ವಾಗ್ವಾದ ನಡೆದಿದೆ. ರಾಜ್ಯದಲ್ಲಿ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆಯಲ್ಲಿ ನಗರದಲ್ಲಿ ನಗರದಲ್ಲಿ ಖಾಸಗಿ ಬಸ್‌ಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಖಾಸಗಿ ಬಸ್‌ಗಳ ಮಧ್ಯೆ ಕೆಲ ಬಿಎಂಟಿಸಿ ಬಸ್​ಗಳು ಸಂಚರಿಸಿವೆ. ಬಿಎಂಟಿಸಿ ಬಸ್‌ಗಳಲ್ಲಿ ಹೆಚ್ಚಿನ ಜನ ಪ್ರಯಾಣಿಸುವ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್‌ ಅಡ್ಡಗಟ್ಟಿ ಖಾಸಗಿ ಬಸ್ ಚಾಲಕರು ಗಲಾಟೆ ಮಾಡಿದ್ದರು.

ಬಾಗಲಕೋಟೆಯಲ್ಲಿ 129 ಸಿಬ್ಬಂದಿಗೆ ನೋಟಿಸ್ ಬಾಬಾಗಲಕೋಟೆ ಜಿಲ್ಲೆಯಲ್ಲಿ ಸಾರಿಗೆ ನೌಕರರ ವಿರುದ್ಧ ಕಠಿಣ ಕ್ರಮ ಜರುಗಿಸಲು ಕೆಎಸ್​ಆರ್​ಟಿಸಿ ಮುಂದಾಗಿದೆ. ಕರ್ತವ್ಯಕ್ಕೆ ಗೈರಾದ 129 ಚಾಲಕ, ನಿರ್ವಾಹಕರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಈವರೆಗೆ 80 ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದ್ದು, ಒಬ್ಬರನ್ನು ವಜಾ ಮಾಡಲಾಗಿದೆ ಎಂದು ಬಾಗಲಕೋಟೆ ವಿಭಾಗೀಯ ಅಧಿಕಾರಿ ಬಸವರಾಜ್ ಅಮ್ಮನ್ನವರ ಮಾಹಿತಿ ನೀಡಿದ್ದಾರೆ.

ಬಾಗಲಕೋಟೆಯಲ್ಲಿ ಇಂದು 76 ಚಾಲಕ / ನಿರ್ವಾಹಕರು, 146 ಮೆಕ್ಯಾನಿಕಲ್ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾದರು. ಜಿಲ್ಲೆಯಲ್ಲಿಂದು 39 ಬಸ್​ಗಳು ಓಡಾಡಿದವು. ಹುನಗುಂದ ತಾಲೂಕಿನ ಧನ್ನೂರು ಬಳಿ ಬಸ್ ಮೇಲೆ ಕಲ್ಲು ಎಸೆಯಲಾಗಿದೆ. ಈ ಸಂಬಂಧ ಎಫ್ಐಆರ್ ದಾಖಲಿಸಲಾಗಿದೆ.

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಹಳ್ಳಿಮಾರನಹಳ್ಳಿ ಬಳಿ KSRTC ಬಸ್ ಮೇಲೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಕನಕಪುರದಿಂದ ರಾಮನಗರಕ್ಕೆ ತೆರಳುತ್ತಿದ್ದ KSRTC ಬಸ್ ಮೇಲೆ ಕಲ್ಲು ತೂರಲಾಗಿದೆ. ಘಟನೆಯಲ್ಲಿ ಆದ ನಷ್ಟ ಮತ್ತು ಗಾಯಾಳುಗಳ ಮಾಹಿತಿ ಲಭ್ಯವಾಗಿಲ್ಲ.

(KSRTC BMTC Strike Staff on Strike to Face Strict Action for Violating Workers Act)

ಇದನ್ನೂ ಓದಿ: KSRTC BMTC Strike: ಸಾರಿಗೆ ಸಿಬ್ಬಂದಿಯಿಂದ 60 ಬಸ್​ಗಳ ಮೇಲೆ ದಾಳಿ; ಪೊಲೀಸ್ ಕ್ರಮ ಗ್ಯಾರೆಂಟಿ ಎಂದ ಸಚಿವ ಲಕ್ಷ್ಮಣ ಸವದಿ

ಇದನ್ನೂ ಓದಿ: KSRTC BMTC Strike: ಲಾಕ್​ಡೌನ್ ಘೋಷಣೆಯ ಒಳಗೆ ಡ್ಯೂಟಿಗೆ ಬರದಿದ್ರೆ ವಜಾ ಸಾಧ್ಯತೆ; ಸಾರಿಗೆ ನೌಕರರಿಗೆ ಅಯನೂರು ಮಂಜುನಾಥ್ ಎಚ್ಚರಿಕೆ

Published On - 11:04 pm, Sat, 17 April 21

ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ