AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ನೌಕರರಿಂದ ಯುಗಾದಿ ದಿನವೇ ಭಿಕ್ಷಾಟನಾ ಚಳವಳಿ.. ಹಬ್ಬಕ್ಕೂ ಸಂಬಳ ನೀಡಿಲ್ಲವೆಂದು ಆಕ್ರೋಶ

ಯುಗಾದಿ ಹಬ್ಬಕ್ಕೆ ಸಂಬಳವಿಲ್ಲದ ಹಿನ್ನೆಲೆ ಸಿಟ್ಟಾಗಿರುವ ಸಾರಿಗೆ ನೌಕರರು ಇಂದು ರಾಜ್ಯಾದ್ಯಂತ ಭಿಕ್ಷೆ ಬೇಡುವ ಮೂಲಕ ವಿನೂತನ ಪ್ರತಿಭಟನೆಗೆ ಮುಂದಾಗಿದ್ದಾರೆ. ಇನ್ನೊಂದೆಡೆ ಕಾನೂನು ಹೋರಾಟಕ್ಕೂ ಮುಂದಾಗಿರುವ ಸಿಬ್ಬಂದಿ ಡಿಪೋ ಮ್ಯಾನೇಜರ್‌ಗಳ ವಿರುದ್ಧ ರಾಜ್ಯಾದ್ಯಂತ ಪೊಲೀಸ್‌ ಠಾಣೆಗಳಲ್ಲಿ ದೂರು ದಾಖಲಿಸಲು ನಿರ್ಧರಿಸಿದ್ದಾರೆ.

ಸಾರಿಗೆ ನೌಕರರಿಂದ ಯುಗಾದಿ ದಿನವೇ ಭಿಕ್ಷಾಟನಾ ಚಳವಳಿ.. ಹಬ್ಬಕ್ಕೂ ಸಂಬಳ ನೀಡಿಲ್ಲವೆಂದು ಆಕ್ರೋಶ
ಬಿಎಂಟಿಸಿ ಬಸ್​ (ಪ್ರಾತಿನಿಧಿಕ ಚಿತ್ರ)
Skanda
| Edited By: |

Updated on: Apr 13, 2021 | 7:30 AM

Share

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಸಾರಿಗೆ ನೌಕರರ ನಡುವಿನ ತಿಕ್ಕಾಟ ಉಲ್ಬಣಿಸುತ್ತಲೇ ಇದ್ದು, ಮುಷ್ಕರ ಏಳನೇ ದಿನಕ್ಕೆ ಕಾಲಿಟ್ಟಿದೆ. ಯುಗಾದಿ ಹಬ್ಬಕ್ಕೆ ಸಂಬಳವಿಲ್ಲದ ಹಿನ್ನೆಲೆ ಸಿಟ್ಟಾಗಿರುವ ಸಾರಿಗೆ ನೌಕರರು ಇಂದು ರಾಜ್ಯಾದ್ಯಂತ ಭಿಕ್ಷೆ ಬೇಡುವ ಮೂಲಕ ವಿನೂತನ ಪ್ರತಿಭಟನೆಗೆ ಮುಂದಾಗಿದ್ದಾರೆ. ಇನ್ನೊಂದೆಡೆ ಕಾನೂನು ಹೋರಾಟಕ್ಕೂ ಮುಂದಾಗಿರುವ ಸಿಬ್ಬಂದಿ ಡಿಪೋ ಮ್ಯಾನೇಜರ್‌ಗಳ ವಿರುದ್ಧ ರಾಜ್ಯಾದ್ಯಂತ ಪೊಲೀಸ್‌ ಠಾಣೆಗಳಲ್ಲಿ ದೂರು ದಾಖಲಿಸಲು ನಿರ್ಧರಿಸಿದ್ದಾರೆ. ಆ ಮೂಲಕ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುವತ್ತ ಹೆಜ್ಜೆ ಹಾಕುತ್ತಿದ್ದಾರೆ.

ಬೆಂಗಳೂರಿನ ಪ್ರಮುಖ ಜಂಕ್ಷನ್‌ಗಳಲ್ಲಿ ತಟ್ಟೆ ಲೋಟ ಹಿಡಿದು ಕುಟುಂಬದ ಜೊತೆ ಭಿಕ್ಷಾಟನೆ ಮಾಡಲು ನಿರ್ಧರಿಸಿರುವ ನೌಕರರು ಯಾವುದೇ ಕಾರಣಕ್ಕೂ ಕರ್ತವ್ಯಕ್ಕೆ ಮರಳುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಕರ್ತವ್ಯಕ್ಕೆ ಹಾಜರಾಗಿರುವ ಹಲವು ನೌಕರರಿಗೆ ನಿನ್ನೆ ಸಂಬಳ ಬಿಡುಗಡೆ ಮಾಡಲಾಗಿದ್ದು, ಕೆಲಸಕ್ಕೆ ಹಾಜರಾಗದ ಕೆಲವರಿಗೆ ಸಂಬಳ ನೀಡಿಲ್ಲ. ಹೀಗಾಗಿ ಸಂಬಳ ಅವರು ಯುಗಾದಿ ಹಬ್ಬದ ದಿನವಾದ ಇಂದು ಬೀದಿಗಿಳಿಯಲಿದ್ದಾರೆ.

ಈ ಎಲ್ಲಾ ಪ್ರತಿಭಟನೆ ಕುರಿತಂತೆ ಮಾತನಾಡಿರುವ ಕೋಡಿಹಳ್ಳಿ ಚಂದ್ರಶೇಖರ್, ಇನ್ನು ಮುಂದೆ ನಡೆಯುವ ಎಲ್ಲಾ ಚಳುವಳಿಗಳಲ್ಲೂ ಕುಟುಂಬಸ್ಥರು ಭಾಗಿಯಾಗಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಸದಾಶಿವನಗರದಲ್ಲಿ ಭಿಕ್ಷೆ ಬೇಡುವ ಮೂಲಕ ವಿಭಿನ್ನ ಚಳವಳಿ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಅಲ್ಲದೇ ಸಂಬಳ ಕೊಡದ ಕುರಿತು ಆಕ್ರೋಶ ಹೊರಹಾಕಿರುವ ಕೋಡಿಹಳ್ಳಿ ಚಂದ್ರಶೇಖರ್ ಹಾಗೂ ವಕೀಲ ಬಾಲನ್, ವೇತನ ಕೊಡದಿದ್ರೆ ಅದು ಕಾನೂನುಬಾಹಿರ. ಈ ಸಂಬಂಧ ಸಾರಿಗೆ ನೌಕರರು ಇಂದು ರಾಜ್ಯಾದ್ಯಂತ ಪೊಲೀಸ್ ಠಾಣೆಗಳಲ್ಲಿ ದೂರು ಕೊಡಲಿದ್ದಾರೆ ಎನ್ನುವುದನ್ನೂ ತಿಳಿಸಿದ್ದಾರೆ.

ಈ ಮಧ್ಯೆ ನಿನ್ನೆ ಕೂಡ ಬಿಎಂಟಿಸಿಯ 61 ಪ್ರೊಬೆಷನರಿ, 63 ತರಬೇತಿ ನೌಕರರನ್ನು ವಜಾ ಮಾಡಲಾಗಿದ್ದು, ಕಳೆದ 7 ದಿನಗಳಲ್ಲಿ ಒಟ್ಟು 260 ಕ್ಕೂ ಹೆಚ್ಚು ತರಬೇತಿ ನೌಕರರನ್ನ ವಜಾಗೊಳಿಸಲಾಗಿದೆ. ಅತ್ತ ಸರ್ಕಾರ ಆರನೇ ವೇತನ ಆಯೋಗ ಜಾರಿ ಪ್ರಶ್ನೆಯೇ ಇಲ್ಲ ಎನ್ನುತ್ತಿದ್ದು ಇತ್ತ ಸಾರಿಗೆ ನೌಕರರು ಬೇಡಿಕೆ ಈಡೇರುವವರೆಗೂ ಬಸ್ ಹತ್ತಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: ಸಂಬಳ ಆಗದ ಸಾರಿಗೆ ನೌಕರರಿಂದ ನಾಳೆ ಡಿಪೋ ಮ್ಯಾನೇಜರ್​ಗಳ ವಿರುದ್ಧ ದೂರು: ವಕೀಲ ಬಾಲನ್ 

ಕರ್ತವ್ಯಕ್ಕೆ ಹಾಜರಾದ 10,430 ಸಿಬ್ಬಂದಿಗೆ ಮಾರ್ಚ್ ತಿಂಗಳ ಸಂಬಳ ಪಾವತಿಸಿದ ಸಾರಿಗೆ ಸಂಸ್ಥೆ

Follow Us
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ